ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಬರಿಗೆ ಟಿಕೆಟ್ ‍‍ಪ್ರಯೋಗ ಯಶಸ್ವಿ: ಬಿಜೆಪಿ ನಾಯಕ ಯಡಿಯೂರಪ್ಪ ಪ್ರತಿಪಾದನೆ

Published 3 ಮೇ 2023, 18:47 IST
Last Updated 3 ಮೇ 2023, 18:47 IST
ಅಕ್ಷರ ಗಾತ್ರ

ಮೈಸೂರು: ‘ಹೊಸಬರಿಗೆ ಅವಕಾಶ ನೀಡಿರುವ ಬಿಜೆಪಿಯ ಪ್ರಯೋಗ ರಾಜ್ಯ ದಲ್ಲೂ ಯಶಸ್ವಿಯಾಗುತ್ತದೆ’ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆ ಹೊತ್ತಿನಲ್ಲಿ ‘ಪ್ರಜಾವಾಣಿ’ಗೆ ನೀಡಿದ ಸಂದರ್ಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ‘ಬೇರೆ ರಾಜ್ಯಗಳಲ್ಲೂ ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದೇವೆ. ಯುವಜನರಿಗೆ ಅವಕಾಶ ನೀಡಬೇಕೆಂಬ ನಿರ್ಧಾರವನ್ನು  ಜನರೂ ಸ್ವಾಗತಿಸು ತ್ತಾರೆ’ ಎಂದು ಪ್ರತಿಪಾದಿಸಿದರು.

ಈ ಚುನಾವಣೆ ಯಲ್ಲಿ ಕಾಂಗ್ರೆಸ್‌ 60–70 ಸೀಟು ಪಡೆಯುವುದೇ ಕಷ್ಟ. ಸ್ಪಷ್ಟ ಬಹುಮತ ದೊಂದಿಗೆ ಸರ್ಕಾರ ರಚಿಸುತ್ತೇವೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿ ಕೊಳ್ಳುವ ಸನ್ನಿವೇಶವೇ ಸೃಷ್ಟಿಯಾಗದು ಎಂದು ಹೇಳಿದರು.

‘ರಾಷ್ಟ್ರೀಯ ಪಕ್ಷಗಳ ದೂತರು ಚುನಾವಣೋತ್ತರ ಮೈತ್ರಿಗಾಗಿ ಬಂದಿದ್ದರು ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡರೇ ಹೇಳಿದ್ದಾರಲ್ಲಾ’ ಎಂಬ ಪ್ರಶ್ನೆಗೆ, ‘ಅವರ ಮಾತಿನಲ್ಲಿ ಸತ್ಯಾಂಶವಿಲ್ಲ. ಇಡೀ ದೇಶವೇ ಹೊಗಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೊಬ್ಬರ ಮನೆ ಬಾಗಿಲಿಗೆ ಯಾಕೆ ಹೋಗುತ್ತಾರೆ’ ಎಂದು ಅವರು ಮರು ಪ್ರಶ್ನೆ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT