<p><strong>ಜಕಾರ್ತ: </strong>ಇಂಡೊನೇಷ್ಯಾದ ಸುಲಾವೇಸಿ ದ್ವೀಪದ ಪಲು ನಗರದಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪ ಮತ್ತು ಸುನಾಮಿಯ ಹೊಡೆತಕ್ಕೆ ಸಿಲುಕಿ ಕನಿಷ್ಠ 384ಮಂದಿ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.</p>.<p>ಪಲು ನಗರದಲ್ಲಿ ಸಾವಿರಾರು ಮನೆಗಳು ಭೂಕಂಪಿಸಿದ ಪರಿಣಾಮ ನೆಲಕ್ಕುರುಳಿವೆ ಹಾಗೂ ಅಪ್ಪಳಿಸಿದ ಸುನಾಮಿಯ ಹೊಡೆತದಲ್ಲಿ ಕೊಚ್ಚಿ ಹೋಗಿವೆ. ಮನೆಯ ಒಳಗಿದ್ದವರು ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರೆ, ಮನೆಯ ಹೊರಗೆ ನಿದ್ರೆಯಲ್ಲಿದ್ದರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಇಂಡೋನೇಷ್ಯಾದ ವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರರ ಪ್ರಕಾರ, ಕನಿಷ್ಠ 348ಮಂದಿ ಸಾವಿಗೀಡಾಗಿದ್ದು 540ಕ್ಕೂ ಹೆಚ್ಚು ಮಂದಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 29 ಮಂದಿ ನಾಪತ್ತೆಯಾಗಿದ್ದಾರೆ.</p>.<p><strong><em>(ಅಪ್ಪಳಿಸಿದ ಸುನಾಮಿ)</em></strong></p>.<p>ರಿಕ್ಟರ್ ಮಾಪಕದಲ್ಲಿ 7.5ರಷ್ಟು ಭೂಕಂಪನ ತೀವ್ರತೆ ದಾಖಲಾಗಿದ್ದು, ಗರಿಷ್ಠ 1.5 ಮೀಟರ್ ಎತ್ತರದಷ್ಟು ಸುನಾಮಿಯ ತೀವ್ರತೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಪಲು ಹಾಗೂ ಮೀನುಗಾರಿಕಾ ಪ್ರದೇಶ ಡೊಂಗಲಾ ಸುತ್ತಮುತ್ತಲು ಸಂಪರ್ಕ ಸಾಧಿಸಲು ತೊಡಕಾಗಿದೆ.</p>.<p>ಭೂಕಂಪನದ ಕೇಂದ್ರ ಇಲ್ಲಿಂದ 27 ಕಿ.ಮೀ. ದೂರದಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಕಾರ್ತ: </strong>ಇಂಡೊನೇಷ್ಯಾದ ಸುಲಾವೇಸಿ ದ್ವೀಪದ ಪಲು ನಗರದಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪ ಮತ್ತು ಸುನಾಮಿಯ ಹೊಡೆತಕ್ಕೆ ಸಿಲುಕಿ ಕನಿಷ್ಠ 384ಮಂದಿ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.</p>.<p>ಪಲು ನಗರದಲ್ಲಿ ಸಾವಿರಾರು ಮನೆಗಳು ಭೂಕಂಪಿಸಿದ ಪರಿಣಾಮ ನೆಲಕ್ಕುರುಳಿವೆ ಹಾಗೂ ಅಪ್ಪಳಿಸಿದ ಸುನಾಮಿಯ ಹೊಡೆತದಲ್ಲಿ ಕೊಚ್ಚಿ ಹೋಗಿವೆ. ಮನೆಯ ಒಳಗಿದ್ದವರು ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರೆ, ಮನೆಯ ಹೊರಗೆ ನಿದ್ರೆಯಲ್ಲಿದ್ದರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಇಂಡೋನೇಷ್ಯಾದ ವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರರ ಪ್ರಕಾರ, ಕನಿಷ್ಠ 348ಮಂದಿ ಸಾವಿಗೀಡಾಗಿದ್ದು 540ಕ್ಕೂ ಹೆಚ್ಚು ಮಂದಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 29 ಮಂದಿ ನಾಪತ್ತೆಯಾಗಿದ್ದಾರೆ.</p>.<p><strong><em>(ಅಪ್ಪಳಿಸಿದ ಸುನಾಮಿ)</em></strong></p>.<p>ರಿಕ್ಟರ್ ಮಾಪಕದಲ್ಲಿ 7.5ರಷ್ಟು ಭೂಕಂಪನ ತೀವ್ರತೆ ದಾಖಲಾಗಿದ್ದು, ಗರಿಷ್ಠ 1.5 ಮೀಟರ್ ಎತ್ತರದಷ್ಟು ಸುನಾಮಿಯ ತೀವ್ರತೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಪಲು ಹಾಗೂ ಮೀನುಗಾರಿಕಾ ಪ್ರದೇಶ ಡೊಂಗಲಾ ಸುತ್ತಮುತ್ತಲು ಸಂಪರ್ಕ ಸಾಧಿಸಲು ತೊಡಕಾಗಿದೆ.</p>.<p>ಭೂಕಂಪನದ ಕೇಂದ್ರ ಇಲ್ಲಿಂದ 27 ಕಿ.ಮೀ. ದೂರದಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>