<p><strong>ಚಿಕ್ಕಬಳ್ಳಾಪುರ:</strong> ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಖಂಡಿಸಿ ಗೌರಿಬಿದನೂರು ತಾಲ್ಲೂಕಿನ ಅಲೀಪುರದಲ್ಲಿನ ಶಿಯಾ ಮುಸ್ಲಿಮರು ಪ್ರತಿಭಟನಾ ಮೆರವಣಿಗೆ ನಡೆಸಲು ಸಜ್ಜಾಗಿದ್ದಾರೆ. </p><p>ಬೆಳ್ಳಿಗ್ಗೆಯೇ ದೊಡ್ಡ ಸಂಖ್ಯೆಯಲ್ಲಿ ಸೇರಿದ ಶಿಯಾ ಮುಸ್ಲಿಮರು ಅಮೆರಿಕ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಖಮೇನಿ ಅವರ ಅವರ ಫೋಟೊ ಹಿಡಿದು ಕಣ್ಣೀರು ಹಾಕಿದರು. ಅಲೀಪುರದಲ್ಲಿ ಅಘೋಷಿತ ಬಂದ್ ನಿರ್ಮಾಣವಾಗಿದೆ.</p><p>ಅಂಜುಮನ್ ಎ ಜಾಫರಿಯಾ ಸಮಿತಿ ನೇತೃತ್ವದಲ್ಲಿ ಮಧ್ಯಾಹ್ನ 3ಕ್ಕೆ ಪ್ರತಿಭಟನಾ ಮೆರವಣಿಗೆೆಗೆ ಕರೆ ನೀಡಲಾಗಿದೆ. ಈಗಾಗಲೇ ಜನರು ಗುಂಪು ಗೂಡುತ್ತಿದ್ದಾರೆ. </p><p>ಅಯಾತೊಲ್ಲಾ ಅಲಿ ಖಮೇನಿ 1986ರಲ್ಲಿ ಪುಟ್ಟಹಳ್ಳಿ ಎನಿಸಿದ್ದ ಅಲೀಪುರಕ್ಕೆ ಭೇಟಿ ನೀಡಿದ್ದರು. ಅವರ ಧಾರ್ಮಿಕ ದೇಶಗಳನ್ನು ಅಲೀಪುರದಲ್ಲಿ ಚಾಚೂತಪ್ಪಿಸದೆ ಪಾಲಿಸಲಾಗುತ್ತಿತ್ತು.</p>.<p><strong>ಬೆಳ್ಳಿಕುಂಟೆ ಅಲೀಪುರವಾಯಿತು:</strong> ಅಲೀಪುರದ ಮೂಲ ಹೆಸರು ಬೆಳ್ಳಿಕುಂಟೆ. ಈ ಹಿಂದೆ ಬಿಜಾಪುರ ಆದಿಲ್ಶಾಹಿಗಳ ಅವಧಿಯಲ್ಲಿ ಅಲ್ಲಿನ ಜನರು ಇಲ್ಲಿಗೆ ವಲಸೆ ಬಂದರು. ಮುಸ್ಲಿಮರ ಸಂಖ್ಯೆ ಹೆಚ್ಚಿದಂತೆ ಬೆಳ್ಳುಕುಂಟೆ ಅಲೀಪುರವಾಗಿ ರೂಪಾಂತರವಾಯಿತು.</p><p>ಗ್ರಾಮದ ಬಹುತೇಕ ಮಂದಿ ಇರಾನ್, ಅರಬ್ ದೇಶಗಳು ಸೇರಿದಂತೆ ಜಗತ್ತಿನ ವಿವಿಧ ದೇಶಗಳ ಜೊತೆ ವ್ಯಾಪಾರ, ವಹಿವಾಟು, ಶಿಕ್ಷಣದ ಕಾರಣಕ್ಕೆ ಸಂಪರ್ಕ ಹೊಂದಿದ್ದಾರೆ. ಗ್ರಾಮದಲ್ಲಿ ಅಂಜುಮನ್ ಜಾಫರಿಯಾ ಸಮಿತಿ ಪ್ರತ್ಯೇಕವಾದ ಕೇಬಲ್ ಚಾನಲ್ ಹೊಂದಿದೆ. ‘ಅಲಿ ಟಿವಿ’ ಹೆಸರಿನ ಈ ಚಾನಲ್ನಲ್ಲಿ ಮಸೀದಿಯ ಪ್ರಾರ್ಥನೆಗಳು, ಕುರ್ಆನ್ ಪಠಣ ಧಾರ್ಮಿಕ ವಿಚಾರಗಳು ಪ್ರಸಾರವಾಗುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಖಂಡಿಸಿ ಗೌರಿಬಿದನೂರು ತಾಲ್ಲೂಕಿನ ಅಲೀಪುರದಲ್ಲಿನ ಶಿಯಾ ಮುಸ್ಲಿಮರು ಪ್ರತಿಭಟನಾ ಮೆರವಣಿಗೆ ನಡೆಸಲು ಸಜ್ಜಾಗಿದ್ದಾರೆ. </p><p>ಬೆಳ್ಳಿಗ್ಗೆಯೇ ದೊಡ್ಡ ಸಂಖ್ಯೆಯಲ್ಲಿ ಸೇರಿದ ಶಿಯಾ ಮುಸ್ಲಿಮರು ಅಮೆರಿಕ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಖಮೇನಿ ಅವರ ಅವರ ಫೋಟೊ ಹಿಡಿದು ಕಣ್ಣೀರು ಹಾಕಿದರು. ಅಲೀಪುರದಲ್ಲಿ ಅಘೋಷಿತ ಬಂದ್ ನಿರ್ಮಾಣವಾಗಿದೆ.</p><p>ಅಂಜುಮನ್ ಎ ಜಾಫರಿಯಾ ಸಮಿತಿ ನೇತೃತ್ವದಲ್ಲಿ ಮಧ್ಯಾಹ್ನ 3ಕ್ಕೆ ಪ್ರತಿಭಟನಾ ಮೆರವಣಿಗೆೆಗೆ ಕರೆ ನೀಡಲಾಗಿದೆ. ಈಗಾಗಲೇ ಜನರು ಗುಂಪು ಗೂಡುತ್ತಿದ್ದಾರೆ. </p><p>ಅಯಾತೊಲ್ಲಾ ಅಲಿ ಖಮೇನಿ 1986ರಲ್ಲಿ ಪುಟ್ಟಹಳ್ಳಿ ಎನಿಸಿದ್ದ ಅಲೀಪುರಕ್ಕೆ ಭೇಟಿ ನೀಡಿದ್ದರು. ಅವರ ಧಾರ್ಮಿಕ ದೇಶಗಳನ್ನು ಅಲೀಪುರದಲ್ಲಿ ಚಾಚೂತಪ್ಪಿಸದೆ ಪಾಲಿಸಲಾಗುತ್ತಿತ್ತು.</p>.<p><strong>ಬೆಳ್ಳಿಕುಂಟೆ ಅಲೀಪುರವಾಯಿತು:</strong> ಅಲೀಪುರದ ಮೂಲ ಹೆಸರು ಬೆಳ್ಳಿಕುಂಟೆ. ಈ ಹಿಂದೆ ಬಿಜಾಪುರ ಆದಿಲ್ಶಾಹಿಗಳ ಅವಧಿಯಲ್ಲಿ ಅಲ್ಲಿನ ಜನರು ಇಲ್ಲಿಗೆ ವಲಸೆ ಬಂದರು. ಮುಸ್ಲಿಮರ ಸಂಖ್ಯೆ ಹೆಚ್ಚಿದಂತೆ ಬೆಳ್ಳುಕುಂಟೆ ಅಲೀಪುರವಾಗಿ ರೂಪಾಂತರವಾಯಿತು.</p><p>ಗ್ರಾಮದ ಬಹುತೇಕ ಮಂದಿ ಇರಾನ್, ಅರಬ್ ದೇಶಗಳು ಸೇರಿದಂತೆ ಜಗತ್ತಿನ ವಿವಿಧ ದೇಶಗಳ ಜೊತೆ ವ್ಯಾಪಾರ, ವಹಿವಾಟು, ಶಿಕ್ಷಣದ ಕಾರಣಕ್ಕೆ ಸಂಪರ್ಕ ಹೊಂದಿದ್ದಾರೆ. ಗ್ರಾಮದಲ್ಲಿ ಅಂಜುಮನ್ ಜಾಫರಿಯಾ ಸಮಿತಿ ಪ್ರತ್ಯೇಕವಾದ ಕೇಬಲ್ ಚಾನಲ್ ಹೊಂದಿದೆ. ‘ಅಲಿ ಟಿವಿ’ ಹೆಸರಿನ ಈ ಚಾನಲ್ನಲ್ಲಿ ಮಸೀದಿಯ ಪ್ರಾರ್ಥನೆಗಳು, ಕುರ್ಆನ್ ಪಠಣ ಧಾರ್ಮಿಕ ವಿಚಾರಗಳು ಪ್ರಸಾರವಾಗುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>