<p><strong>ವಿಶ್ವಸಂಸ್ಥೆ</strong>: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನವನ್ನು ಭಾರತ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ತನ್ನದೇ ಜನರ ಮೇಲೆ ಬಾಂಬ್ ದಾಳಿ ನಡೆಸುವ ಮತ್ತು ವ್ಯವಸ್ಥಿತ ನರಮೇಧ ನಡೆಸುವ ದೇಶ ಎಂದು ಹೇಳಿದೆ.</p><p>‘ಮಹಿಳೆಯರು, ಶಾಂತಿ ಮತ್ತು ಭದ್ರತೆ’ ಕುರಿತು ಯುಎನ್ಎಸ್ಸಿಯಲ್ಲಿ ನಡೆದ ಮುಕ್ತ ಚರ್ಚೆ ವೇಳೆ ನೀಡಿದ ಹೇಳಿಕೆಯಲ್ಲಿ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್, ಪಾಕಿಸ್ತಾನವು 1971ರಲ್ಲಿ ಆಪರೇಷನ್ ಸರ್ಚ್ಲೈಟ್ ಅನ್ನು ನಡೆಸಿತು. ತನ್ನದೇ ಸೈನ್ಯದಿಂದ 4 ಲಕ್ಷ ಮಹಿಳಾ ನಾಗರಿಕರ ಮೇಲೆ ವ್ಯವಸ್ಥಿತವಾಗಿ ಸಾಮೂಹಿಕ ಅತ್ಯಾಚಾರ ನಡೆಸಲು ಅನುಮೋದಿಸಿತು ಎಂದು ಹೇಳಿದರು.</p><p>ದುರಾದೃಷ್ಟವಶಾತ್, ಪ್ರತಿ ವರ್ಷ ನನ್ನ ದೇಶದ ವಿರುದ್ಧ, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪಾಕ್ನಿಂದ ಹುರುಳಿಲ್ಲದ ಟೀಕೆಗಳನ್ನು ಕೇಳುತ್ತಿದ್ದೇವೆ ಎಂದೂ ಹೇಳಿದರು.</p><p>‘ತನ್ನದೇ ಜನರ ಮೇಲೆ ಬಾಂಬ್ ದಾಳಿ ಮಾಡುವ, ವ್ಯವಸ್ಥಿತ ನರಮೇಧವನ್ನು ನಡೆಸುವ ದೇಶವು ತಪ್ಪು ನಿರ್ದೇಶನ ಮತ್ತು ಅತಿಶಯೋಕ್ತಿಯಿಂದ ಜಗತ್ತನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸಬಹುದು’ ಎಂದು ಹರೀಶ್ ಹೇಳಿದರು. ಪಾಕಿಸ್ತಾನದ ಅಪಪ್ರಚಾರವನ್ನು ಜಗತ್ತು ನೋಡಿದೆ ಎಂದು ಹೇಳಿದರು.</p><p>1971ರ ಮಾರ್ಚ್ 25ರಂದು ಆಪರೇಷನ್ ಸರ್ಚ್ಲೈಟ್ ಹೆಸರಲ್ಲಿ ಪೂರ್ವ ಪಾಕಿಸ್ತಾನದಲ್ಲಿ ನಾಗರಿಕರ ಸಾಮೂಹಿಕ ಹತ್ಯೆ ನಡೆಸಿತ್ತು. </p><p>ಮಹಿಳೆಯರು, ಶಾಂತಿ ಮತ್ತು ಭದ್ರತೆ ಕಾರ್ಯಸೂಚಿಯಲ್ಲಿ ಭಾರತದ ದಾಖಲೆ ಕಳಂಕರಹಿತವಾದದ್ದಾಗಿದೆ ಎಂದು ಹರೀಶ್, ರಷ್ಯಾ ಅಧ್ಯಕ್ಷತೆಯಲ್ಲಿ ನಡೆದ ಭದ್ರತಾ ಮಂಡಳಿ ಸಭೆಯಲ್ಲಿ ಹೇಳಿದರು.</p><p>ಪಾಕಿಸ್ತಾನವು ತನ್ನ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯ ಎತ್ತಿದ ನಂತರ ಭಾರತದ ಬಲವಾದ ಪ್ರತಿಕ್ರಿಯೆ ಬಂದಿತು. </p><p>‘ಭಾರತವು ದೇಶದ ಮಹಿಳೆಯರ ಗುಂಪಿನಿಂದ ಕಾಶ್ಮೀರಿ ಮಹಿಳೆಯರನ್ನು ಹೊರಗಿಟ್ಟು, ಶಾಂತಿ ಮತ್ತು ಭದ್ರತಾ ಕಾರ್ಯಸೂಚಿಯನ್ನು ತನ್ನ ನ್ಯಾಯವ್ಯವಸ್ಥೆಯಿಂದ ಅಳಿಸಿಹಾಕಿದೆ’ ಎಂದು ಪಾಕಿಸ್ತಾನಿ ಪ್ರತಿನಿಧಿ ಹೇಳಿಕೆ ನಂತರ ಭಾರತ ಪ್ರತ್ಯುತ್ತರ ನೀಡಿದೆ.</p><p>ಮಹಿಳೆಯರು, ಶಾಂತಿ ಮತ್ತು ಭದ್ರತೆ ಕಾರ್ಯಸೂಚಿಗೆ ಭಾರತದ ಬದ್ಧತೆ ಅಚಲವಾಗಿದೆ ಎಂದು ಹರೀಶ್ ಅವರು ಪ್ರತಿಕ್ರಿಯಿಸಿದ್ದಾರೆ.</p><p>ಜಾಗತಿಕ ಶಾಂತಿಗೆ ಅದರ ಬದ್ಧತೆಯ ಅಭಿವ್ಯಕ್ತಿಯಾಗಿ ವಿಶ್ವಸಂಸ್ಥೆಯ ಶಾಂತಿಪಾಲನೆಗೆ ಭಾರತದ ಸ್ಥಿರ ಕೊಡುಗೆಯನ್ನು ಅವರು ಎತ್ತಿ ತೋರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ</strong>: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನವನ್ನು ಭಾರತ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ತನ್ನದೇ ಜನರ ಮೇಲೆ ಬಾಂಬ್ ದಾಳಿ ನಡೆಸುವ ಮತ್ತು ವ್ಯವಸ್ಥಿತ ನರಮೇಧ ನಡೆಸುವ ದೇಶ ಎಂದು ಹೇಳಿದೆ.</p><p>‘ಮಹಿಳೆಯರು, ಶಾಂತಿ ಮತ್ತು ಭದ್ರತೆ’ ಕುರಿತು ಯುಎನ್ಎಸ್ಸಿಯಲ್ಲಿ ನಡೆದ ಮುಕ್ತ ಚರ್ಚೆ ವೇಳೆ ನೀಡಿದ ಹೇಳಿಕೆಯಲ್ಲಿ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್, ಪಾಕಿಸ್ತಾನವು 1971ರಲ್ಲಿ ಆಪರೇಷನ್ ಸರ್ಚ್ಲೈಟ್ ಅನ್ನು ನಡೆಸಿತು. ತನ್ನದೇ ಸೈನ್ಯದಿಂದ 4 ಲಕ್ಷ ಮಹಿಳಾ ನಾಗರಿಕರ ಮೇಲೆ ವ್ಯವಸ್ಥಿತವಾಗಿ ಸಾಮೂಹಿಕ ಅತ್ಯಾಚಾರ ನಡೆಸಲು ಅನುಮೋದಿಸಿತು ಎಂದು ಹೇಳಿದರು.</p><p>ದುರಾದೃಷ್ಟವಶಾತ್, ಪ್ರತಿ ವರ್ಷ ನನ್ನ ದೇಶದ ವಿರುದ್ಧ, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪಾಕ್ನಿಂದ ಹುರುಳಿಲ್ಲದ ಟೀಕೆಗಳನ್ನು ಕೇಳುತ್ತಿದ್ದೇವೆ ಎಂದೂ ಹೇಳಿದರು.</p><p>‘ತನ್ನದೇ ಜನರ ಮೇಲೆ ಬಾಂಬ್ ದಾಳಿ ಮಾಡುವ, ವ್ಯವಸ್ಥಿತ ನರಮೇಧವನ್ನು ನಡೆಸುವ ದೇಶವು ತಪ್ಪು ನಿರ್ದೇಶನ ಮತ್ತು ಅತಿಶಯೋಕ್ತಿಯಿಂದ ಜಗತ್ತನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸಬಹುದು’ ಎಂದು ಹರೀಶ್ ಹೇಳಿದರು. ಪಾಕಿಸ್ತಾನದ ಅಪಪ್ರಚಾರವನ್ನು ಜಗತ್ತು ನೋಡಿದೆ ಎಂದು ಹೇಳಿದರು.</p><p>1971ರ ಮಾರ್ಚ್ 25ರಂದು ಆಪರೇಷನ್ ಸರ್ಚ್ಲೈಟ್ ಹೆಸರಲ್ಲಿ ಪೂರ್ವ ಪಾಕಿಸ್ತಾನದಲ್ಲಿ ನಾಗರಿಕರ ಸಾಮೂಹಿಕ ಹತ್ಯೆ ನಡೆಸಿತ್ತು. </p><p>ಮಹಿಳೆಯರು, ಶಾಂತಿ ಮತ್ತು ಭದ್ರತೆ ಕಾರ್ಯಸೂಚಿಯಲ್ಲಿ ಭಾರತದ ದಾಖಲೆ ಕಳಂಕರಹಿತವಾದದ್ದಾಗಿದೆ ಎಂದು ಹರೀಶ್, ರಷ್ಯಾ ಅಧ್ಯಕ್ಷತೆಯಲ್ಲಿ ನಡೆದ ಭದ್ರತಾ ಮಂಡಳಿ ಸಭೆಯಲ್ಲಿ ಹೇಳಿದರು.</p><p>ಪಾಕಿಸ್ತಾನವು ತನ್ನ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯ ಎತ್ತಿದ ನಂತರ ಭಾರತದ ಬಲವಾದ ಪ್ರತಿಕ್ರಿಯೆ ಬಂದಿತು. </p><p>‘ಭಾರತವು ದೇಶದ ಮಹಿಳೆಯರ ಗುಂಪಿನಿಂದ ಕಾಶ್ಮೀರಿ ಮಹಿಳೆಯರನ್ನು ಹೊರಗಿಟ್ಟು, ಶಾಂತಿ ಮತ್ತು ಭದ್ರತಾ ಕಾರ್ಯಸೂಚಿಯನ್ನು ತನ್ನ ನ್ಯಾಯವ್ಯವಸ್ಥೆಯಿಂದ ಅಳಿಸಿಹಾಕಿದೆ’ ಎಂದು ಪಾಕಿಸ್ತಾನಿ ಪ್ರತಿನಿಧಿ ಹೇಳಿಕೆ ನಂತರ ಭಾರತ ಪ್ರತ್ಯುತ್ತರ ನೀಡಿದೆ.</p><p>ಮಹಿಳೆಯರು, ಶಾಂತಿ ಮತ್ತು ಭದ್ರತೆ ಕಾರ್ಯಸೂಚಿಗೆ ಭಾರತದ ಬದ್ಧತೆ ಅಚಲವಾಗಿದೆ ಎಂದು ಹರೀಶ್ ಅವರು ಪ್ರತಿಕ್ರಿಯಿಸಿದ್ದಾರೆ.</p><p>ಜಾಗತಿಕ ಶಾಂತಿಗೆ ಅದರ ಬದ್ಧತೆಯ ಅಭಿವ್ಯಕ್ತಿಯಾಗಿ ವಿಶ್ವಸಂಸ್ಥೆಯ ಶಾಂತಿಪಾಲನೆಗೆ ಭಾರತದ ಸ್ಥಿರ ಕೊಡುಗೆಯನ್ನು ಅವರು ಎತ್ತಿ ತೋರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>