<p><strong>ಬೆಂಗಳೂರು:</strong> ‘ಮುಡಾ ನಿವೇಶನ ಅಕ್ರಮ ಹಂಚಿಕೆಗೆ ಸಂಬಂಧಿಸಿದಂತೆ ನಿಮ್ಮ ವಿರುದ್ಧ ದಾಖಲಾಗಿರುವ ದೂರಿನ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಏಕೆ ನೀಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ನಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಕೇಳಿದ್ದಾರೆ.</p>.<p>ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ನೀಡಿ ಎಂದು ವಕೀಲ ಟಿ.ಜೆ.ಅಬ್ರಹಾಂ ಅವರು ಸಲ್ಲಿಸಿದ್ದ ಮನವಿಯ ಆಧಾರದಲ್ಲಿ ಸಿದ್ದರಾಮಯ್ಯ ಅವರಿಗೆ ಕಾರಣ ಕೇಳಿ ಇದೇ26 ರಂದು ರಾಜ್ಯಪಾಲ ನೋಟಿಸ್ ಜಾರಿ ಮಾಡಿದ್ದರು.</p>.<p>‘ಅಬ್ರಹಾಂ ಅವರ ಮನವಿಯನ್ನು ಕೂಲಂಕಶವಾಗಿ ಪರಿಶೀಲಿಸಲಾಗಿದೆ. ನಿಮ್ಮ ಮೇಲಿನ ಆರೋಪಗಳು ಗಂಭೀರ ಸ್ವರೂಪದವು ಮತ್ತು ಆ ಆರೋಪಗಳು ನಿಜ ಎಂಬುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಹೀಗಾಗಿ ನಿಮ್ಮ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಬಂದಿರುವ ಮನವಿಯ ಆಧಾರದಲ್ಲಿ ನೋಟಿಸ್ ನೀಡಲಾಗುತ್ತಿದೆ’ ಎಂದು ವಿವರಿಸಿದ್ದಾರೆ.</p>.<p>‘ಅನುಮತಿ ಏಕೆ ನೀಡಬಾರದು ಎಂಬುದಕ್ಕೆ ಏಳು ದಿನಗಳ ಒಳಗೆ ಉತ್ತರ ನೀಡಿ. ನಿಮ್ಮ ಉತ್ತರವನ್ನು ಪುಷ್ಟೀಕರಿಸುವ ದಾಖಲೆಗಳನ್ನು ಸಲ್ಲಿಸಿ’ ಎಂದು ರಾಜ್ಯಪಾಲ ನೋಟಿಸ್ನಲ್ಲಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಡಾ ನಿವೇಶನ ಅಕ್ರಮ ಹಂಚಿಕೆಗೆ ಸಂಬಂಧಿಸಿದಂತೆ ನಿಮ್ಮ ವಿರುದ್ಧ ದಾಖಲಾಗಿರುವ ದೂರಿನ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಏಕೆ ನೀಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ನಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಕೇಳಿದ್ದಾರೆ.</p>.<p>ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ನೀಡಿ ಎಂದು ವಕೀಲ ಟಿ.ಜೆ.ಅಬ್ರಹಾಂ ಅವರು ಸಲ್ಲಿಸಿದ್ದ ಮನವಿಯ ಆಧಾರದಲ್ಲಿ ಸಿದ್ದರಾಮಯ್ಯ ಅವರಿಗೆ ಕಾರಣ ಕೇಳಿ ಇದೇ26 ರಂದು ರಾಜ್ಯಪಾಲ ನೋಟಿಸ್ ಜಾರಿ ಮಾಡಿದ್ದರು.</p>.<p>‘ಅಬ್ರಹಾಂ ಅವರ ಮನವಿಯನ್ನು ಕೂಲಂಕಶವಾಗಿ ಪರಿಶೀಲಿಸಲಾಗಿದೆ. ನಿಮ್ಮ ಮೇಲಿನ ಆರೋಪಗಳು ಗಂಭೀರ ಸ್ವರೂಪದವು ಮತ್ತು ಆ ಆರೋಪಗಳು ನಿಜ ಎಂಬುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಹೀಗಾಗಿ ನಿಮ್ಮ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಬಂದಿರುವ ಮನವಿಯ ಆಧಾರದಲ್ಲಿ ನೋಟಿಸ್ ನೀಡಲಾಗುತ್ತಿದೆ’ ಎಂದು ವಿವರಿಸಿದ್ದಾರೆ.</p>.<p>‘ಅನುಮತಿ ಏಕೆ ನೀಡಬಾರದು ಎಂಬುದಕ್ಕೆ ಏಳು ದಿನಗಳ ಒಳಗೆ ಉತ್ತರ ನೀಡಿ. ನಿಮ್ಮ ಉತ್ತರವನ್ನು ಪುಷ್ಟೀಕರಿಸುವ ದಾಖಲೆಗಳನ್ನು ಸಲ್ಲಿಸಿ’ ಎಂದು ರಾಜ್ಯಪಾಲ ನೋಟಿಸ್ನಲ್ಲಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>