ಮಂಗಳವಾರ, 12 ಆಗಸ್ಟ್ 2025
×
ADVERTISEMENT
ADVERTISEMENT

ಸಂಪುಟದಿಂದ ರಾಜಣ್ಣ ವಜಾ: ಸಚಿವ ಸ್ಥಾನಕ್ಕೆ ಮುಳುವಾಯ್ತೇ, ಮತ ಕಳವಿನ ಟೀಕೆ?

Published : 11 ಆಗಸ್ಟ್ 2025, 23:30 IST
Last Updated : 11 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
2 ವರ್ಷದಲ್ಲಿ ಎರಡನೇ ವಿಕೆಟ್ ಪತನ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷ ಕಳೆಯುವಷ್ಟರಲ್ಲಿ ಎರಡನೇ ಸಚಿವರು ತಮ್ಮ ಸ್ಥಾನಕ್ಕೆ ಕುತ್ತು ತಂದುಕೊಂಡಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ಬಿ. ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪದ ಕಾರಣಕ್ಕೆ ರಾಜೀನಾಮೆ ನೀಡಿದ್ದರು. ಮತ ಕಳವು ಹೇಳಿಕೆಗೆ ಸಂಬಂಧಿಸಿದಂತೆ ರಾಜಣ್ಣ ಅವರ ವಜಾಗೆ ಸಿದ್ದರಾಮಯ್ಯ ಅವರೇ ಶಿಫಾರಸು ಮಾಡಿದ್ದು, ಸಂಪುಟದ ಎರಡನೇ ವಿಕೆಟ್‌ ಪತನವಾಗಿದೆ.
ರಾಜಣ್ಣ ಹೇಳಿದ್ದೇನು?
ಲೋಕಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಆಗ ಎಲ್ಲರೂ ಕಣ್ಣುಮುಚ್ಚಿ ಕುಳಿತಿದ್ದರೇ? ಮತ ಕಳುವಿನ ವಿಚಾರ ಮಾತನಾಡಲು ಹೋದರೆ ಮಾತನಾಡಬೇಕಾಗುತ್ತದೆ. ಅದು ಬೇರೆ–ಬೇರೆ ಆಗುತ್ತದೆ. ಇಷ್ಟೆಲ್ಲ ಅಕ್ರಮಗಳು ನಡೆಯುತ್ತಿದ್ದರೂ ನೋಡಿಕೊಂಡು ಸುಮ್ಮನೆ ಇದ್ದೇವಲ್ಲ ಎಂಬ ಬಗ್ಗೆ ನಾಚಿಕೆ ಆಗಬೇಕು. ನಮ್ಮ ಕಣ್ಣು ಮುಂದೆ ಅಕ್ರಮಗಳು ನಡೆದಿರುವುದನ್ನು ನೋಡಿದರೆ ನಮಗೆ ಅವಮಾನ ಆಗಬೇಕು. ಆಗ ಸುಮ್ಮನೆ ಇದ್ದು, ಈಗ ಹೇಳುತ್ತಿದ್ದೇವೆ. ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮುಂದೆ ಎಚ್ಚರಿಕೆಯಿಂದ ಇರುತ್ತೇವೆ. (ಆಗಸ್ಟ್ 9ರಂದು ತುಮಕೂರಿನಲ್ಲಿ ಹೇಳಿದ್ದು)
ರಾಹುಲ್ ಅವರ ‘ಮತ ಕಳ್ಳತನ’ದ ಸುಳ್ಳಿಗೆ ಕನ್ನಡಿ ಹಿಡಿದಿದ್ದೇ ರಾಜಣ್ಣ ಅವರ ತಪ್ಪಾ? ಸತ್ಯ ಹೇಳಿದ್ದಕ್ಕೆ ರಾಜೀನಾಮೆ ಶಿಕ್ಷೆನಾ? ಸಿದ್ದರಾಮಯ್ಯಗೆ ಸತ್ಯಕ್ಕಿಂತ ಹೈಕಮಾಂಡ್‌ ಗುಲಾಮಗಿರಿಯೇ ಹೆಚ್ಚಾಗಿದ್ದು ದುರಂತ
ಆರ್‌.ಅಶೋಕ, ವಿರೋಧಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT