<p><strong>ಬೆಂಗಳೂರು:</strong> 'ಯಾವ ನಾಯಕತ್ವ ಬದಲಾವಣೆಯೂ ಇಲ್ಲ. ಸಿದ್ದರಾಮಯ್ಯನವರ ಕೈ ಬಲಪಡಿಸುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, 'ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ನೋಟಿಸ್ ಕೊಡುತ್ತೇನೆ' ಎಂದರು.</p>.<p>'ಬಿ.ಆರ್ ಪಾಟೀಲ, ಬಾಲಕೃಷ್ಣ ಯಾರೇ ಆಗಿರಲಿ. ಇನ್ಮುಂದೆ ಯಾರೂ ಮಾಧ್ಯಮಗಳ ಮುಂದೆ ಹೋಗಬಾರದು' ಎಂದರು.</p>.<p>ಶಾಸಕರ ಜೊತೆ ಪಕ್ಷ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರತ್ಯೇಕ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದ ಶಿವಕುಮಾರ್ , 'ಯಾರಿಗೂ ಗಾಬರಿ ಬೇಡ. ಪಕ್ಷ ಸಂಘಟನೆ ವಿಚಾರಕ್ಕೆ ಸಭೆ ಮಾಡುತ್ತಿದ್ದಾರೆ' ಎಂದರು.</p>.<p>'ಇಡೀ ದೇಶದಾದ್ಯಂತ ಬ್ಲಾಕ್ ಕಾಂಗ್ರೆಸ್ ನಲ್ಲಿ ಬದಲಾವಣೆ ಆಗುತ್ತಿದೆ. ಜಿಲ್ಲಾ ಕಾಂಗ್ರೆಸ್ ಘಟಕದಲ್ಲೂ ಬದಲಾವಣೆ ಆಗುತ್ತಿದೆ. ಖರ್ಗೆಯವರು ಬೆಳಗಾವಿಯಲ್ಲಿ ಈ ವಿಚಾರ ಹೇಳಿದ್ದಾರೆ. ಇದು ಸಂಘಟನೆಯ ವರ್ಷ ಎಂದು ಅವರು ಹೇಳಿದ್ದಾರೆ' ಎಂದರು.</p>.<p>'ಯಾವೆಲ್ಲ ಬದಲಾವಣೆ ತರಬೇಕು. ಎಲ್ಲಿ ಏನು, ಯಾವ ಬಿಲ್ಡಿಂಗ್ ಕಟ್ಟಬೇಕು ಎಂದು ಎಐಸಿಸಿ ನಾಯಕರು ಅಭಿಪ್ರಾಯ ಸಂಗ್ರಹಿಸ್ತಿದ್ದಾರೆ. ಇದು ಪಕ್ಷ ಸಂಘಟನೆ ವಿಚಾರವಾಗಿ ಸಭೆ ಅಷ್ಟೇ' ಎಂದರು.</p>.ಬಂಡೆ ರೀತಿ ನಮ್ಮ ಸರ್ಕಾರ ಭದ್ರ: ಸಿದ್ದರಾಮಯ್ಯ, ಡಿಕೆಶಿ ಒಗ್ಗಟ್ಟು ಪ್ರದರ್ಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಯಾವ ನಾಯಕತ್ವ ಬದಲಾವಣೆಯೂ ಇಲ್ಲ. ಸಿದ್ದರಾಮಯ್ಯನವರ ಕೈ ಬಲಪಡಿಸುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, 'ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ನೋಟಿಸ್ ಕೊಡುತ್ತೇನೆ' ಎಂದರು.</p>.<p>'ಬಿ.ಆರ್ ಪಾಟೀಲ, ಬಾಲಕೃಷ್ಣ ಯಾರೇ ಆಗಿರಲಿ. ಇನ್ಮುಂದೆ ಯಾರೂ ಮಾಧ್ಯಮಗಳ ಮುಂದೆ ಹೋಗಬಾರದು' ಎಂದರು.</p>.<p>ಶಾಸಕರ ಜೊತೆ ಪಕ್ಷ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರತ್ಯೇಕ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದ ಶಿವಕುಮಾರ್ , 'ಯಾರಿಗೂ ಗಾಬರಿ ಬೇಡ. ಪಕ್ಷ ಸಂಘಟನೆ ವಿಚಾರಕ್ಕೆ ಸಭೆ ಮಾಡುತ್ತಿದ್ದಾರೆ' ಎಂದರು.</p>.<p>'ಇಡೀ ದೇಶದಾದ್ಯಂತ ಬ್ಲಾಕ್ ಕಾಂಗ್ರೆಸ್ ನಲ್ಲಿ ಬದಲಾವಣೆ ಆಗುತ್ತಿದೆ. ಜಿಲ್ಲಾ ಕಾಂಗ್ರೆಸ್ ಘಟಕದಲ್ಲೂ ಬದಲಾವಣೆ ಆಗುತ್ತಿದೆ. ಖರ್ಗೆಯವರು ಬೆಳಗಾವಿಯಲ್ಲಿ ಈ ವಿಚಾರ ಹೇಳಿದ್ದಾರೆ. ಇದು ಸಂಘಟನೆಯ ವರ್ಷ ಎಂದು ಅವರು ಹೇಳಿದ್ದಾರೆ' ಎಂದರು.</p>.<p>'ಯಾವೆಲ್ಲ ಬದಲಾವಣೆ ತರಬೇಕು. ಎಲ್ಲಿ ಏನು, ಯಾವ ಬಿಲ್ಡಿಂಗ್ ಕಟ್ಟಬೇಕು ಎಂದು ಎಐಸಿಸಿ ನಾಯಕರು ಅಭಿಪ್ರಾಯ ಸಂಗ್ರಹಿಸ್ತಿದ್ದಾರೆ. ಇದು ಪಕ್ಷ ಸಂಘಟನೆ ವಿಚಾರವಾಗಿ ಸಭೆ ಅಷ್ಟೇ' ಎಂದರು.</p>.ಬಂಡೆ ರೀತಿ ನಮ್ಮ ಸರ್ಕಾರ ಭದ್ರ: ಸಿದ್ದರಾಮಯ್ಯ, ಡಿಕೆಶಿ ಒಗ್ಗಟ್ಟು ಪ್ರದರ್ಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>