<p><strong>ಕಲಬುರಗಿ:</strong> ಜಿಲ್ಲೆಯ ಜೇವರ್ಗಿತ ತಾಲ್ಲೂಕಿನ ಗೌನಹಳ್ಳಿ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.</p><p>ಬೀಳಗಿ ಅವರು ಬೆಳಗಾವಿ ಜಿಲ್ಲೆ ರಾಮದುರ್ಗದಿಂದ ಕಲಬುರಗಿಯಲ್ಲಿ ನಡೆಯಲಿರುವ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರದತ್ತ ಹೊರಟಿದ್ದರು. </p><p>ಸಂಜೆ 5.30ರ ಸುಮಾರಿಗೆ ಗೌನಹಳ್ಳಿ ಬಳಿ ಬೀಳಗಿ ಅವರ ಕುಟುಂಬವಿದ್ದ ಇನ್ನೋವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆಯಿತು. ಇದರಿಂದಾಗಿ ಸ್ಥಳದಲ್ಲೇ ಅವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟರು.</p><p>ಮಹಾಂತೇಶ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.</p><p>ರಾಮದುರ್ಗದವರಾದ ಬೀಳಗಿ ಅವರು ಧಾರವಾಡ ಎಸಿಯಾಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗಳನ್ನು ನಿಭಾಯಿಸಿದ್ದರು.</p><p>ಇದಕ್ಕೂ ಮುನ್ನ ಧಾರವಾಡದಲ್ಲಿ ಇಂಗ್ಲಿಷ್ ಟ್ಯೂಷನ್ ಹೇಳುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಜಿಲ್ಲೆಯ ಜೇವರ್ಗಿತ ತಾಲ್ಲೂಕಿನ ಗೌನಹಳ್ಳಿ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.</p><p>ಬೀಳಗಿ ಅವರು ಬೆಳಗಾವಿ ಜಿಲ್ಲೆ ರಾಮದುರ್ಗದಿಂದ ಕಲಬುರಗಿಯಲ್ಲಿ ನಡೆಯಲಿರುವ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರದತ್ತ ಹೊರಟಿದ್ದರು. </p><p>ಸಂಜೆ 5.30ರ ಸುಮಾರಿಗೆ ಗೌನಹಳ್ಳಿ ಬಳಿ ಬೀಳಗಿ ಅವರ ಕುಟುಂಬವಿದ್ದ ಇನ್ನೋವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆಯಿತು. ಇದರಿಂದಾಗಿ ಸ್ಥಳದಲ್ಲೇ ಅವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟರು.</p><p>ಮಹಾಂತೇಶ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.</p><p>ರಾಮದುರ್ಗದವರಾದ ಬೀಳಗಿ ಅವರು ಧಾರವಾಡ ಎಸಿಯಾಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗಳನ್ನು ನಿಭಾಯಿಸಿದ್ದರು.</p><p>ಇದಕ್ಕೂ ಮುನ್ನ ಧಾರವಾಡದಲ್ಲಿ ಇಂಗ್ಲಿಷ್ ಟ್ಯೂಷನ್ ಹೇಳುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>