<p><strong>ವಾಷಿಂಗ್ಟನ್: ‘</strong>ಆರೋಗ್ಯ, ಔಷಧ ಕ್ಷೇತ್ರಗಳಲ್ಲಿನ ಆವಿಷ್ಕಾರ ಸೇರಿದಂತೆ ಜಾಗತಿಕ ಸವಾಲು ಎದುರಿಸಲು ಭಾರತ ಮತ್ತು ಅಮೆರಿಕ ಬಾಂಧವ್ಯ ಮಹತ್ವವಾದುದು’ ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಜಗತ್ತಿನ ಆರೋಗ್ಯ ಭದ್ರತೆ ದೃಷ್ಟಿಯಿಂದ ಉಭಯ ದೇಶಗಳು ಎಲ್ಲ ಕ್ಷೇತ್ರಗಳಿಗೆ ಅನ್ವಯಿಸುವಂತೆ ಬಾಂಧವ್ಯ ಕಾಯ್ದುಕೊಳ್ಳುವುದು ಅಗತ್ಯವಾಗಿದೆ’ ಎಂದು ರಾಷ್ಟ್ರೀಯ ಔಷಧ ನಿಯಂತ್ರಣ ನೀತಿಯ ನಿರ್ದೇಶಕರ ಕಚೇರಿಯ (ಒಎನ್ಡಿಸಿಪಿ) ಹಿರಿಯ ಅಧಿಕಾರಿ ಡಾ.ರಾಹುಲ್ ಗುಪ್ತಾ ಅವರು ಅಭಿಪ್ರಾಯಪಟ್ಟರು.</p>.<p>‘ಜಾಗತಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಈ ದೇಶಗಳು ಒಟ್ಟಿಗೆ ಸಾಗುವುದರಿಂದ ಸಾಧ್ಯ’ ಎಂದರು. ಬೈಡನ್ ಆಡಳಿತಾವಧಿಯಲ್ಲಿ ಉನ್ನತ ಸ್ಥಾನದಲ್ಲಿದ್ದ ಭಾರತ ಮೂಲದ ಅಮೆರಿಕದ ಅಧಿಕಾರಿ ಇವರಾಗಿದ್ದಾರೆ.</p>.<p>ಭಿನ್ನ ಖಂಡಗಳ ಎರಡು ರಾಷ್ಟ್ರಗಳು ಪರಸ್ಪರ ಹತ್ತಿರವಾಗಲು ಹಾಗೂ ಅರ್ಥಮಾಡಿಕೊಳ್ಳಲು ಇದರಿಂದ ಸಾಧ್ಯವಾಗಲಿದೆ. ಉಭಯ ದೇಶಗಳ ನವಪೀಳಿಗೆಯ ಜನರು ಪ್ರಜಾಸತ್ತಾತ್ಮಕ ಕ್ರಮದಲ್ಲಿ ಕಾರ್ಯನಿರ್ವಹಿಸಲೂ ಸಹಕಾರಿ ಆಗಲಿದೆ ಎಂದು ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಅವರು ಆಭಿಪ್ರಾಯಪ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್: ‘</strong>ಆರೋಗ್ಯ, ಔಷಧ ಕ್ಷೇತ್ರಗಳಲ್ಲಿನ ಆವಿಷ್ಕಾರ ಸೇರಿದಂತೆ ಜಾಗತಿಕ ಸವಾಲು ಎದುರಿಸಲು ಭಾರತ ಮತ್ತು ಅಮೆರಿಕ ಬಾಂಧವ್ಯ ಮಹತ್ವವಾದುದು’ ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಜಗತ್ತಿನ ಆರೋಗ್ಯ ಭದ್ರತೆ ದೃಷ್ಟಿಯಿಂದ ಉಭಯ ದೇಶಗಳು ಎಲ್ಲ ಕ್ಷೇತ್ರಗಳಿಗೆ ಅನ್ವಯಿಸುವಂತೆ ಬಾಂಧವ್ಯ ಕಾಯ್ದುಕೊಳ್ಳುವುದು ಅಗತ್ಯವಾಗಿದೆ’ ಎಂದು ರಾಷ್ಟ್ರೀಯ ಔಷಧ ನಿಯಂತ್ರಣ ನೀತಿಯ ನಿರ್ದೇಶಕರ ಕಚೇರಿಯ (ಒಎನ್ಡಿಸಿಪಿ) ಹಿರಿಯ ಅಧಿಕಾರಿ ಡಾ.ರಾಹುಲ್ ಗುಪ್ತಾ ಅವರು ಅಭಿಪ್ರಾಯಪಟ್ಟರು.</p>.<p>‘ಜಾಗತಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಈ ದೇಶಗಳು ಒಟ್ಟಿಗೆ ಸಾಗುವುದರಿಂದ ಸಾಧ್ಯ’ ಎಂದರು. ಬೈಡನ್ ಆಡಳಿತಾವಧಿಯಲ್ಲಿ ಉನ್ನತ ಸ್ಥಾನದಲ್ಲಿದ್ದ ಭಾರತ ಮೂಲದ ಅಮೆರಿಕದ ಅಧಿಕಾರಿ ಇವರಾಗಿದ್ದಾರೆ.</p>.<p>ಭಿನ್ನ ಖಂಡಗಳ ಎರಡು ರಾಷ್ಟ್ರಗಳು ಪರಸ್ಪರ ಹತ್ತಿರವಾಗಲು ಹಾಗೂ ಅರ್ಥಮಾಡಿಕೊಳ್ಳಲು ಇದರಿಂದ ಸಾಧ್ಯವಾಗಲಿದೆ. ಉಭಯ ದೇಶಗಳ ನವಪೀಳಿಗೆಯ ಜನರು ಪ್ರಜಾಸತ್ತಾತ್ಮಕ ಕ್ರಮದಲ್ಲಿ ಕಾರ್ಯನಿರ್ವಹಿಸಲೂ ಸಹಕಾರಿ ಆಗಲಿದೆ ಎಂದು ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಅವರು ಆಭಿಪ್ರಾಯಪ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>