ಈ ಚುನಾವಣೆ ಯಲ್ಲಿ ಕಾಂಗ್ರೆಸ್ 60–70 ಸೀಟು ಪಡೆಯುವುದೇ ಕಷ್ಟ. ಸ್ಪಷ್ಟ ಬಹುಮತ ದೊಂದಿಗೆ ಸರ್ಕಾರ ರಚಿಸುತ್ತೇವೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿ ಕೊಳ್ಳುವ ಸನ್ನಿವೇಶವೇ ಸೃಷ್ಟಿಯಾಗದು ಎಂದು ಹೇಳಿದರು.
‘ರಾಷ್ಟ್ರೀಯ ಪಕ್ಷಗಳ ದೂತರು ಚುನಾವಣೋತ್ತರ ಮೈತ್ರಿಗಾಗಿ ಬಂದಿದ್ದರು ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರೇ ಹೇಳಿದ್ದಾರಲ್ಲಾ’ ಎಂಬ ಪ್ರಶ್ನೆಗೆ, ‘ಅವರ ಮಾತಿನಲ್ಲಿ ಸತ್ಯಾಂಶವಿಲ್ಲ. ಇಡೀ ದೇಶವೇ ಹೊಗಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೊಬ್ಬರ ಮನೆ ಬಾಗಿಲಿಗೆ ಯಾಕೆ ಹೋಗುತ್ತಾರೆ’ ಎಂದು ಅವರು ಮರು ಪ್ರಶ್ನೆ ಹಾಕಿದರು.