<p><strong>ಮಂಡ್ಯ:</strong> ಸಂಚಾರ ಪೊಲೀಸರ ತಪಾಸಣೆ ವೇಳೆಯಲ್ಲಿ ಬೈಕ್ ಅಡ್ಡಗಟ್ಟಿದ ಪರಿಣಾಮ ಆಯತಪ್ಪಿ ಕೆಳಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟಿರುವ ಮನಕಲಕುವ ಘಟನೆ ನಗರದ ಸ್ವರ್ಣಸಂದ್ರದ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.</p><p>ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಅಶೋಕ್ ಮತ್ತು ವಾಣಿಶ್ರೀ ದಂಪತಿಯ ಪುತ್ರಿ ಹೃತಿಕ್ಷಾ (3) ಮೃತಪಟ್ಟ ಮಗು.</p><p>ಹೃತಿಕ್ಷಾ ಅವರಿಗೆ ನಾಯಿ ಕಡಿತಕ್ಕೆ ಚಿಕಿತ್ಸೆಗೆಂದು ಮಂಡ್ಯಕ್ಕೆ ಬರುತ್ತಿದ್ದ ವೇಳೆ ಪೊಲೀಸರು ತಪಾಸಣೆ ಮಾಡಲು ಮುಂದಾಗಿದ್ದಾರೆ.</p><p>ಪೊಲೀಸರು ಬೈಕ್ ಹ್ಯಾಂಡಲ್ ಅನ್ನು ಹಿಡಿದುಕೊಂಡಾಗ ಬೈಕ್ ನಲ್ಲಿದ್ದ ಮೂವರು ಆಯತಪ್ಪಿ ಕೆಳಗೆ ಬೀಳುತ್ತಾರೆ. ಈ ವೇಳೆ ಮಗು ಗಂಭೀರವಾಗಿ ಗಾಯಗೊಳ್ಳುತ್ತದೆ ಎಂದು ಮಗುವಿನ ಸಂಬಂಧಿಕರು ದೂರಿದ್ದಾರೆ.</p><p>ಸ್ಥಳದಲ್ಲಿದ್ದ ಸಾರ್ವಜನಿಕರು ಮಗುವನ್ನು ಮಿಮ್ಸ್ ಆಸ್ಪತ್ರೆಗೆ ಆಟೊದಲ್ಲಿ ಕರೆದೊಯ್ಯುತ್ತಾರೆ. ಆದರೆ ಮಾರ್ಗ ಮಧ್ಯೆಯೇ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.</p><p><strong>ಪೊಲೀಸರ ವಿರುದ್ಧ ಪ್ರತಿಭಟನೆ: </strong>ಮಗುವಿನ ಮೃತದೇಹವನ್ನು ಆಸ್ಪತ್ರೆಯಿಂದ ಹೊರತಂದ ಸಂಬಂಧಿಕರು ಮತ್ತು ಹಲವು ಸಂಘಟನೆಗಳ ಮುಖಂಡರು ಆಸ್ಪತ್ರೆಯ ಎದುರು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಿದರು. ಸಂಚಾರ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p><strong>ಮೂರು ಎಎಸ್ಐಗಳ ಅಮಾನತು: </strong>ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು 'ಸಂಚಾರ ಠಾಣೆಯ ಎಎಸ್ಐಗಳಾದ ನಾಗರಾಜು, ಜಯರಾಮು ಮತ್ತು ಗುರುದೇವ್ ಅವರನ್ನು ಅಮಾನತು ಮಾಡಿದ್ದೇವೆ. ಈ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿ, ಶಾಸಕರೊಂದಿಗೆ ಮಾತನಾಡಿ ಸೂಕ್ತ ಪರಿಹಾರ ಕೊಡಿಸುತ್ತೇವೆ" ಎಂದು ಭರವಸೆ ನೀಡಿದರು. ಆನಂತರ ಪರಿಸ್ಥಿತಿ ತಿಳಿಗೊಂಡಿತು.</p>.ಮಂಡ್ಯ | ಬಾಲಕಿ ಸಾವು ಮನಸ್ಸು ಕಲಕಿದೆ, ಪೊಲೀಸರು ಸೂಕ್ಷ್ಮವಾಗಿ ವರ್ತಿಸಲಿ: HDK.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಸಂಚಾರ ಪೊಲೀಸರ ತಪಾಸಣೆ ವೇಳೆಯಲ್ಲಿ ಬೈಕ್ ಅಡ್ಡಗಟ್ಟಿದ ಪರಿಣಾಮ ಆಯತಪ್ಪಿ ಕೆಳಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟಿರುವ ಮನಕಲಕುವ ಘಟನೆ ನಗರದ ಸ್ವರ್ಣಸಂದ್ರದ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.</p><p>ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಅಶೋಕ್ ಮತ್ತು ವಾಣಿಶ್ರೀ ದಂಪತಿಯ ಪುತ್ರಿ ಹೃತಿಕ್ಷಾ (3) ಮೃತಪಟ್ಟ ಮಗು.</p><p>ಹೃತಿಕ್ಷಾ ಅವರಿಗೆ ನಾಯಿ ಕಡಿತಕ್ಕೆ ಚಿಕಿತ್ಸೆಗೆಂದು ಮಂಡ್ಯಕ್ಕೆ ಬರುತ್ತಿದ್ದ ವೇಳೆ ಪೊಲೀಸರು ತಪಾಸಣೆ ಮಾಡಲು ಮುಂದಾಗಿದ್ದಾರೆ.</p><p>ಪೊಲೀಸರು ಬೈಕ್ ಹ್ಯಾಂಡಲ್ ಅನ್ನು ಹಿಡಿದುಕೊಂಡಾಗ ಬೈಕ್ ನಲ್ಲಿದ್ದ ಮೂವರು ಆಯತಪ್ಪಿ ಕೆಳಗೆ ಬೀಳುತ್ತಾರೆ. ಈ ವೇಳೆ ಮಗು ಗಂಭೀರವಾಗಿ ಗಾಯಗೊಳ್ಳುತ್ತದೆ ಎಂದು ಮಗುವಿನ ಸಂಬಂಧಿಕರು ದೂರಿದ್ದಾರೆ.</p><p>ಸ್ಥಳದಲ್ಲಿದ್ದ ಸಾರ್ವಜನಿಕರು ಮಗುವನ್ನು ಮಿಮ್ಸ್ ಆಸ್ಪತ್ರೆಗೆ ಆಟೊದಲ್ಲಿ ಕರೆದೊಯ್ಯುತ್ತಾರೆ. ಆದರೆ ಮಾರ್ಗ ಮಧ್ಯೆಯೇ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.</p><p><strong>ಪೊಲೀಸರ ವಿರುದ್ಧ ಪ್ರತಿಭಟನೆ: </strong>ಮಗುವಿನ ಮೃತದೇಹವನ್ನು ಆಸ್ಪತ್ರೆಯಿಂದ ಹೊರತಂದ ಸಂಬಂಧಿಕರು ಮತ್ತು ಹಲವು ಸಂಘಟನೆಗಳ ಮುಖಂಡರು ಆಸ್ಪತ್ರೆಯ ಎದುರು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಿದರು. ಸಂಚಾರ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p><strong>ಮೂರು ಎಎಸ್ಐಗಳ ಅಮಾನತು: </strong>ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು 'ಸಂಚಾರ ಠಾಣೆಯ ಎಎಸ್ಐಗಳಾದ ನಾಗರಾಜು, ಜಯರಾಮು ಮತ್ತು ಗುರುದೇವ್ ಅವರನ್ನು ಅಮಾನತು ಮಾಡಿದ್ದೇವೆ. ಈ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿ, ಶಾಸಕರೊಂದಿಗೆ ಮಾತನಾಡಿ ಸೂಕ್ತ ಪರಿಹಾರ ಕೊಡಿಸುತ್ತೇವೆ" ಎಂದು ಭರವಸೆ ನೀಡಿದರು. ಆನಂತರ ಪರಿಸ್ಥಿತಿ ತಿಳಿಗೊಂಡಿತು.</p>.ಮಂಡ್ಯ | ಬಾಲಕಿ ಸಾವು ಮನಸ್ಸು ಕಲಕಿದೆ, ಪೊಲೀಸರು ಸೂಕ್ಷ್ಮವಾಗಿ ವರ್ತಿಸಲಿ: HDK.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>