<p><strong>ಶಿವಮೊಗ್ಗ:</strong> ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.</p><p>ಮಂಜುನಾಥ್ ಇಲ್ಲಿನ ವಿಜಯನಗರದ ಮೂರನೇ ಕ್ರಾಸ್ ನಿವಾಸಿ. ಪತ್ನಿ ಪಲ್ಲವಿ ಹಾಗೂ ಎಂಟು ವರ್ಷದ ಪುತ್ರನೊಂದಿಗೆ ಏ.19ರಂದು ಕಾಶ್ಮೀರಕ್ಕೆ ತೆರಳಿದ್ದರು. ಪತ್ನಿ ಹಾಗೂ ಪುತ್ರ ಸುರಕ್ಷಿತವಾಗಿದ್ದಾರೆ.</p><p>ಪಲ್ಲವಿ ಮ್ಯಾಮ್ಕೋಸ್ ಬೀರೂರು ಶಾಖೆಯಲ್ಲಿ ಉದ್ಯೋಗಿ.</p><p>'ಜಮ್ಮು-ಕಾಶ್ಮೀರದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಅಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಮೇಲೆ ಮಂಜುನಾಥ ಅವರ ಪಾರ್ಥಿವ ಶರೀರ ಶಿವಮೊಗ್ಗಕ್ಕೆ ತರಲು ಪ್ರಯತ್ನ ಅರಂಭಿಸಲಿದ್ದೇವೆ' ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.</p>.ಜಮ್ಮು & ಕಾಶ್ಮೀರ | ಭಯೋತ್ಪಾದಕ ದಾಳಿ: ಹಲವು ಮಂದಿ ಸಾವು; 20 ಜನರಿಗೆ ಗಾಯ.ನೈಗರ್ | ಮಸೀದಿ ಮೇಲೆ ಇಸ್ಲಾಮಿಸ್ಟ್ ಉಗ್ರರ ದಾಳಿ: 44 ಮಂದಿ ಸಾವು, ಹಲವರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.</p><p>ಮಂಜುನಾಥ್ ಇಲ್ಲಿನ ವಿಜಯನಗರದ ಮೂರನೇ ಕ್ರಾಸ್ ನಿವಾಸಿ. ಪತ್ನಿ ಪಲ್ಲವಿ ಹಾಗೂ ಎಂಟು ವರ್ಷದ ಪುತ್ರನೊಂದಿಗೆ ಏ.19ರಂದು ಕಾಶ್ಮೀರಕ್ಕೆ ತೆರಳಿದ್ದರು. ಪತ್ನಿ ಹಾಗೂ ಪುತ್ರ ಸುರಕ್ಷಿತವಾಗಿದ್ದಾರೆ.</p><p>ಪಲ್ಲವಿ ಮ್ಯಾಮ್ಕೋಸ್ ಬೀರೂರು ಶಾಖೆಯಲ್ಲಿ ಉದ್ಯೋಗಿ.</p><p>'ಜಮ್ಮು-ಕಾಶ್ಮೀರದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಅಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಮೇಲೆ ಮಂಜುನಾಥ ಅವರ ಪಾರ್ಥಿವ ಶರೀರ ಶಿವಮೊಗ್ಗಕ್ಕೆ ತರಲು ಪ್ರಯತ್ನ ಅರಂಭಿಸಲಿದ್ದೇವೆ' ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.</p>.ಜಮ್ಮು & ಕಾಶ್ಮೀರ | ಭಯೋತ್ಪಾದಕ ದಾಳಿ: ಹಲವು ಮಂದಿ ಸಾವು; 20 ಜನರಿಗೆ ಗಾಯ.ನೈಗರ್ | ಮಸೀದಿ ಮೇಲೆ ಇಸ್ಲಾಮಿಸ್ಟ್ ಉಗ್ರರ ದಾಳಿ: 44 ಮಂದಿ ಸಾವು, ಹಲವರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>