<p><strong>ವಿಶ್ವಸಂಸ್ಥೆ:</strong> ಗಾಜಾದಲ್ಲಿನ ದೀರ್ಘಕಾಲದ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಕೈಗೊಂಡಿರುವ ಕಾರ್ಯಕ್ಕೆ ಭಾರತ ಮೆಚ್ಚುಗೆ ವ್ಯಕ್ತಪಡಿಸಿದೆ.</p>.<p>ಗಾಜಾ ಸಂಘರ್ಷ ಪರಿಹರಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಕೈಗೊಂಡಿದ್ದ ನಿರ್ಣಯ ಅನುಷ್ಠಾನದ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಭಾರತ ಹೇಳಿದೆ. </p>.<p>ಈ ಕುರಿತು ಭದ್ರತಾ ಮಂಡಳಿಯ ಚರ್ಚೆಯ ವೇಳೆ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿ ಪರ್ವತನೇನಿ ಹರೀಶ್ ಹೇಳಿಕೆ ನೀಡಿದ್ದಾರೆ. </p>.<p>ಗಾಜಾದ ಪುನರ್ ನಿರ್ಮಾಣ, ಆರ್ಥಿಕ ಚೇತರಿಕೆ, ಸಾರ್ವಜನಿಕ ಸೇವೆಗಳು ಮತ್ತು ಮಾನವೀಯ ನೆರವು ಒದಗಿಸಲು ಅಂತರರಾಷ್ಟ್ರೀಯ ಸಮುದಾಯದ ನಿರಂತರ ಬೆಂಬಲ ಮತ್ತು ಬದ್ಧತೆಯ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<p>‘ಇದೇ ವೇಳೆ ಭಯೋತ್ಪಾದನೆಗೆ ನಾಗರಿಕ ಸಮಾಜದಲ್ಲಿ ಸ್ಥಾನವಿಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸಬೇಕಿದೆ’ ಎಂದಿದ್ದಾರೆ. </p>
<p><strong>ವಿಶ್ವಸಂಸ್ಥೆ:</strong> ಗಾಜಾದಲ್ಲಿನ ದೀರ್ಘಕಾಲದ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಕೈಗೊಂಡಿರುವ ಕಾರ್ಯಕ್ಕೆ ಭಾರತ ಮೆಚ್ಚುಗೆ ವ್ಯಕ್ತಪಡಿಸಿದೆ.</p>.<p>ಗಾಜಾ ಸಂಘರ್ಷ ಪರಿಹರಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಕೈಗೊಂಡಿದ್ದ ನಿರ್ಣಯ ಅನುಷ್ಠಾನದ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಭಾರತ ಹೇಳಿದೆ. </p>.<p>ಈ ಕುರಿತು ಭದ್ರತಾ ಮಂಡಳಿಯ ಚರ್ಚೆಯ ವೇಳೆ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿ ಪರ್ವತನೇನಿ ಹರೀಶ್ ಹೇಳಿಕೆ ನೀಡಿದ್ದಾರೆ. </p>.<p>ಗಾಜಾದ ಪುನರ್ ನಿರ್ಮಾಣ, ಆರ್ಥಿಕ ಚೇತರಿಕೆ, ಸಾರ್ವಜನಿಕ ಸೇವೆಗಳು ಮತ್ತು ಮಾನವೀಯ ನೆರವು ಒದಗಿಸಲು ಅಂತರರಾಷ್ಟ್ರೀಯ ಸಮುದಾಯದ ನಿರಂತರ ಬೆಂಬಲ ಮತ್ತು ಬದ್ಧತೆಯ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<p>‘ಇದೇ ವೇಳೆ ಭಯೋತ್ಪಾದನೆಗೆ ನಾಗರಿಕ ಸಮಾಜದಲ್ಲಿ ಸ್ಥಾನವಿಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸಬೇಕಿದೆ’ ಎಂದಿದ್ದಾರೆ. </p>