ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಪ್ರಕರಣದ ಕುರಿತು ಬಸಾಪುರದ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 'ತಪ್ಪು ಮಾಡಿದವರಿಗೆ ಏನು ಮಾಡಬೇಕು?ಸುಮ್ಮನೇ ಬಿಟ್ಟು ಬಿಡಬೇಕಾ?ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಲು ಪೊಲೀಸರಿಗೆ ಹೇಳಿದ್ದೇವೆ ಎಂದರು. ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ನ್ಯಾಯಾಲಯದ ನಿರ್ದೇಶನದ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಮ್ಮ ಸರ್ಕಾರ ನಿರಪರಾಧಿಗಳನ್ನು ಬಂಧಿಸುವ ಕೆಲಸ ಯಾವತ್ತೂ ಮಾಡುವುದಿಲ್ಲ ಎಂದು ಹೇಳಿದರು.