<p><strong>ರಾಮನಗರ</strong>: ‘ರಾಜ್ಯದಲ್ಲಿ ಬರಗಾಲವಿರುವುದರಿಂದ ಜಲಾಶಯಗಳಲ್ಲೂ ನೀರು ಕಡಿಮೆಯಾಗಿದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆ ಕುಸಿದಿದ್ದು, ಸ್ವಲ್ಪ ಲೋಡ್ ಶೆಡ್ಡಿಂಗ್ ಇದೆ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.</p><p>ಅಘೋಷಿತ ಲೋಡ್ ಶೆಡ್ಡಿಂಗ್ ಕುರಿತು ನಗರದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ವಿದ್ಯುತ್ಗಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದಾರೆ. ಜೊತೆಗೆ ನೆರೆಯ ರಾಜ್ಯಗಳ ಮೊರೆ ಹೋಗಲಾಗಿದೆ’ ಎಂದರು.</p><p><strong>ಅನುದಾನ ಕಡಿತ ನಿಜ:</strong> ‘ಬಿಜೆಪಿ ಶಾಸಕ ಮುನಿರತ್ನ ಅವರ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಅನುದಾನ ಕಡಿತವಾಗಿರುವುದು ನಿಜ. ಐದು ವರ್ಷದ ಹಿಂದಿನ ಸ್ಥಿತಿ ಹೇಗಿತ್ತು ಎಂಬುದನ್ನು ಮುನಿರತ್ನ ಒಮ್ಮೆ ನೆನಪಿಸಿಕೊಳ್ಳಲಿ. ಆಗ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ₹ 400 ಕೋಟಿ ಅನುದಾನ ಕೊಟ್ಟಿದ್ದರು. ಬಿಜೆಪಿ ಬಂದ ಬಳಿಕ ₹ 260 ಕೋಟಿ ಕಡಿತ ಮಾಡಿದ್ದರು’ ಎಂದು ಗಮನ ಸೆಳೆದರು.</p>.ಅಧಿಕಾರ ಇದ್ದಾಗ BJP ಎಷ್ಟು ಪ್ರಮಾಣ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು: ಡಿಕೆಶಿ.<p>‘ನಂತರ ಅಧಿಕಾರಕ್ಕೆ ಬಂದ ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ನೀಡಿದ್ದ ₹ 7 ಸಾವಿರ ಕೋಟಿ ಅನುದಾನದ ಪೈಕಿ, ₹ 5 ಸಾವಿರ ಕೋಟಿ ಕಡಿತ ಮಾಡಿದ್ದರು. ಬೆಂಗಳೂರಿನ 14 ಬಿಜೆಪಿ ಶಾಸಕರು ₹ 9 ಸಾವಿರ ಕೋಟಿ ಅನುದಾನ ತೆಗೆದುಕೊಂಡಿದ್ದರು. 12 ಕಾಂಗ್ರೆಸ್ ಶಾಸಕರಿಗೆ ಕೇವಲ ₹ 1,450 ಕೋಟಿ ಕೊಟ್ಟಿದ್ದರು. ಅನುದಾನ ಕಡಿತವಾಗಿದೆ ಎನ್ನುವವರು ಹಿಂದೆ ಏನಾಗಿತ್ತು ಎಂಬುದನ್ನು ಸಹ ಹೇಳಬೇಕಲ್ಲವೆ? ಬಿಜೆಪಿಯವರು ಮಾಡಿದ್ದನ್ನು ಜನರ ಮುಂದಿಡಬೇಕಲ್ಲವೆ? ಆದರೂ, ಮುನಿರತ್ನ ಅವರಿಗೆ ಅನುದಾನ ಕೊಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೇಳುತ್ತೇನೆ’ ಎಂದರು. </p><p>‘ಪಠ್ಯ ಪುಸ್ತಕ ಪರಿಷ್ಕರಣೆಗೆ ಹೊರ ರಾಜ್ಯದವರನ್ನು ನೇಮಿಸಿರುವ ಕುರಿತು ನನಗೆ ಮಾಹಿತಿ ಇಲ್ಲ. ಆದರೆ, ಹಿಂದೆ ಬಿಜೆಪಿಯವರು ರಾಜ್ಯದ ದೊಡ್ಡ ವ್ಯಕ್ತಿಯನ್ನೇ ನೇಮಕ ಮಾಡಿದ್ದರು. ಆಗ ಏನೆಲ್ಲಾ ಆವಾಂತರವಾಯಿತು ಎಂದು ಜನರಿಗೆ ಗೊತ್ತಿದೆ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ರಾಜ್ಯದಲ್ಲಿ ಬರಗಾಲವಿರುವುದರಿಂದ ಜಲಾಶಯಗಳಲ್ಲೂ ನೀರು ಕಡಿಮೆಯಾಗಿದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆ ಕುಸಿದಿದ್ದು, ಸ್ವಲ್ಪ ಲೋಡ್ ಶೆಡ್ಡಿಂಗ್ ಇದೆ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.</p><p>ಅಘೋಷಿತ ಲೋಡ್ ಶೆಡ್ಡಿಂಗ್ ಕುರಿತು ನಗರದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ವಿದ್ಯುತ್ಗಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದಾರೆ. ಜೊತೆಗೆ ನೆರೆಯ ರಾಜ್ಯಗಳ ಮೊರೆ ಹೋಗಲಾಗಿದೆ’ ಎಂದರು.</p><p><strong>ಅನುದಾನ ಕಡಿತ ನಿಜ:</strong> ‘ಬಿಜೆಪಿ ಶಾಸಕ ಮುನಿರತ್ನ ಅವರ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಅನುದಾನ ಕಡಿತವಾಗಿರುವುದು ನಿಜ. ಐದು ವರ್ಷದ ಹಿಂದಿನ ಸ್ಥಿತಿ ಹೇಗಿತ್ತು ಎಂಬುದನ್ನು ಮುನಿರತ್ನ ಒಮ್ಮೆ ನೆನಪಿಸಿಕೊಳ್ಳಲಿ. ಆಗ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ₹ 400 ಕೋಟಿ ಅನುದಾನ ಕೊಟ್ಟಿದ್ದರು. ಬಿಜೆಪಿ ಬಂದ ಬಳಿಕ ₹ 260 ಕೋಟಿ ಕಡಿತ ಮಾಡಿದ್ದರು’ ಎಂದು ಗಮನ ಸೆಳೆದರು.</p>.ಅಧಿಕಾರ ಇದ್ದಾಗ BJP ಎಷ್ಟು ಪ್ರಮಾಣ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು: ಡಿಕೆಶಿ.<p>‘ನಂತರ ಅಧಿಕಾರಕ್ಕೆ ಬಂದ ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ನೀಡಿದ್ದ ₹ 7 ಸಾವಿರ ಕೋಟಿ ಅನುದಾನದ ಪೈಕಿ, ₹ 5 ಸಾವಿರ ಕೋಟಿ ಕಡಿತ ಮಾಡಿದ್ದರು. ಬೆಂಗಳೂರಿನ 14 ಬಿಜೆಪಿ ಶಾಸಕರು ₹ 9 ಸಾವಿರ ಕೋಟಿ ಅನುದಾನ ತೆಗೆದುಕೊಂಡಿದ್ದರು. 12 ಕಾಂಗ್ರೆಸ್ ಶಾಸಕರಿಗೆ ಕೇವಲ ₹ 1,450 ಕೋಟಿ ಕೊಟ್ಟಿದ್ದರು. ಅನುದಾನ ಕಡಿತವಾಗಿದೆ ಎನ್ನುವವರು ಹಿಂದೆ ಏನಾಗಿತ್ತು ಎಂಬುದನ್ನು ಸಹ ಹೇಳಬೇಕಲ್ಲವೆ? ಬಿಜೆಪಿಯವರು ಮಾಡಿದ್ದನ್ನು ಜನರ ಮುಂದಿಡಬೇಕಲ್ಲವೆ? ಆದರೂ, ಮುನಿರತ್ನ ಅವರಿಗೆ ಅನುದಾನ ಕೊಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೇಳುತ್ತೇನೆ’ ಎಂದರು. </p><p>‘ಪಠ್ಯ ಪುಸ್ತಕ ಪರಿಷ್ಕರಣೆಗೆ ಹೊರ ರಾಜ್ಯದವರನ್ನು ನೇಮಿಸಿರುವ ಕುರಿತು ನನಗೆ ಮಾಹಿತಿ ಇಲ್ಲ. ಆದರೆ, ಹಿಂದೆ ಬಿಜೆಪಿಯವರು ರಾಜ್ಯದ ದೊಡ್ಡ ವ್ಯಕ್ತಿಯನ್ನೇ ನೇಮಕ ಮಾಡಿದ್ದರು. ಆಗ ಏನೆಲ್ಲಾ ಆವಾಂತರವಾಯಿತು ಎಂದು ಜನರಿಗೆ ಗೊತ್ತಿದೆ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>