<p><strong>ಮೈಸೂರು:</strong> ‘ನಮ್ಮ ಹೋರಾಟದ ಕಾರಣದಿಂದಾಗಿಯೇ ಯುವಜನರಿಗೆ ಉದ್ಯೋಗ ಸಿಗುವಂತಾಗಿದೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ ಹೇಳಿದರು.</p><p>ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಧಾರವಾಡದಲ್ಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಪೊಲೀಸರು ಆರು ತಿಂಗಳಿಂದಲೂ ಅನುಮತಿ ಕೊಟ್ಟಿರಲಿಲ್ಲ. ಪಕ್ಷದ ಲೆಟರ್ಹೆಡ್ನಲ್ಲೇ ಅನುಮತಿ ಕೇಳಿದ್ದೆವು. ಪೊಲೀಸರು ಬಿಜೆಪಿಯ ಹೋರಾಟವೆಂಬ ಕಾರಣದಿಂದಲೇ ಸಮ್ಮತಿ ಕೊಟ್ಟಿದ್ದಾರೆ’ ಎಂದು ಸಮರ್ಥಿಸಿಕೊಂಡರು.</p>.ಸಂಪುಟ ಪುನರ್ ರಚನೆ | ಹೈಕಮಾಂಡ್ಗೆ ಬರೆದ ಪತ್ರ ಹಳೆಯದು: ಶಾಸಕ ಅಶೋಕ ಮನಗೂಳಿ . <p>‘ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟ ಹಾಗೂ ನಮ್ಮ ಬೆಂಬಲದಿಂದಾಗಿ ಸರ್ಕಾರ ಕ್ರಮ ಕೈಗೊಂಡಿದೆ. ಹೋರಾಟದಲ್ಲಿ ನಮ್ಮವರು ಕಡಿಮೆ ಇದ್ದರು, ವಿದ್ಯಾರ್ಥಿಗಳೇ ಜಾಸ್ತಿ ಇದ್ದರು. ಆ ಹೋರಾಟದಿಂದಾಗಿಯೇ ಸರ್ಕಾರ 56ಸಾವಿರ ಉದ್ಯೋಗ ಭರ್ತಿ ಮಾಡುತ್ತೇವೆ ಎಂದು ಹೇಳಿದೆ’ ಎಂದರು.</p><p>‘ನಾವು ಹೋರಾಟ ಮಾಡಿದ್ದು 2.84 ಲಕ್ಷ ಹುದ್ದೆಗಳ ಭರ್ತಿಗಾಗಿಯೇ ಹೊರತು ಕೇವಲ 57ಸಾವಿರಕ್ಕಲ್ಲ. ಸರ್ಕಾರ ಕೇವಲ ಹೇಳಿಕೆ ನೀಡಿ ಸುಮ್ಮನೆ ಕೂರುವುದಲ್ಲ. ಎಲ್ಲ ಹುದ್ದೆಗಳಿಗೂ ಯಾವಾಗ ನೇಮಕ ಮಾಡಲಾಗುತ್ತದೆ. ಯಾವಾಗ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದನ್ನು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು’ ಎಂದು ಒತ್ತಾಯಿಸಿದರು.</p><p>‘ಹುದ್ದೆಗಳ ಭರ್ತಿ ಬಗ್ಗೆ ಮುಂಬರುವ ಬಜೆಟ್ನಲ್ಲಿ ಪ್ರಸ್ತಾಪಿಸದಿದ್ದಲ್ಲಿ ದೊಡ್ಡ ಮಟ್ಟದ ಚಳವಳಿ ನಡೆಸುತ್ತೇವೆ. ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಬೇಕಾಗುತ್ತದೆ’ ಎಂದು ತಿಳಿಸಿದರು.</p>.