<p><strong>ಬೆಂಗಳೂರು</strong>: ಅಡುಗೆ ಅನಿಲ ಬೆಲೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿಗೆ ಮನವಿ ಮಾಡಿದ್ದಾರೆ.</p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಡಿಯೊ ಪೋಸ್ಟ್ ಮಾಡಿರುವ ಅವರು, ‘ಎಲ್ಲಾ ಬಿಜೆಪಿ ಸ್ನೇಹಿತರಿಗೆ ನಮಸ್ಕಾರ, ತಾವೆಲ್ಲರೂ ಜನಾಕ್ರೋಶ ಯಾತ್ರೆ ಮಾಡುತ್ತಿದ್ದೀರಿ. ನಾನು ನಿಮ್ಮೆಲ್ಲರನ್ನೂ ಅಭಿನಂದಿಸುತ್ತೇನೆ. ಕೇಂದ್ರ ಸರ್ಕಾರ ನಿಮಗೆ ಕಪಾಳಮೋಕ್ಷ ಮಾಡಿದೆ. ಈ ಜನಾಕ್ರೋಶ ಯಾತ್ರೆಯನ್ನು ಕೇಂದ್ರ ಸರ್ಕಾರದ ವಿರುದ್ಧ ಮಾಡಬೇಕು ಎಂದು ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.</p>.<p>ಈಗಾಗಲೇ ಕೇಂದ್ರ ಸರ್ಕಾರ ಪ್ರೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವುದು ನಿಮಗೆಲ್ಲ ತಿಳಿದಿದೆ. ತಮ್ಮ ಆಕ್ರೋಶವನ್ನು ನಿಮ್ಮ ಕೇಂದ್ರ ಸರ್ಕಾರ ವಿರುದ್ಧ ಮುಂದುವರಿಸಬೇಕು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>ರಾಜ್ಯ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಎಂದು ಆರೋಪಿಸಿ, 16 ದಿನಗಳ 'ಜನಾಕ್ರೋಶ ಯಾತ್ರೆ’ಯನ್ನು ಬಿಜೆಪಿ ಸೋಮವಾರ ಪ್ರಾರಂಭಿಸಿದೆ.</p>.ಮೈಸೂರು: ಬಿಜೆಪಿ 'ಜನಾಕ್ರೋಶ ಯಾತ್ರೆ' ಆರಂಭ– ಮುನಿಸು ಮರೆತ ಬಣಗಳು!.ಪೆಟ್ರೋಲ್, ಡೀಸೆಲ್ ಮೇಲೆ ₹2 ಅಬಕಾರಿ ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ.ಅಡುಗೆ ಅನಿಲ ದರ ಏರಿಕೆ: ಜನಾಕ್ರೋಶ ಯಾತ್ರೆಗೆ ಕಪಾಳಮೋಕ್ಷ– ಸಿದ್ದರಾಮಯ್ಯ.Cooking Gas Price Hike | ಅಡುಗೆ ಅನಿಲ ದರ ₹50 ಏರಿಕೆ: ಇಂದಿನಿಂದಲೇ ಅನ್ವಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಡುಗೆ ಅನಿಲ ಬೆಲೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿಗೆ ಮನವಿ ಮಾಡಿದ್ದಾರೆ.</p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಡಿಯೊ ಪೋಸ್ಟ್ ಮಾಡಿರುವ ಅವರು, ‘ಎಲ್ಲಾ ಬಿಜೆಪಿ ಸ್ನೇಹಿತರಿಗೆ ನಮಸ್ಕಾರ, ತಾವೆಲ್ಲರೂ ಜನಾಕ್ರೋಶ ಯಾತ್ರೆ ಮಾಡುತ್ತಿದ್ದೀರಿ. ನಾನು ನಿಮ್ಮೆಲ್ಲರನ್ನೂ ಅಭಿನಂದಿಸುತ್ತೇನೆ. ಕೇಂದ್ರ ಸರ್ಕಾರ ನಿಮಗೆ ಕಪಾಳಮೋಕ್ಷ ಮಾಡಿದೆ. ಈ ಜನಾಕ್ರೋಶ ಯಾತ್ರೆಯನ್ನು ಕೇಂದ್ರ ಸರ್ಕಾರದ ವಿರುದ್ಧ ಮಾಡಬೇಕು ಎಂದು ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.</p>.<p>ಈಗಾಗಲೇ ಕೇಂದ್ರ ಸರ್ಕಾರ ಪ್ರೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವುದು ನಿಮಗೆಲ್ಲ ತಿಳಿದಿದೆ. ತಮ್ಮ ಆಕ್ರೋಶವನ್ನು ನಿಮ್ಮ ಕೇಂದ್ರ ಸರ್ಕಾರ ವಿರುದ್ಧ ಮುಂದುವರಿಸಬೇಕು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>ರಾಜ್ಯ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಎಂದು ಆರೋಪಿಸಿ, 16 ದಿನಗಳ 'ಜನಾಕ್ರೋಶ ಯಾತ್ರೆ’ಯನ್ನು ಬಿಜೆಪಿ ಸೋಮವಾರ ಪ್ರಾರಂಭಿಸಿದೆ.</p>.ಮೈಸೂರು: ಬಿಜೆಪಿ 'ಜನಾಕ್ರೋಶ ಯಾತ್ರೆ' ಆರಂಭ– ಮುನಿಸು ಮರೆತ ಬಣಗಳು!.ಪೆಟ್ರೋಲ್, ಡೀಸೆಲ್ ಮೇಲೆ ₹2 ಅಬಕಾರಿ ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ.ಅಡುಗೆ ಅನಿಲ ದರ ಏರಿಕೆ: ಜನಾಕ್ರೋಶ ಯಾತ್ರೆಗೆ ಕಪಾಳಮೋಕ್ಷ– ಸಿದ್ದರಾಮಯ್ಯ.Cooking Gas Price Hike | ಅಡುಗೆ ಅನಿಲ ದರ ₹50 ಏರಿಕೆ: ಇಂದಿನಿಂದಲೇ ಅನ್ವಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>