<p><strong>ನ್ಯೂಯಾರ್ಕ್</strong>: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇಸರ ವ್ಯಕ್ತಪಡಿಸಿದ್ದಾರೆ.</p><p>ಸಾಮಾಜಿಕ ಜಾಲತಾಣ ಟ್ರೂತ್ ಸೋಶಿಯಲ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಅಥವಾ ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಇರಾನ್ ಸಂಘರ್ಷಗಳಲ್ಲಿ ಶಾಂತಿ ಮಾತುಕತೆ ಮೂಲಕ ಶಮನ ಮಾಡಿಕೊಳ್ಳಲು ಹೇಳಿದ್ದೆ. ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದು ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ನಾಮನಿರ್ದೇಶನ ಮಾಡಿದ ಪಾಕ್.<p>ಕಾಂಗೋ ಮತ್ತು ರುವಾಂಡಾ ನಡುವಿನ ಸಂಘರ್ಷ ಸಂಬಂಧ ಎರಡು ದೇಶಗಳ ನಡುವೆ ಒಪ್ಪಂದವನ್ನು ಏರ್ಷಡಿಸಿದ್ದೇನೆ. ರುವಾಂಡಾ ಮತ್ತು ಕಾಂಗೋದ ಪ್ರತಿನಿಧಿಗಳು ಸೋಮವಾರ ವಾಷಿಂಗ್ಟನ್ಗೆ ಆಗಮಿಸಲಿದ್ದಾರೆ. ಒಪ್ಪಂದ ಸಂಬಂಧ ದಾಖಲೆಗಳಿಗೆ ಸಹಿ ಹಾಕಲಿದ್ದಾರೆ. ಈ ಮೂಲಕ ಆಫ್ರಿಕಾಕ್ಕೆ ಶ್ರೇಷ್ಠ ದಿನ ಮತ್ತು ಜಗತ್ತಿಗೂ ಉತ್ತಮ ದಿನವಾಗಲಿದೆ ಎಂದು ತಿಳಿಸಿದ್ದಾರೆ.</p><p>ಇಂತಹ ಅನೇಕ ಸಂಘರ್ಷಗಳಲ್ಲಿ ಮಧ್ಯಸ್ಥಿಕೆ ವಹಿಸಿ ಹೆಚ್ಚಿನ ರಕ್ತಪಾತವಾಗದಂತೆ, ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಅನೇಕ ದೇಶಗಳಿಗೆ ಸಲಹೆ ನೀಡಿದ್ದೇನೆ. ಆದಗ್ಯೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ದೊರೆಯುವುದಿಲ್ಲ ಎಂದು ಹೇಳಿದ್ದಾರೆ.</p>.ಏಕನಾಥ ಶಿಂದೆ ನಿಜವಾದ ಶಿವಸೇನಾವನ್ನು ಎಲ್ಲರಿಗೂ ಪರಿಚಯಿಸಿದ್ದಾರೆ: ಅಮಿತ್ ಶಾ.ಜೂನ್ 22ರಂದು ಎಂ.ಜಿ. ರಸ್ತೆ–ಬೈಯ್ಯಪ್ಪನಹಳ್ಳಿ ನಡುವೆ ಮೆಟ್ರೊ ವ್ಯತ್ಯಯ. <p>ಆದರೆ ಭೀಕರ ಯುದ್ಧಗಳು ನಡೆಯದಂತೆ ತಡೆಯುವಲ್ಲಿ ನನ್ನ ಪಾತ್ರದ ಬಗ್ಗೆ ಜನರಿಗೆ ತಿಳಿದಿದೆ. ಅಷ್ಟೇ ಸಾಕು ಎಂದು ಟ್ರಂಪ್ ತಿಳಿಸಿದ್ದಾರೆ.</p><p>ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.</p><p>ಭಾರತವು ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್ಗೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್, ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.</p>.Israel–Iran Conflict | ಇರಾನ್ನಿಂದ 290 ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್.ಸಂಪಾದಕೀಯ Podcast|ಇಂಗ್ಲಿಷ್ ನಿರಾಕರಣೆಯ ಹಿಂದೆ ಹಿಂದಿ ಹೇರಿಕೆ ಹುನ್ನಾರ ಅಡಗಿದೆ.Israel–Iran Conflict: ಭಾರತ ಸೇರಿದಂತೆ ವಿವಿಧ ದೇಶಗಳ ನಾಗರಿಕರ ಸ್ಥಳಾಂತರ ಆರಂಭ.Sun TV ಒಡೆತನ: ಮಾರನ್ ಸಹೋದರರ ಭಿನ್ನಮತ ಸ್ಫೋಟ; ಕಲಾನಿಧಿಗೆ ದಯಾನಿಧಿ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್</strong>: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇಸರ ವ್ಯಕ್ತಪಡಿಸಿದ್ದಾರೆ.</p><p>ಸಾಮಾಜಿಕ ಜಾಲತಾಣ ಟ್ರೂತ್ ಸೋಶಿಯಲ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಅಥವಾ ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಇರಾನ್ ಸಂಘರ್ಷಗಳಲ್ಲಿ ಶಾಂತಿ ಮಾತುಕತೆ ಮೂಲಕ ಶಮನ ಮಾಡಿಕೊಳ್ಳಲು ಹೇಳಿದ್ದೆ. ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದು ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ನಾಮನಿರ್ದೇಶನ ಮಾಡಿದ ಪಾಕ್.<p>ಕಾಂಗೋ ಮತ್ತು ರುವಾಂಡಾ ನಡುವಿನ ಸಂಘರ್ಷ ಸಂಬಂಧ ಎರಡು ದೇಶಗಳ ನಡುವೆ ಒಪ್ಪಂದವನ್ನು ಏರ್ಷಡಿಸಿದ್ದೇನೆ. ರುವಾಂಡಾ ಮತ್ತು ಕಾಂಗೋದ ಪ್ರತಿನಿಧಿಗಳು ಸೋಮವಾರ ವಾಷಿಂಗ್ಟನ್ಗೆ ಆಗಮಿಸಲಿದ್ದಾರೆ. ಒಪ್ಪಂದ ಸಂಬಂಧ ದಾಖಲೆಗಳಿಗೆ ಸಹಿ ಹಾಕಲಿದ್ದಾರೆ. ಈ ಮೂಲಕ ಆಫ್ರಿಕಾಕ್ಕೆ ಶ್ರೇಷ್ಠ ದಿನ ಮತ್ತು ಜಗತ್ತಿಗೂ ಉತ್ತಮ ದಿನವಾಗಲಿದೆ ಎಂದು ತಿಳಿಸಿದ್ದಾರೆ.</p><p>ಇಂತಹ ಅನೇಕ ಸಂಘರ್ಷಗಳಲ್ಲಿ ಮಧ್ಯಸ್ಥಿಕೆ ವಹಿಸಿ ಹೆಚ್ಚಿನ ರಕ್ತಪಾತವಾಗದಂತೆ, ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಅನೇಕ ದೇಶಗಳಿಗೆ ಸಲಹೆ ನೀಡಿದ್ದೇನೆ. ಆದಗ್ಯೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ದೊರೆಯುವುದಿಲ್ಲ ಎಂದು ಹೇಳಿದ್ದಾರೆ.</p>.ಏಕನಾಥ ಶಿಂದೆ ನಿಜವಾದ ಶಿವಸೇನಾವನ್ನು ಎಲ್ಲರಿಗೂ ಪರಿಚಯಿಸಿದ್ದಾರೆ: ಅಮಿತ್ ಶಾ.ಜೂನ್ 22ರಂದು ಎಂ.ಜಿ. ರಸ್ತೆ–ಬೈಯ್ಯಪ್ಪನಹಳ್ಳಿ ನಡುವೆ ಮೆಟ್ರೊ ವ್ಯತ್ಯಯ. <p>ಆದರೆ ಭೀಕರ ಯುದ್ಧಗಳು ನಡೆಯದಂತೆ ತಡೆಯುವಲ್ಲಿ ನನ್ನ ಪಾತ್ರದ ಬಗ್ಗೆ ಜನರಿಗೆ ತಿಳಿದಿದೆ. ಅಷ್ಟೇ ಸಾಕು ಎಂದು ಟ್ರಂಪ್ ತಿಳಿಸಿದ್ದಾರೆ.</p><p>ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.</p><p>ಭಾರತವು ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್ಗೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್, ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.</p>.Israel–Iran Conflict | ಇರಾನ್ನಿಂದ 290 ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್.ಸಂಪಾದಕೀಯ Podcast|ಇಂಗ್ಲಿಷ್ ನಿರಾಕರಣೆಯ ಹಿಂದೆ ಹಿಂದಿ ಹೇರಿಕೆ ಹುನ್ನಾರ ಅಡಗಿದೆ.Israel–Iran Conflict: ಭಾರತ ಸೇರಿದಂತೆ ವಿವಿಧ ದೇಶಗಳ ನಾಗರಿಕರ ಸ್ಥಳಾಂತರ ಆರಂಭ.Sun TV ಒಡೆತನ: ಮಾರನ್ ಸಹೋದರರ ಭಿನ್ನಮತ ಸ್ಫೋಟ; ಕಲಾನಿಧಿಗೆ ದಯಾನಿಧಿ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>