<p><strong>ವಿಶ್ವಸಂಸ್ಥೆ</strong>: ಉಕ್ರೇನ್ ಸಂಘರ್ಷವು ದಕ್ಷಿಣ ದೇಶಗಳಲ್ಲಿನ ತೈಲ ಬೆಲೆ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಭಾರತ ಹೇಳಿದೆ.</p>.<p>ರಷ್ಯಾ ಆಕ್ರಮಿತ ಉಕ್ರೇನ್ನ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತಂತೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಡೆದ ಚರ್ಚೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಮಾತನಾಡಿದರು.</p>.<p>ಉಕ್ರೇನ್ನಲ್ಲಿನ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ‘ಮುಗ್ಧ ಜೀವಗಳ ಸಾವನ್ನು ಒಪ್ಪಲಾಗದು. ಯುದ್ಧದಿಂದ ಎಂದಿಗೂ ಪರಿಹಾರ ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ರಾಜತಾಂತ್ರಿಕ ಪ್ರಯತ್ನಗಳು ಯುದ್ಧವನ್ನು ಕೊನೆಗೊಳಿಸುವ ಮತ್ತು ಶಾಶ್ವತ ಶಾಂತಿಯನ್ನು ಸ್ಥಾಪಿಸುವ ಭರವಸೆ ಹೊಂದಿವೆ’ ಎಂದರು.</p>.<p>‘ನಮ್ಮ ದೃಷ್ಟಿಕೋನದಲ್ಲಿ ನೊಂದವರ ಧ್ವನಿ ಆಲಿಸಿ, ಸಮಸ್ಯೆಗಳನ್ನು ಪರಿಹರಿಸಬೇಕು. ಶಾಶ್ವತ ಶಾಂತಿ ಸ್ಥಾಪನೆಗಾಗಿ ತುಂಬು ಹೃದಯದಿಂದ ಎಲ್ಲ ಪಾಲುದಾರರು ಭಾಗಿಯಾಗಬೇಕು. ಬದ್ಧತೆ ನಿರ್ಣಾಯಕವಾಗಿರಬೇಕು’ ಎಂದಿರುವ ಭಾರತವು, ಈ ದಿಕ್ಕಿನಲ್ಲಿ ‘ಇತ್ತೀಚಿನ ಸಕಾರಾತ್ಮಕ ಬೆಳವಣಿಗೆ’ಗಳನ್ನು ಸ್ವಾಗತಿಸುತ್ತದೆ ಎಂದು ಸಭೆಯಲ್ಲಿ ಪ್ರತಿಪಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ</strong>: ಉಕ್ರೇನ್ ಸಂಘರ್ಷವು ದಕ್ಷಿಣ ದೇಶಗಳಲ್ಲಿನ ತೈಲ ಬೆಲೆ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಭಾರತ ಹೇಳಿದೆ.</p>.<p>ರಷ್ಯಾ ಆಕ್ರಮಿತ ಉಕ್ರೇನ್ನ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತಂತೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಡೆದ ಚರ್ಚೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಮಾತನಾಡಿದರು.</p>.<p>ಉಕ್ರೇನ್ನಲ್ಲಿನ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ‘ಮುಗ್ಧ ಜೀವಗಳ ಸಾವನ್ನು ಒಪ್ಪಲಾಗದು. ಯುದ್ಧದಿಂದ ಎಂದಿಗೂ ಪರಿಹಾರ ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ರಾಜತಾಂತ್ರಿಕ ಪ್ರಯತ್ನಗಳು ಯುದ್ಧವನ್ನು ಕೊನೆಗೊಳಿಸುವ ಮತ್ತು ಶಾಶ್ವತ ಶಾಂತಿಯನ್ನು ಸ್ಥಾಪಿಸುವ ಭರವಸೆ ಹೊಂದಿವೆ’ ಎಂದರು.</p>.<p>‘ನಮ್ಮ ದೃಷ್ಟಿಕೋನದಲ್ಲಿ ನೊಂದವರ ಧ್ವನಿ ಆಲಿಸಿ, ಸಮಸ್ಯೆಗಳನ್ನು ಪರಿಹರಿಸಬೇಕು. ಶಾಶ್ವತ ಶಾಂತಿ ಸ್ಥಾಪನೆಗಾಗಿ ತುಂಬು ಹೃದಯದಿಂದ ಎಲ್ಲ ಪಾಲುದಾರರು ಭಾಗಿಯಾಗಬೇಕು. ಬದ್ಧತೆ ನಿರ್ಣಾಯಕವಾಗಿರಬೇಕು’ ಎಂದಿರುವ ಭಾರತವು, ಈ ದಿಕ್ಕಿನಲ್ಲಿ ‘ಇತ್ತೀಚಿನ ಸಕಾರಾತ್ಮಕ ಬೆಳವಣಿಗೆ’ಗಳನ್ನು ಸ್ವಾಗತಿಸುತ್ತದೆ ಎಂದು ಸಭೆಯಲ್ಲಿ ಪ್ರತಿಪಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>