‘ಕಾನೂನು ಹೋರಾಟ ಮಾಡುತ್ತಿದ್ದೇವೆ. ಅಣೆಕಟ್ಟು ನಿರ್ಮಾಣಕ್ಕೆ ಅಡ್ಡಿಪಡಿಸಬಾರದೆಂದು ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಹೇಳಿದೆ. ಮೇಕೆದಾಟು ಯೋಜನೆಯಿಂದ ಮುಳುಗಡೆಯಾಗುವ ಅರಣ್ಯ ಪ್ರದೇಶಗಳ ಬದಲಿಗೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗುವುದು. ಇದಕ್ಕಾಗಿ ಚಾಮರಾಜನಗರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ ಭಾಗದ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಮರಗಳ ಎಣಿಕೆ ಕಾರ್ಯಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಡಿಪಿಆರ್ ಬಗ್ಗೆ ಚರ್ಚೆ ನಡೆಯುತ್ತಿದೆ’ ಎಂದು ತಿಳಿಸಿದರು.