ಅಗೌರವ ತೋರಿದವರ ವಿರುದ್ಧ ಏನು ಕ್ರಮ: ಆರ್. ಅಶೋಕ ಪ್ರಶ್ನೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಮ್ಮ ಹೋರಾಟದ ಕಾರಣದಿಂದಾಗಿಯೇ ಯುವಜನರಿಗೆ ಉದ್ಯೋಗ ಸಿಗುವಂತಾಗಿದೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ ಹೇಳಿದರು.</p><p>ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಧಾರವಾಡದಲ್ಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಪೊಲೀಸರು ಆರು ತಿಂಗಳಿಂದಲೂ ಅನುಮತಿ ಕೊಟ್ಟಿರಲಿಲ್ಲ. ಪಕ್ಷದ ಲೆಟರ್ಹೆಡ್ನಲ್ಲೇ ಅನುಮತಿ ಕೇಳಿದ್ದೆವು. ಪೊಲೀಸರು ಬಿಜೆಪಿಯ ಹೋರಾಟವೆಂಬ ಕಾರಣದಿಂದಲೇ ಸಮ್ಮತಿ ಕೊಟ್ಟಿದ್ದಾರೆ’ ಎಂದು ಸಮರ್ಥಿಸಿಕೊಂಡರು.</p>.ಸಂಪುಟ ಪುನರ್ ರಚನೆ | ಹೈಕಮಾಂಡ್ಗೆ ಬರೆದ ಪತ್ರ ಹಳೆಯದು: ಶಾಸಕ ಅಶೋಕ ಮನಗೂಳಿ . <p>‘ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟ ಹಾಗೂ ನಮ್ಮ ಬೆಂಬಲದಿಂದಾಗಿ ಸರ್ಕಾರ ಕ್ರಮ ಕೈಗೊಂಡಿದೆ. ಹೋರಾಟದಲ್ಲಿ ನಮ್ಮವರು ಕಡಿಮೆ ಇದ್ದರು, ವಿದ್ಯಾರ್ಥಿಗಳೇ ಜಾಸ್ತಿ ಇದ್ದರು. ಆ ಹೋರಾಟದಿಂದಾಗಿಯೇ ಸರ್ಕಾರ 56ಸಾವಿರ ಉದ್ಯೋಗ ಭರ್ತಿ ಮಾಡುತ್ತೇವೆ ಎಂದು ಹೇಳಿದೆ’ ಎಂದರು.</p><p>‘ನಾವು ಹೋರಾಟ ಮಾಡಿದ್ದು 2.84 ಲಕ್ಷ ಹುದ್ದೆಗಳ ಭರ್ತಿಗಾಗಿಯೇ ಹೊರತು ಕೇವಲ 57ಸಾವಿರಕ್ಕಲ್ಲ. ಸರ್ಕಾರ ಕೇವಲ ಹೇಳಿಕೆ ನೀಡಿ ಸುಮ್ಮನೆ ಕೂರುವುದಲ್ಲ. ಎಲ್ಲ ಹುದ್ದೆಗಳಿಗೂ ಯಾವಾಗ ನೇಮಕ ಮಾಡಲಾಗುತ್ತದೆ. ಯಾವಾಗ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದನ್ನು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು’ ಎಂದು ಒತ್ತಾಯಿಸಿದರು.</p><p>‘ಹುದ್ದೆಗಳ ಭರ್ತಿ ಬಗ್ಗೆ ಮುಂಬರುವ ಬಜೆಟ್ನಲ್ಲಿ ಪ್ರಸ್ತಾಪಿಸದಿದ್ದಲ್ಲಿ ದೊಡ್ಡ ಮಟ್ಟದ ಚಳವಳಿ ನಡೆಸುತ್ತೇವೆ. ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಬೇಕಾಗುತ್ತದೆ’ ಎಂದು ತಿಳಿಸಿದರು.</p>.ಅಗೌರವ ತೋರಿದವರ ವಿರುದ್ಧ ಏನು ಕ್ರಮ: ಆರ್. ಅಶೋಕ ಪ್ರಶ್ನೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>