2 ವರ್ಷದಲ್ಲಿ ಎರಡನೇ ವಿಕೆಟ್ ಪತನ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷ ಕಳೆಯುವಷ್ಟರಲ್ಲಿ ಎರಡನೇ ಸಚಿವರು ತಮ್ಮ ಸ್ಥಾನಕ್ಕೆ ಕುತ್ತು ತಂದುಕೊಂಡಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ಬಿ. ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪದ ಕಾರಣಕ್ಕೆ ರಾಜೀನಾಮೆ ನೀಡಿದ್ದರು. ಮತ ಕಳವು ಹೇಳಿಕೆಗೆ ಸಂಬಂಧಿಸಿದಂತೆ ರಾಜಣ್ಣ ಅವರ ವಜಾಗೆ ಸಿದ್ದರಾಮಯ್ಯ ಅವರೇ ಶಿಫಾರಸು ಮಾಡಿದ್ದು, ಸಂಪುಟದ ಎರಡನೇ ವಿಕೆಟ್ ಪತನವಾಗಿದೆ.