ಭದ್ರಾ ಮೇಲ್ದಂಡೆ ಯೋಜನೆ, ವಾರಾಹಿ ಜಲವಿದ್ಯುತ್ ಯೋಜನೆಗೆ ಅರಣ್ಯ ಬಳಸಿಕೊಳ್ಳಲು ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಷರತ್ತುಬದ್ಧ ಅನುಮತಿ ನೀಡಿದೆ. ವಾರಾಹಿ ಪಂಪ್ಡ್ ಸ್ಟೋರೇಜ್ನ ಸ್ಥಳ ಪರಿಶೀಲನೆಗೂ ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ರಾಜ್ಯದ ಎರಡು ಪ್ರಮುಖ ಯೋಜನೆಗಳಿಗೆ ಹಸಿರು ನಿಶಾನೆ ಸಿಕ್ಕಂತಾಗಿದೆ. ಆದರೆ, ಮಹದಾಯಿ ಯೋಜನೆಯು ಸ್ಥಾಯಿ ಸಮಿತಿ ಸಭೆಯಲ್ಲಿ ಚರ್ಚೆಗೇ ಬರಲಿಲ್ಲ