<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರ 10 ವರ್ಷಗಳ ಹಿಂದೆ ನಡೆಸಿದ ಜಾತಿಗಣತಿಯ ವರದಿಯನ್ನು ಮತ್ತೆ –ಮತ್ತೆ ಪರಿಶೀಲನೆಗೆ ನೀಡಲಾಗುತ್ತಿದೆ. ಆ ವರದಿ ದೋಷಪೂರಿತವಾಗಿದೆ. ಅದನ್ನು ಬಿಡಿ. ರಾಜ್ಯ ಸರ್ಕಾರದಲ್ಲಿ ದುಡ್ಡಿಗೇನೂ ಬರವಿಲ್ಲ. ಗಂಜಿ ಕೇಂದ್ರಗಳಿಗಾಗಿ ಬಾಯಿಬಿಟ್ಟುಕೊಂಡು ಹಲವರು ಕಾದಿದ್ದಾರೆ. ಅವರನ್ನು ಸೇರಿಸಿಕೊಂಡು ಸಮಿತಿ ರಚಿಸಿ, ಅವರಿಂದ ಹೊಸದಾಗಿ ಗಣತಿ ಮಾಡಿಸಿ’ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು. </p><p>‘ಜಾತಿಗಣತಿ ವರದಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುತ್ತಲೇ ಇರುತ್ತಾರೆ. ಆದರೆ, ಕಾಂತರಾಜ ವರದಿ ಸರ್ಕಾರದ ಕೈ ಸೇರಿ ಎಷ್ಟು ವರ್ಷವಾಯಿತು? ಜಾತಿಗಳ ಸಮಸ್ಯೆಗಳಿಗೆ ಇವರು ಪರಿಹಾರ ಕೊಟ್ಟಿದ್ದಾರೆಯೇ? ಸಿದ್ದರಾಮಯ್ಯ ಏಳು ವರ್ಷಗಳವರೆಗೆ ಮುಖ್ಯಮಂತ್ರಿ ಆಗಿದ್ದರು. ಹೀಗಿದ್ದರೂ ಏನೂ ಮಾಡಿಲ್ಲ’ ಎಂದು ದೂರಿದರು.</p><p>‘ಈ ಕೆಲಸ ಮಾಡಲು ಸಾಧ್ಯವಾಗದೇ ಇದ್ದರೆ, ಸ್ವಲ್ಪ ಕಾಯಿರಿ. ಕೇಂದ್ರ ಸರ್ಕಾರವೇ ಜಾತಿಗಣತಿ ನಡೆಸಲು ತೀರ್ಮಾನಿಸಿದೆ. ಅದು ಬರುವವರೆಗೂ ಕಾಯಿರಿ’ ಎಂದರು.</p><p><strong>ಸಂಪುಟ ಸಭೆಯಲ್ಲಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ</strong></p><p>ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಜಾತಿ ಗಣತಿ ವರದಿಯ ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. ₹160 ಕೋಟಿ ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು,<br>ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಭಾನುವಾರ ಇಲ್ಲಿ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರ 10 ವರ್ಷಗಳ ಹಿಂದೆ ನಡೆಸಿದ ಜಾತಿಗಣತಿಯ ವರದಿಯನ್ನು ಮತ್ತೆ –ಮತ್ತೆ ಪರಿಶೀಲನೆಗೆ ನೀಡಲಾಗುತ್ತಿದೆ. ಆ ವರದಿ ದೋಷಪೂರಿತವಾಗಿದೆ. ಅದನ್ನು ಬಿಡಿ. ರಾಜ್ಯ ಸರ್ಕಾರದಲ್ಲಿ ದುಡ್ಡಿಗೇನೂ ಬರವಿಲ್ಲ. ಗಂಜಿ ಕೇಂದ್ರಗಳಿಗಾಗಿ ಬಾಯಿಬಿಟ್ಟುಕೊಂಡು ಹಲವರು ಕಾದಿದ್ದಾರೆ. ಅವರನ್ನು ಸೇರಿಸಿಕೊಂಡು ಸಮಿತಿ ರಚಿಸಿ, ಅವರಿಂದ ಹೊಸದಾಗಿ ಗಣತಿ ಮಾಡಿಸಿ’ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು. </p><p>‘ಜಾತಿಗಣತಿ ವರದಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುತ್ತಲೇ ಇರುತ್ತಾರೆ. ಆದರೆ, ಕಾಂತರಾಜ ವರದಿ ಸರ್ಕಾರದ ಕೈ ಸೇರಿ ಎಷ್ಟು ವರ್ಷವಾಯಿತು? ಜಾತಿಗಳ ಸಮಸ್ಯೆಗಳಿಗೆ ಇವರು ಪರಿಹಾರ ಕೊಟ್ಟಿದ್ದಾರೆಯೇ? ಸಿದ್ದರಾಮಯ್ಯ ಏಳು ವರ್ಷಗಳವರೆಗೆ ಮುಖ್ಯಮಂತ್ರಿ ಆಗಿದ್ದರು. ಹೀಗಿದ್ದರೂ ಏನೂ ಮಾಡಿಲ್ಲ’ ಎಂದು ದೂರಿದರು.</p><p>‘ಈ ಕೆಲಸ ಮಾಡಲು ಸಾಧ್ಯವಾಗದೇ ಇದ್ದರೆ, ಸ್ವಲ್ಪ ಕಾಯಿರಿ. ಕೇಂದ್ರ ಸರ್ಕಾರವೇ ಜಾತಿಗಣತಿ ನಡೆಸಲು ತೀರ್ಮಾನಿಸಿದೆ. ಅದು ಬರುವವರೆಗೂ ಕಾಯಿರಿ’ ಎಂದರು.</p><p><strong>ಸಂಪುಟ ಸಭೆಯಲ್ಲಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ</strong></p><p>ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಜಾತಿ ಗಣತಿ ವರದಿಯ ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. ₹160 ಕೋಟಿ ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು,<br>ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಭಾನುವಾರ ಇಲ್ಲಿ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>