ಪ್ರಕರಣದ ಹಾದಿ
ಎಷ್ಟೇ ಪ್ರಭಾವಶಾಲಿಯಾಗಿರಲಿ ಅಧಿಕಾರಸ್ಥರೇ ಆಗಿರಲಿ ಕಾನೂನಿಗಿಂತ ಯಾರೂ ಮೇಲಿಲ್ಲ. ಈ ಮೂಲಭೂತ ತತ್ವವನ್ನು ಇಂದಿನ ತೀರ್ಪು ನಿರೂಪಿಸಿದೆಮೊಹಮ್ಮದ್ ಯೂನುಸ್ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ
‘ನನಗೆ ಭಯವಿಲ್ಲ’
ಜನಾದೇಶವನ್ನೇ ಪಡೆಯದ ಸರ್ಕಾರದಿಂದ ಈ ನ್ಯಾಯಮಂಡಳಿಯನ್ನು ರಚಿಸಲಾಗಿದೆ. ಇಂಥ ಮೋಸದ ನ್ಯಾಯಮಂಡಳಿಯ ನೀಡಿದ ತೀರ್ಪು ಇದು. ಈ ತೀರ್ಪು ರಾಜಕೀಯ ಪ್ರೇರಿತವಾಗಿದ್ದು ಪಕ್ಷಪಾತಿಯಾಗಿದೆ. ಮರಣದಂಡನೆ ವಿಧಿಸಿರುವುದು ಅಸಹ್ಯಕರ. ಜನರಿಂದ ಆಯ್ಕೆಯಾಗಿದ್ದ ಪ್ರಧಾನಿಯೊಬ್ಬರನ್ನು ಮತ್ತು ಅವಾಮಿ ಲೀಗ್ ಪಕ್ಷವನ್ನು ಅಳಿಸಿ ಹಾಕುವ ಉದ್ದೇಶವು ಮಧ್ಯಂತರ ಸರ್ಕಾರಕ್ಕಿದೆ ಎಂಬುದನ್ನು ಇದು ತೋರಿಸುತ್ತದೆ. ಎಲ್ಲ ಸಾಕ್ಷ್ಯಗಳನ್ನು ನ್ಯಾಯಯುತವಾಗಿ ತುಲನೆ ಮಾಡುವ ನ್ಯಾಯಮಂಡಳಿಯ ಎದುರು ನನ್ನ ಮೇಲೆ ಆರೋಪ ಹೊರಿಸಿದವರನ್ನು ಎದುರಿಸಲು ನಾನು ಭಯಪಡುವುದಿಲ್ಲಶೇಕ್ ಹಸೀನಾ ಬಾಂಗ್ಲಾದ ಮಾಜಿ ಪ್ರಧಾನಿ
ಹಸೀನಾ ಮತ್ತು ಕಮಾಲ್ ಅವರನ್ನು ತಕ್ಷಣವೇ ಬಾಂಗ್ಲಾದೇಶಕ್ಕೆ ಹಸ್ತಾಂತರಿಸಿ. ಅಪರಾಧಿಗಳಿಗೆ ಆಶ್ರಯ ನೀಡುವುದು ಎರಡೂ ದೇಶಗಳ ಸ್ನೇಹಕ್ಕೆ ಮತ್ತು ನ್ಯಾಯದಾನಕ್ಕೆ ಮಾಡುವ ಅಪಚಾರ ಎಂದೇ ಭಾವಿಸಬೇಕಾಗುತ್ತದೆ. ಜೊತೆಗೆ ನಮ್ಮ ನಡುವಿನ ಹಸ್ತಾಂತರ ಒಪ್ಪಂದದ ಅನ್ವಯವೂ ಈ ಇಬ್ಬರನ್ನೂ ನಮಗೆ ಹಸ್ತಾಂತರಿಸಲೇಬೇಕುಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ
ನ್ಯಾಯಮಂಡಳಿಯ ತೀರ್ಪನ್ನು ಭಾರತವು ಗಮನಿಸಿದೆ. ಬಾಂಗ್ಲಾದೇಶವು ನೆರೆಯ ದೇಶವಾಗಿದ್ದು ಭಾರತವು ಎರಡೂ ದೇಶಗಳ ಜನರ ಹಿತಾಸಕ್ತಿಗೆ ಬದ್ಧವಾಗಿದೆ. ಶಾಂತಿ ಪ್ರಜಾಪ್ರಭುತ್ವ ಮತ್ತು ಸ್ಥಿರತೆ ವಿಚಾರದಲ್ಲಿಯೂ ನಮಗೆ ಬದ್ಧತೆ ಇದೆ. ನಾವು ಎಲ್ಲರೊಂದಿಗೂ ಸಕಾರಾತ್ಮಕವಾಗಿ ಇರಲಿದ್ದೇವೆಭಾರತದ ವಿದೇಶಾಂಗ ಸಚಿವಾಲಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.