<p><strong>ಬೆಂಗಳೂರು:</strong> ಸಮರ್ಪಕವಾಗಿ ಜಾತಿವಾರು ಜನಗಣತಿ ನಡೆಸದೆ ಒಳಮೀಸಲಾತಿಯನ್ನು ಜಾರಿ ಮಾಡಬಾರದು ಎಂದು ಲಂಬಾಣಿ ಸಮುದಾಯದ ಮುಖಂಡರ ನಿಯೋಗವು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. </p>.<p>ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದಸ್ವಾಮಿ, ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಸಿ. ದ್ಯಾನಾಯಕ್ ನಿಯೋಗದ ನೇತೃತ್ವ ವಹಿಸಿದ್ದರು.</p>.<p>‘ಒಳಮೀಸಲಾತಿ ಕಲ್ಪಿಸಲು ಸಂಪೂರ್ಣ ವೈಜ್ಞಾನಿಕ ದತ್ತಾಂಶ ಇಲ್ಲದಿರುವುದರಿಂದ, ಆಯೋಗವು ವೈಜ್ಞಾನಿಕ ದತ್ತಾಂಶ ಸಂಗ್ರಹಿಸುವವರೆಗೂ ಈ ಕುರಿತು ತೀರ್ಮಾನ ಕೈಗೊಳ್ಳಬಾರದು. ಸ್ವಾತಂತ್ರ್ಯಪೂರ್ವದಿಂದಲೂ ಬಹುಸಂಖ್ಯಾತರಾಗಿ ಅಲೆಮಾರಿ ಬುಡಕಟ್ಟು ಹಿನ್ನೆಲೆಯಿಂದ ಬಂದ, ಬಂಜಾರ, ಲಂಬಾಣಿ ಹಾಗೂ ಸುಗಾಲಿ ಸಮುದಾಯದ ಜನರು ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯ ಹಾಗೂ ಅಭಿವೃದ್ಧಿವಾರು ಯೋಜನೆಗಳ ಸೌಲಭ್ಯ ಸಿಗದೆ ವಂಚಿತರಾಗಿದ್ದಾರೆ. ಹೀಗಾಗಿ, ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ. ಸಂವಿಧಾನಬದ್ಧವಾಗಿ ಈ ಸಮುದಾಯಕ್ಕೆ ಸಿಗಬೇಕಾದಷ್ಟು ಸೌಲಭ್ಯಗಳು ಹಾಗೂ ಮಾನ್ಯತೆ ಸಿಗದೆ ಇರುವುದು ದುರದೃಷ್ಟಕರ’ ಎಂದು ಎ.ಆರ್. ಗೋವಿಂದಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. </p>.<p>‘ತಳ ಮಟ್ಟದಿಂದಲೇ ಎಲ್ಲ ರೀತಿಯ ವಾಸ್ತವ ದತ್ತಾಂಶ ಸಂಗ್ರಹಿಸುವವರೆಗೂ, ಬಂಜಾರ ಸಮುದಾಯದ ನಿಖರ ಜಾತಿವಾರು ಜನಗಣತಿಯ ದತ್ತಾಂಶ ಆಯೋಗಕ್ಕೆ ಸೇರುವವರೆಗೂ ಆಯೋಗವು ಒಳ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ಕೈಗೊಳ್ಳಬಾರದು’ ಎಂದು ಅವರು ನಾಗಮೋಹನದಾಸ್ ಅವರಿಗೆ ಮನವಿ ಮಾಡಿದ್ದಾರೆ.</p>.<p>ಬಂಜಾರ ಮಹಿಳಾ ಸಂಘದ ಅಧ್ಯಕ್ಷೆ ಲಲಿತಮ್ಮ, ಮುಖಂಡರಾದ ಡಿ. ಪರಮೇಶ್ ನಾಯಕ್, ಧರ್ಮರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಮರ್ಪಕವಾಗಿ ಜಾತಿವಾರು ಜನಗಣತಿ ನಡೆಸದೆ ಒಳಮೀಸಲಾತಿಯನ್ನು ಜಾರಿ ಮಾಡಬಾರದು ಎಂದು ಲಂಬಾಣಿ ಸಮುದಾಯದ ಮುಖಂಡರ ನಿಯೋಗವು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. </p>.<p>ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದಸ್ವಾಮಿ, ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಸಿ. ದ್ಯಾನಾಯಕ್ ನಿಯೋಗದ ನೇತೃತ್ವ ವಹಿಸಿದ್ದರು.</p>.<p>‘ಒಳಮೀಸಲಾತಿ ಕಲ್ಪಿಸಲು ಸಂಪೂರ್ಣ ವೈಜ್ಞಾನಿಕ ದತ್ತಾಂಶ ಇಲ್ಲದಿರುವುದರಿಂದ, ಆಯೋಗವು ವೈಜ್ಞಾನಿಕ ದತ್ತಾಂಶ ಸಂಗ್ರಹಿಸುವವರೆಗೂ ಈ ಕುರಿತು ತೀರ್ಮಾನ ಕೈಗೊಳ್ಳಬಾರದು. ಸ್ವಾತಂತ್ರ್ಯಪೂರ್ವದಿಂದಲೂ ಬಹುಸಂಖ್ಯಾತರಾಗಿ ಅಲೆಮಾರಿ ಬುಡಕಟ್ಟು ಹಿನ್ನೆಲೆಯಿಂದ ಬಂದ, ಬಂಜಾರ, ಲಂಬಾಣಿ ಹಾಗೂ ಸುಗಾಲಿ ಸಮುದಾಯದ ಜನರು ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯ ಹಾಗೂ ಅಭಿವೃದ್ಧಿವಾರು ಯೋಜನೆಗಳ ಸೌಲಭ್ಯ ಸಿಗದೆ ವಂಚಿತರಾಗಿದ್ದಾರೆ. ಹೀಗಾಗಿ, ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ. ಸಂವಿಧಾನಬದ್ಧವಾಗಿ ಈ ಸಮುದಾಯಕ್ಕೆ ಸಿಗಬೇಕಾದಷ್ಟು ಸೌಲಭ್ಯಗಳು ಹಾಗೂ ಮಾನ್ಯತೆ ಸಿಗದೆ ಇರುವುದು ದುರದೃಷ್ಟಕರ’ ಎಂದು ಎ.ಆರ್. ಗೋವಿಂದಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. </p>.<p>‘ತಳ ಮಟ್ಟದಿಂದಲೇ ಎಲ್ಲ ರೀತಿಯ ವಾಸ್ತವ ದತ್ತಾಂಶ ಸಂಗ್ರಹಿಸುವವರೆಗೂ, ಬಂಜಾರ ಸಮುದಾಯದ ನಿಖರ ಜಾತಿವಾರು ಜನಗಣತಿಯ ದತ್ತಾಂಶ ಆಯೋಗಕ್ಕೆ ಸೇರುವವರೆಗೂ ಆಯೋಗವು ಒಳ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ಕೈಗೊಳ್ಳಬಾರದು’ ಎಂದು ಅವರು ನಾಗಮೋಹನದಾಸ್ ಅವರಿಗೆ ಮನವಿ ಮಾಡಿದ್ದಾರೆ.</p>.<p>ಬಂಜಾರ ಮಹಿಳಾ ಸಂಘದ ಅಧ್ಯಕ್ಷೆ ಲಲಿತಮ್ಮ, ಮುಖಂಡರಾದ ಡಿ. ಪರಮೇಶ್ ನಾಯಕ್, ಧರ್ಮರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>