<p><strong>ಪೆಶಾವರ:</strong> ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಾಲ್ವರು ಶಂಕಿತ ಭಯೋತ್ಪಾದಕರನ್ನು ಪೊಲೀಸರು ಹತ್ಯೆಗೈದಿದ್ದಾರೆ.</p>.<p>ಭಯೋತ್ಪಾದನಾ ನಿಗ್ರಹ ಪಡೆ ತಡರಾತ್ರಿ ನಡೆಸಿದ ಗುಪ್ತಚರ ಕಾರ್ಯಾಚರಣೆಯಲ್ಲಿ ಆತ್ಮಹತ್ಯಾ ಬಾಂಬರ್ ಮತ್ತು ಆತನ ಸಹಚರನನ್ನು ಹತ್ಯೆ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ದಾಳಿ ಮಾಡಲು ಉಗ್ರರು ಸಂಚು ರೂಪಿಸಿದ್ದರು ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ದಾಳಿಯ ಬಳಿಕ ಮದ್ದುಗಂಡುಗಳು, ಪಿಸ್ತೂಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತ್ಮಹತ್ಯಾ ಬಾಂಬರ್ ಮುನೀರ್ ಅಹ್ಮದ್ ಎಂಬವನನ್ನು ಗುಪ್ತಚರ ಪಡೆಯು ಕಳೆದ ನವೆಂಬರ್ನಿಂದ ಹುಡುಕುತ್ತಿತ್ತು ಎಂದು ಅಧಿಕಾರಿ ಸೋಮವಾರ ತಿಳಿಸಿದರು.</p>.<p class="title">ಹಲವು ಅಪರಾಧಗಳಲ್ಲಿ ಭಾಗಿಯಾಗಿ ಅಫ್ಗಾನಿಸ್ತಾನದ ಪೊಲೀಸರಿಗೆ ಬೇಕಾಗಿದ್ದ ಅಹ್ಮದ್, ಖೋಸ್ಟ್ನಿಂದ ಪಾಕಿಸ್ತಾನ ಪ್ರವೇಶಿಸಿದ್ದಾನೆ. ವಿಶೇಷ ತನಿಖಾ ತಂಡವು ಪ್ರಕರಣದ ಸಂಬಂಧ ವಿಚಾರಣೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೆಶಾವರ:</strong> ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಾಲ್ವರು ಶಂಕಿತ ಭಯೋತ್ಪಾದಕರನ್ನು ಪೊಲೀಸರು ಹತ್ಯೆಗೈದಿದ್ದಾರೆ.</p>.<p>ಭಯೋತ್ಪಾದನಾ ನಿಗ್ರಹ ಪಡೆ ತಡರಾತ್ರಿ ನಡೆಸಿದ ಗುಪ್ತಚರ ಕಾರ್ಯಾಚರಣೆಯಲ್ಲಿ ಆತ್ಮಹತ್ಯಾ ಬಾಂಬರ್ ಮತ್ತು ಆತನ ಸಹಚರನನ್ನು ಹತ್ಯೆ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ದಾಳಿ ಮಾಡಲು ಉಗ್ರರು ಸಂಚು ರೂಪಿಸಿದ್ದರು ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ದಾಳಿಯ ಬಳಿಕ ಮದ್ದುಗಂಡುಗಳು, ಪಿಸ್ತೂಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತ್ಮಹತ್ಯಾ ಬಾಂಬರ್ ಮುನೀರ್ ಅಹ್ಮದ್ ಎಂಬವನನ್ನು ಗುಪ್ತಚರ ಪಡೆಯು ಕಳೆದ ನವೆಂಬರ್ನಿಂದ ಹುಡುಕುತ್ತಿತ್ತು ಎಂದು ಅಧಿಕಾರಿ ಸೋಮವಾರ ತಿಳಿಸಿದರು.</p>.<p class="title">ಹಲವು ಅಪರಾಧಗಳಲ್ಲಿ ಭಾಗಿಯಾಗಿ ಅಫ್ಗಾನಿಸ್ತಾನದ ಪೊಲೀಸರಿಗೆ ಬೇಕಾಗಿದ್ದ ಅಹ್ಮದ್, ಖೋಸ್ಟ್ನಿಂದ ಪಾಕಿಸ್ತಾನ ಪ್ರವೇಶಿಸಿದ್ದಾನೆ. ವಿಶೇಷ ತನಿಖಾ ತಂಡವು ಪ್ರಕರಣದ ಸಂಬಂಧ ವಿಚಾರಣೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>