ಪಕ್ಷದಲ್ಲಿ ಗೊಂದಲ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಶ್ರೀರಾಮುಲು ಅವರೊಂದಿಗೆ ನಾನು ಹಾಗೂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದೇವೆ
ಆರ್.ಅಶೋಕ, ವಿರೋಧ ಪಕ್ಷದ ನಾಯಕ
ಬಿಜೆಪಿಯಲ್ಲಿ ಪ್ರಜಾಪ್ರಭುತ್ವವಿದೆ ಹೊರತು ಭಿನ್ನಮತವಿಲ್ಲ. ನಮ್ಮ ಪಕ್ಷ ಮನೆ ಇದ್ದಂತೆ. ಅಣ್ಣ ತಮ್ಮಂದಿರ ಜಗಳ ಸಹಜ. ಒಳ ಜಗಳವನ್ನು ಹಿರಿಯರು ಚರ್ಚಿಸಿ, ಬಗೆಹರಿಸುವರು
ಬಸವರಾಜ ಬೊಮ್ಮಾಯಿ, ಸಂಸದ
ರಾಜ್ಯ ಘಟಕದೊಳಗಿನ ಬೆಳವಣಿಗೆಗಳು ನನಗೂ, ಕಾರ್ಯಕರ್ತರಿಗೂ ಸಂತೋಷ ತಂದಿಲ್ಲ. ಯಡಿಯೂರಪ್ಪ ಅವರಂತಹ ಹೋರಾಟಗಾರರ ಬಗ್ಗೆ ಕೆಲವು ಮುಖಂಡರು ಅಪಮಾನ ಮಾಡುವ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಕಾರ್ಯಕರ್ತರು ನೊಂದಿದ್ದಾರೆ