ಇದೊಂದು ಕೆಟ್ಟ ಸರ್ಕಾರ, ರೈತ ವಿರೋಧ ಸರ್ಕಾರ ಎಂಬುದಕ್ಕೆ ಇದು ಉದಾಹರಣೆ. ಸರ್ಕಾರಕ್ಕೆ ನಾಚಿಕೆಯಾಗಬೇಕು, ರೈತರನ್ನು ಕಡೆಗಣಿಸಿದರೆ ಅವರ ಶಾಪಕ್ಕೆ ಸರ್ಕಾರ ಗುರಿಯಾಗಲಿದೆ ಎಂದರು.
ಈ ರೀತಿ ಹಗುರವಾಗಿ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಮುಖ್ಯಮಂತ್ರಿ ಏನು ಕ್ರಮ ಕೈಗೊಂಡಿದ್ದಾರೆ? ಕೂಡಲೇ ಇವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಇದಕ್ಕೂ ಮುನ್ನ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಭೇಟಿ ನೀಡಿದ ಆರ್.ಅಶೋಕ್ ಅವರು ದತ್ತ ಪಾದುಕೆ ದರ್ಶನ ಪಡೆದರು.