<p><strong>ಬಂಗಾರಪೇಟೆ (ಕೋಲಾರ):</strong> ‘ಕಬ್ಬಿಗೆ ಗರಿಷ್ಠ ಚಿಲ್ಲರೆ ಮಾರಾಟ ದರ (ಎಂಆರ್ಪಿ) ನಿಗದಿ ಮಾಡಬೇಕಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರ ಅಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ‘ಕಬ್ಬಿನ ದರ ಹೆಚ್ಚಿಸುವಂತೆ ಕಬ್ಬು ಬೆಳೆಗಾರರು ಬೆಳಗಾವಿ, ಬಾಗಲಕೋಟೆಯಲ್ಲಿ ಪ್ರತಿಭಟಿಸುತ್ತಿರುವುದು ಗಮನಕ್ಕೆ ಬಂದಿದೆ’ ಎಂದು ಹೇಳಿದರು.</p><p>‘ಮಹಾರಾಷ್ಟ್ರದಲ್ಲಿ ಹೆಚ್ಚು ದರ ನೀಡುತ್ತಿದ್ದು, ಅದಕ್ಕೆ ಸಮಾನಾಂತರವಾಗಿ ದರ ನಿಗದಿ ಮಾಡಬೇಕೆಂದು ಕೋರಿದ್ದಾರೆ. ಈ ಸಂಬಂಧ ರೈತರೊಂದಿಗೆ ಚರ್ಚಿಸಲು ಸಚಿವರಾದ ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ, ಎಂ.ಬಿ.ಪಾಟೀಲ ಜೊತೆ ಮಾತನಾಡಿದ್ದೇನೆ’ ಎಂದರು.</p><p>‘ಕೇಂದ್ರ ಸರ್ಕಾರಕ್ಕೆ ರಾಜ್ಯ ದಿಂದ ₹4.50 ಲಕ್ಷ ಕೋಟಿ ತೆರಿಗೆ ಕೊಡುತ್ತೇವೆ. ಆದರೆ, ಒಂದು ರೂಪಾಯಿಯಲ್ಲಿ ನಮಗೆ ಮರಳಿ ಬರುತ್ತಿರುವುದು ಕೇವಲ 14ರಿಂದ 15 ಪೈಸೆ ಅಷ್ಟೆ. 85 ಪೈಸೆ ತೆರಿಗೆ ದುಡ್ಡು ಅವರೇ ಇಟ್ಟುಕೊಳ್ಳುತ್ತಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ (ಕೋಲಾರ):</strong> ‘ಕಬ್ಬಿಗೆ ಗರಿಷ್ಠ ಚಿಲ್ಲರೆ ಮಾರಾಟ ದರ (ಎಂಆರ್ಪಿ) ನಿಗದಿ ಮಾಡಬೇಕಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರ ಅಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ‘ಕಬ್ಬಿನ ದರ ಹೆಚ್ಚಿಸುವಂತೆ ಕಬ್ಬು ಬೆಳೆಗಾರರು ಬೆಳಗಾವಿ, ಬಾಗಲಕೋಟೆಯಲ್ಲಿ ಪ್ರತಿಭಟಿಸುತ್ತಿರುವುದು ಗಮನಕ್ಕೆ ಬಂದಿದೆ’ ಎಂದು ಹೇಳಿದರು.</p><p>‘ಮಹಾರಾಷ್ಟ್ರದಲ್ಲಿ ಹೆಚ್ಚು ದರ ನೀಡುತ್ತಿದ್ದು, ಅದಕ್ಕೆ ಸಮಾನಾಂತರವಾಗಿ ದರ ನಿಗದಿ ಮಾಡಬೇಕೆಂದು ಕೋರಿದ್ದಾರೆ. ಈ ಸಂಬಂಧ ರೈತರೊಂದಿಗೆ ಚರ್ಚಿಸಲು ಸಚಿವರಾದ ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ, ಎಂ.ಬಿ.ಪಾಟೀಲ ಜೊತೆ ಮಾತನಾಡಿದ್ದೇನೆ’ ಎಂದರು.</p><p>‘ಕೇಂದ್ರ ಸರ್ಕಾರಕ್ಕೆ ರಾಜ್ಯ ದಿಂದ ₹4.50 ಲಕ್ಷ ಕೋಟಿ ತೆರಿಗೆ ಕೊಡುತ್ತೇವೆ. ಆದರೆ, ಒಂದು ರೂಪಾಯಿಯಲ್ಲಿ ನಮಗೆ ಮರಳಿ ಬರುತ್ತಿರುವುದು ಕೇವಲ 14ರಿಂದ 15 ಪೈಸೆ ಅಷ್ಟೆ. 85 ಪೈಸೆ ತೆರಿಗೆ ದುಡ್ಡು ಅವರೇ ಇಟ್ಟುಕೊಳ್ಳುತ್ತಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>