<p><strong>ನವದೆಹಲಿ:</strong> ಇರಾನ್ನಲ್ಲಿ ಪರಿಸ್ಥಿತಿ ವಿಷಮಗೊಂಡಿರುವ ಬೆನ್ನಲ್ಲೇ, ವಾಣಿಜ್ಯ ವಿಮಾನ ಸೇರಿದಂತೆ ಲಭ್ಯವಿರುವ ಎಲ್ಲ ಸಾರಿಗೆ ಸೌಲಭ್ಯಗಳನ್ನು ಬಳಸಿಕೊಂಡು ದೇಶ ಬಿಟ್ಟು ಮರಳುವಂತೆ ಭಾರತವು ತನ್ನ ನಾಗರಿಕರಿಗೆ ಸೂಚನೆ ನೀಡಿದೆ.</p><p>ಟೆಹರಾನ್ನಲ್ಲಿ ಮತ್ತೆ ಪ್ರತಿಭಟನೆಗಳು ಆರಂಭಗೊಂಡಿದ್ದು, ಅಮೆರಿಕವು ಸೇನಾ ಕಾರ್ಯಾಚರಣೆ ನಡೆಸುವ ಆತಂಕ ಎದುರಾಗಿದೆ. ಇದರ ಬೆನ್ನಲ್ಲೇ, ಭಾರತದ ನಾಗರಿಕರಿಗೆ ಇರಾನ್ನಲ್ಲಿನ ಭಾರತೀಯ ರಾಯಭಾರ ಕಚೇರಿಯು ಸಲಹೆ ನೀಡಿದೆ.</p>.ಅಮೆರಿಕದ ಮೇಲೆ ಪ್ರತಿದಾಳಿ: ಇರಾನ್ ಎಚ್ಚರಿಕೆ.ಇರಾನ್: 3,117 ಪ್ರತಿಭಟನಕಾರರ ಸಾವು.<p>ಕಳೆದ ತಿಂಗಳು ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಹಲವು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ, ಹೋರಾಟ ತಣ್ಣಗಾಗಿತ್ತು. ಇದೀಗ ಹೊಸತಾಗಿ ಪ್ರತಿಭಟನೆಗಳು ಆರಂಭಗೊಂಡ ಬೆನ್ನಲ್ಲೇ, ರಾಯಭಾರ ಕಚೇರಿಯು ಈ ಸಲಹೆಯನ್ನು ಹೊರಡಿಸಿದೆ.</p><p>ಅಂದಾಜಿನ ಪ್ರಕಾರ, ವಿದ್ಯಾರ್ಥಿಗಳು ಸೇರಿದಂತೆ 10 ಸಾವಿರ ಭಾರತೀಯರು ಇರಾನ್ನಲ್ಲಿ ನೆಲಸಿದ್ದಾರೆ. </p><p>‘ಇರಾನ್ನಲ್ಲಿ ಪರಿಸ್ಥಿತಿ ಪ್ರಕ್ಷುಬ್ದಗೊಳ್ಳುತ್ತಿರುವ ಬೆನ್ನಲ್ಲೇ, ಜನವರಿ 5ರಂದು ಹೊರಡಿಸಿದ್ದ ಸಲಹೆ ಮುಂದುವರಿಕೆಯಾಗಿ ಇರಾನ್ನಲ್ಲಿ ನೆಲಸಿರುವ ಎಲ್ಲ ಭಾರತೀಯರಿಗೂ ಮಾಹಿತಿ ನೀಡಲಾಗಿದೆ. ವಿದ್ಯಾರ್ಥಿಗಳು, ಉದ್ಯಮಿಗಳು ಹಾಗೂ ಪ್ರವಾಸಿಗರು ಸೇರಿದಂತೆ ಎಲ್ಲರೂ ಭಾರತಕ್ಕೆ ಮರಳುವಂತೆ ಸೂಚನೆ ನೀಡಲಾಗಿದೆ’ ಎಂದು ರಾಯಭಾರ ಕಚೇರಿಯು ತಿಳಿಸಿದೆ. </p><p>‘ಎಲ್ಲ ಭಾರತೀಯರು ಹಾಗೂ ಭಾರತದ ಮೂಲದವರು ಪ್ರತಿಭಟನೆ ನಡೆಯುವ ಸ್ಥಳಗಳಿಗೆ ತೆರಳಬಾರದು, ಯಾವುದೇ ಸಮಸ್ಯೆ ಉಂಟಾದರೂ ಕೂಡ ರಾಯಭಾರ ಕಚೇರಿ ಸಂಪರ್ಕಿಸಬೇಕು’ ಎಂದು ಕೋರಲಾಗಿದೆ.</p><p>‘ಪ್ರಯಾಣ ಹಾಗೂ ವಲಸೆ ದಾಖಲಾತಿಗಳು, ಪಾಸ್ಪೋರ್ಟ್, ಗುರುತಿನ ಚೀಟಿಯನ್ನು ಸುಲಭವಾಗಿ ಸಿಗುವಂತೆ ಇಟ್ಟುಕೊಳ್ಳಲು ಸೂಚನೆ ನೀಡಲಾಗಿದೆ. ಯಾವುದೇ ರೀತಿಯ ನೆರವು ಬೇಕಿದ್ದರೂ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಬಹುದು’ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. </p>. <p><strong>ತುರ್ತು ಸಹಾಯವಾಣಿ ಸಂಖ್ಯೆ:</strong></p><p>+989128109115; +989128109109;</p><p>+989128109102; +989932179359.</p><p>ಇಮೇಲ್: cons.tehranomsa.gov.in </p><p>ಇರಾನ್ನಲ್ಲಿರುವ ಭಾರತೀಯರಿಗೆ ಈ ಲಿಂಕ್ನಲ್ಲಿ (<a href="https://www.meaers.com/request/home">https://www.meaers.com/request/home</a>) ತಮ್ಮ ಹೆಸರನ್ನು ನೋಂದಾಯಿಸಲು ಸೂಚಿಸಲಾಗಿದೆ. ಇಂಟರ್ನೆಟ್ ಅಡಚಣೆಯಿಂದಾಗಿ ಹೆಸರು ನೋಂದಾಯಿಸಲು ಸಾಧ್ಯವಾಗದಿದ್ದರೆ ಅವರ ಪರವಾಗಿ ಭಾರತದಲ್ಲಿರುವ ಅವರ ಕುಟುಂಬದ ಸದಸ್ಯರು ಹೆಸರು ನೋಂದಾಯಿಸುವಂತೆಯೂ ವಿನಂತಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇರಾನ್ನಲ್ಲಿ ಪರಿಸ್ಥಿತಿ ವಿಷಮಗೊಂಡಿರುವ ಬೆನ್ನಲ್ಲೇ, ವಾಣಿಜ್ಯ ವಿಮಾನ ಸೇರಿದಂತೆ ಲಭ್ಯವಿರುವ ಎಲ್ಲ ಸಾರಿಗೆ ಸೌಲಭ್ಯಗಳನ್ನು ಬಳಸಿಕೊಂಡು ದೇಶ ಬಿಟ್ಟು ಮರಳುವಂತೆ ಭಾರತವು ತನ್ನ ನಾಗರಿಕರಿಗೆ ಸೂಚನೆ ನೀಡಿದೆ.</p><p>ಟೆಹರಾನ್ನಲ್ಲಿ ಮತ್ತೆ ಪ್ರತಿಭಟನೆಗಳು ಆರಂಭಗೊಂಡಿದ್ದು, ಅಮೆರಿಕವು ಸೇನಾ ಕಾರ್ಯಾಚರಣೆ ನಡೆಸುವ ಆತಂಕ ಎದುರಾಗಿದೆ. ಇದರ ಬೆನ್ನಲ್ಲೇ, ಭಾರತದ ನಾಗರಿಕರಿಗೆ ಇರಾನ್ನಲ್ಲಿನ ಭಾರತೀಯ ರಾಯಭಾರ ಕಚೇರಿಯು ಸಲಹೆ ನೀಡಿದೆ.</p>.ಅಮೆರಿಕದ ಮೇಲೆ ಪ್ರತಿದಾಳಿ: ಇರಾನ್ ಎಚ್ಚರಿಕೆ.ಇರಾನ್: 3,117 ಪ್ರತಿಭಟನಕಾರರ ಸಾವು.<p>ಕಳೆದ ತಿಂಗಳು ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಹಲವು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ, ಹೋರಾಟ ತಣ್ಣಗಾಗಿತ್ತು. ಇದೀಗ ಹೊಸತಾಗಿ ಪ್ರತಿಭಟನೆಗಳು ಆರಂಭಗೊಂಡ ಬೆನ್ನಲ್ಲೇ, ರಾಯಭಾರ ಕಚೇರಿಯು ಈ ಸಲಹೆಯನ್ನು ಹೊರಡಿಸಿದೆ.</p><p>ಅಂದಾಜಿನ ಪ್ರಕಾರ, ವಿದ್ಯಾರ್ಥಿಗಳು ಸೇರಿದಂತೆ 10 ಸಾವಿರ ಭಾರತೀಯರು ಇರಾನ್ನಲ್ಲಿ ನೆಲಸಿದ್ದಾರೆ. </p><p>‘ಇರಾನ್ನಲ್ಲಿ ಪರಿಸ್ಥಿತಿ ಪ್ರಕ್ಷುಬ್ದಗೊಳ್ಳುತ್ತಿರುವ ಬೆನ್ನಲ್ಲೇ, ಜನವರಿ 5ರಂದು ಹೊರಡಿಸಿದ್ದ ಸಲಹೆ ಮುಂದುವರಿಕೆಯಾಗಿ ಇರಾನ್ನಲ್ಲಿ ನೆಲಸಿರುವ ಎಲ್ಲ ಭಾರತೀಯರಿಗೂ ಮಾಹಿತಿ ನೀಡಲಾಗಿದೆ. ವಿದ್ಯಾರ್ಥಿಗಳು, ಉದ್ಯಮಿಗಳು ಹಾಗೂ ಪ್ರವಾಸಿಗರು ಸೇರಿದಂತೆ ಎಲ್ಲರೂ ಭಾರತಕ್ಕೆ ಮರಳುವಂತೆ ಸೂಚನೆ ನೀಡಲಾಗಿದೆ’ ಎಂದು ರಾಯಭಾರ ಕಚೇರಿಯು ತಿಳಿಸಿದೆ. </p><p>‘ಎಲ್ಲ ಭಾರತೀಯರು ಹಾಗೂ ಭಾರತದ ಮೂಲದವರು ಪ್ರತಿಭಟನೆ ನಡೆಯುವ ಸ್ಥಳಗಳಿಗೆ ತೆರಳಬಾರದು, ಯಾವುದೇ ಸಮಸ್ಯೆ ಉಂಟಾದರೂ ಕೂಡ ರಾಯಭಾರ ಕಚೇರಿ ಸಂಪರ್ಕಿಸಬೇಕು’ ಎಂದು ಕೋರಲಾಗಿದೆ.</p><p>‘ಪ್ರಯಾಣ ಹಾಗೂ ವಲಸೆ ದಾಖಲಾತಿಗಳು, ಪಾಸ್ಪೋರ್ಟ್, ಗುರುತಿನ ಚೀಟಿಯನ್ನು ಸುಲಭವಾಗಿ ಸಿಗುವಂತೆ ಇಟ್ಟುಕೊಳ್ಳಲು ಸೂಚನೆ ನೀಡಲಾಗಿದೆ. ಯಾವುದೇ ರೀತಿಯ ನೆರವು ಬೇಕಿದ್ದರೂ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಬಹುದು’ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. </p>. <p><strong>ತುರ್ತು ಸಹಾಯವಾಣಿ ಸಂಖ್ಯೆ:</strong></p><p>+989128109115; +989128109109;</p><p>+989128109102; +989932179359.</p><p>ಇಮೇಲ್: cons.tehranomsa.gov.in </p><p>ಇರಾನ್ನಲ್ಲಿರುವ ಭಾರತೀಯರಿಗೆ ಈ ಲಿಂಕ್ನಲ್ಲಿ (<a href="https://www.meaers.com/request/home">https://www.meaers.com/request/home</a>) ತಮ್ಮ ಹೆಸರನ್ನು ನೋಂದಾಯಿಸಲು ಸೂಚಿಸಲಾಗಿದೆ. ಇಂಟರ್ನೆಟ್ ಅಡಚಣೆಯಿಂದಾಗಿ ಹೆಸರು ನೋಂದಾಯಿಸಲು ಸಾಧ್ಯವಾಗದಿದ್ದರೆ ಅವರ ಪರವಾಗಿ ಭಾರತದಲ್ಲಿರುವ ಅವರ ಕುಟುಂಬದ ಸದಸ್ಯರು ಹೆಸರು ನೋಂದಾಯಿಸುವಂತೆಯೂ ವಿನಂತಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>