<p><strong>ವಾಷಿಂಗ್ಟನ್</strong>: ಯುದ್ಧದ ಹೆಸರಲ್ಲಿ ನಡೆಯುತ್ತಿರುವ ‘ಹತ್ಯಾಕಾಂಡ’ವನ್ನು ಕೊನೆಗೊಳಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ.</p>.<p>ರಷ್ಯಾ ದಾಳಿಯ ವಿರುದ್ಧ ಹೋರಾಡಲು ಜೋ ಬೈಡನ್ ಆಡಳಿತವು ಉಕ್ರೇನ್ಗೆ ಭಾರಿ ಹಣಕಾಸಿನ ನೆರವು ನೀಡಿರುವುದನ್ನು ಟ್ರಂಪ್ ಕಟುವಾಗಿ ಟೀಕಿಸುತ್ತಾ ಬಂದಿದ್ದಾರೆ.</p>.<p>‘ನಾವು ಈ ಯುದ್ಧವನ್ನು ನಿಲ್ಲಿಸಲೇಬೇಕು. ಅದಕ್ಕಾಗಿ ಪುಟಿನ್ ಮತ್ತು ಅವರ ಪ್ರತಿನಿಧಿಗಳು ಹಾಗೂ ಝೆಲೆನ್ಸ್ಕಿ ಮತ್ತು ಅವರ ಪ್ರತಿನಿಧಿಗಳ ಜತೆ ಮಾತುಕತೆ ನಡೆಸುತ್ತೇವೆ’ ಎಂದು ಫ್ಲಾರಿಡಾದ ತಮ್ಮ ನಿವಾಸದಲ್ಲಿ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.</p>.<p>ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸಲು ಸಾಧ್ಯ ಎಂದು ಟ್ರಂಪ್ ಅವರು ಪದೇ ಪದೇ ಹೇಳಿಕೊಂಡಿದ್ದಾರೆ. ಆದರೆ, ಅದು ಹೇಗೆ ಎಂಬುದರ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಿಲ್ಲ.</p>.<p>‘ತಕ್ಷಣದಲ್ಲೇ ಕದನ ವಿರಾಮ’ ಘೋಷಣೆಯಾಗಬೇಕು ಎಂದು ಈ ತಿಂಗಳ ಆರಂಭದಲ್ಲಿ ಒತ್ತಾಯಿಸಿದ್ದ ಅವರು ‘ಮಾತುಕತೆ ಪ್ರಾರಂಭವಾಗಬೇಕು’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಯುದ್ಧದ ಹೆಸರಲ್ಲಿ ನಡೆಯುತ್ತಿರುವ ‘ಹತ್ಯಾಕಾಂಡ’ವನ್ನು ಕೊನೆಗೊಳಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ.</p>.<p>ರಷ್ಯಾ ದಾಳಿಯ ವಿರುದ್ಧ ಹೋರಾಡಲು ಜೋ ಬೈಡನ್ ಆಡಳಿತವು ಉಕ್ರೇನ್ಗೆ ಭಾರಿ ಹಣಕಾಸಿನ ನೆರವು ನೀಡಿರುವುದನ್ನು ಟ್ರಂಪ್ ಕಟುವಾಗಿ ಟೀಕಿಸುತ್ತಾ ಬಂದಿದ್ದಾರೆ.</p>.<p>‘ನಾವು ಈ ಯುದ್ಧವನ್ನು ನಿಲ್ಲಿಸಲೇಬೇಕು. ಅದಕ್ಕಾಗಿ ಪುಟಿನ್ ಮತ್ತು ಅವರ ಪ್ರತಿನಿಧಿಗಳು ಹಾಗೂ ಝೆಲೆನ್ಸ್ಕಿ ಮತ್ತು ಅವರ ಪ್ರತಿನಿಧಿಗಳ ಜತೆ ಮಾತುಕತೆ ನಡೆಸುತ್ತೇವೆ’ ಎಂದು ಫ್ಲಾರಿಡಾದ ತಮ್ಮ ನಿವಾಸದಲ್ಲಿ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.</p>.<p>ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸಲು ಸಾಧ್ಯ ಎಂದು ಟ್ರಂಪ್ ಅವರು ಪದೇ ಪದೇ ಹೇಳಿಕೊಂಡಿದ್ದಾರೆ. ಆದರೆ, ಅದು ಹೇಗೆ ಎಂಬುದರ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಿಲ್ಲ.</p>.<p>‘ತಕ್ಷಣದಲ್ಲೇ ಕದನ ವಿರಾಮ’ ಘೋಷಣೆಯಾಗಬೇಕು ಎಂದು ಈ ತಿಂಗಳ ಆರಂಭದಲ್ಲಿ ಒತ್ತಾಯಿಸಿದ್ದ ಅವರು ‘ಮಾತುಕತೆ ಪ್ರಾರಂಭವಾಗಬೇಕು’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>