ಜ.20ರಂದು ಶಾಲೆಯಿಂದ ಅವರು ವಾಪಸು ಬಾರದೆ, ಕುಟುಂಬ ಸದಸ್ಯರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಮೇಲುಕೋಟೆ ಪೊಲೀಸರಿಗೆ ಬೆಟ್ಟದ ತಪ್ಪಲಲ್ಲಿ ಅವರ ಸ್ಕೂಟರ್ ಪತ್ತೆಯಾಗಿತ್ತು. ನಂತರ, ಅವರನ್ನು ಕೊಲೆ ಮಾಡಿ ಗುಂಡಿ ತೆಗೆದು ಹೂತಿರುವುದು ಬೆಳಕಿಗೆ ಬಂತು. ಮೃತದೇಹವನ್ನು ಹೊರತೆಗೆದು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು.