<p><strong>ಜೆರುಸಲೇಮ್:</strong> ‘ಇರಾನ್ ಮೇಲೆ ಮುನ್ನೆಚ್ಚರಿಕೆಯ ದಾಳಿ ನಡೆಸಿರುವ ಇಸ್ರೇಲ್, ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ’ ಎಂದು ಅಲ್ಲಿನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಶನಿವಾರ ಹೇಳಿದ್ದಾರೆ.</p><p>ಇಸ್ರೇಲ್ಗೆ ಬೆದರಿಕೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಇರಾನ್ ಮೇಲೆ ದಾಳಿ ಮಾಡಿರುವುದಾಗಿ ಕಾಟ್ಜ್ ಹೇಳಿದ್ದಾರೆ.</p><p>ದಾಳಿ ಆರಂಭಕ್ಕೂ ಮೊದಲು ದೇಶದಲ್ಲಿ ಸೈರನ್ ಮೊಳಗಿತು. ದೇಶದ ನಾಗರಿಕರು ಬಾಂಬ್ ಶೆಲ್ಟರ್ಗಳ ಬಳಿಯೇ ಇರುವಂತೆ ಹಾಗೂ ಅನಗತ್ಯವಾಗಿ ಓಡಾಡದಂತೆ ಇಸ್ರೇಲ್ ಸೇನೆಯ ಅಧಿಕಾರಿ ದೇಶದ ನಾಗರಿಕರಿಗೆ ಸೂಚನೆ ನೀಡಿದ್ದಾರೆ.</p><p>‘ದೇಶದತ್ತ ಕ್ಷಿಪಣಿಗಳು ತೂರಿಬರುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ನಾಗರಿಕರನ್ನು ಸನ್ನದ್ಧಗೊಳಿಸುವ ಪ್ರಕ್ರಿಯೆ ಇದಾಗಿದೆ. ಸದ್ಯಕ್ಕೆ ಆಶ್ರಯ ತಾಣಗಳಿಗೆ ತೆರಳುವ ಅಗತ್ಯವಿಲ್ಲ. ಆದರೆ ಅದರ ಸಮೀಪವೇ ಇರುವಂತೆ ಎಚ್ಚರವಹಿಸುವುದು ಸೂಕ್ತ’ ಎಂದು ಸೇನೆ ಹೇಳಿದೆ.</p><p>ಇದೇ ಸಂದರ್ಭದಲ್ಲಿ ಟೆಲ್ ಅವೀವ್ನಿಂದ ದೆಹಲಿಗೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದ ಏರ್ ಇಂಡಿಯಾ ವಿಮಾನ ಎಐ 140 ಏರಲು ಸಿದ್ಧರಾಗುತ್ತಿದ್ದ ಪ್ರಯಾಣಿಕರು ತಮ್ಮ ವಸ್ತುಗಳನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು, ಬಾಂಬ್ ಶೆಲ್ಟರ್ಗಳಿಗೆ ದೌಡಾಯಿಸಿದರು ಎಂದು ವರದಿಯಾಗಿದೆ.</p><p>‘ಎಲ್ಲವನ್ನೂ ಮರೆತುಬಿಡಿ, ತಕ್ಷಣ ಬಾಂಬ್ ಶೆಲ್ಟರ್ಗೆ ತೆರಳಿ’ ಎಂಬ ಸೂಚನೆ ಬಂತು ಎಂದು ಪ್ರಯಾಣಿಕರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.</p><p>ಭಾರತ ಮೂಲದ ವಿಮಾನಯಾನ ಸಂಸ್ಥೆಯು ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಒಂದು ವಾರ ತನ್ನ ಹಾರಾಟವನ್ನು ಸ್ಥಗಿತಗೊಳಿಸುವುದಾಗಿ ಅದರ ಅಧಿಕಾರಿಗಳು ತಿಳಿಸಿದ್ದಾರೆ. </p><p>ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದರಿಂದ ಟೆಹರಾನ್ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದನ್ನು ಎಎನ್ಐ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೆರುಸಲೇಮ್:</strong> ‘ಇರಾನ್ ಮೇಲೆ ಮುನ್ನೆಚ್ಚರಿಕೆಯ ದಾಳಿ ನಡೆಸಿರುವ ಇಸ್ರೇಲ್, ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ’ ಎಂದು ಅಲ್ಲಿನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಶನಿವಾರ ಹೇಳಿದ್ದಾರೆ.</p><p>ಇಸ್ರೇಲ್ಗೆ ಬೆದರಿಕೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಇರಾನ್ ಮೇಲೆ ದಾಳಿ ಮಾಡಿರುವುದಾಗಿ ಕಾಟ್ಜ್ ಹೇಳಿದ್ದಾರೆ.</p><p>ದಾಳಿ ಆರಂಭಕ್ಕೂ ಮೊದಲು ದೇಶದಲ್ಲಿ ಸೈರನ್ ಮೊಳಗಿತು. ದೇಶದ ನಾಗರಿಕರು ಬಾಂಬ್ ಶೆಲ್ಟರ್ಗಳ ಬಳಿಯೇ ಇರುವಂತೆ ಹಾಗೂ ಅನಗತ್ಯವಾಗಿ ಓಡಾಡದಂತೆ ಇಸ್ರೇಲ್ ಸೇನೆಯ ಅಧಿಕಾರಿ ದೇಶದ ನಾಗರಿಕರಿಗೆ ಸೂಚನೆ ನೀಡಿದ್ದಾರೆ.</p><p>‘ದೇಶದತ್ತ ಕ್ಷಿಪಣಿಗಳು ತೂರಿಬರುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ನಾಗರಿಕರನ್ನು ಸನ್ನದ್ಧಗೊಳಿಸುವ ಪ್ರಕ್ರಿಯೆ ಇದಾಗಿದೆ. ಸದ್ಯಕ್ಕೆ ಆಶ್ರಯ ತಾಣಗಳಿಗೆ ತೆರಳುವ ಅಗತ್ಯವಿಲ್ಲ. ಆದರೆ ಅದರ ಸಮೀಪವೇ ಇರುವಂತೆ ಎಚ್ಚರವಹಿಸುವುದು ಸೂಕ್ತ’ ಎಂದು ಸೇನೆ ಹೇಳಿದೆ.</p><p>ಇದೇ ಸಂದರ್ಭದಲ್ಲಿ ಟೆಲ್ ಅವೀವ್ನಿಂದ ದೆಹಲಿಗೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದ ಏರ್ ಇಂಡಿಯಾ ವಿಮಾನ ಎಐ 140 ಏರಲು ಸಿದ್ಧರಾಗುತ್ತಿದ್ದ ಪ್ರಯಾಣಿಕರು ತಮ್ಮ ವಸ್ತುಗಳನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು, ಬಾಂಬ್ ಶೆಲ್ಟರ್ಗಳಿಗೆ ದೌಡಾಯಿಸಿದರು ಎಂದು ವರದಿಯಾಗಿದೆ.</p><p>‘ಎಲ್ಲವನ್ನೂ ಮರೆತುಬಿಡಿ, ತಕ್ಷಣ ಬಾಂಬ್ ಶೆಲ್ಟರ್ಗೆ ತೆರಳಿ’ ಎಂಬ ಸೂಚನೆ ಬಂತು ಎಂದು ಪ್ರಯಾಣಿಕರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.</p><p>ಭಾರತ ಮೂಲದ ವಿಮಾನಯಾನ ಸಂಸ್ಥೆಯು ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಒಂದು ವಾರ ತನ್ನ ಹಾರಾಟವನ್ನು ಸ್ಥಗಿತಗೊಳಿಸುವುದಾಗಿ ಅದರ ಅಧಿಕಾರಿಗಳು ತಿಳಿಸಿದ್ದಾರೆ. </p><p>ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದರಿಂದ ಟೆಹರಾನ್ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದನ್ನು ಎಎನ್ಐ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>