<p><strong>ಬೆಂಗಳೂರು:</strong> ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಆರೋಪದ ಮೇಲೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿದೆ.</p><p>ಇದೇ ತಿಂಗಳು 4ರಂದು ಅರೆಸ್ಟ್ ವಾರಂಟ್ ಜಾರಿಯಾಗಿದೆ ಎಂದು ಬೆಂಗಳೂರಿನ ಕೆ.ಆರ್.ಪುರಂ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ (2) ಷಡಕ್ಷರಿ ಗೋಪಾಲ ರೆಡ್ಡಿ ಹೇಳಿದ್ದಾರೆ. ಉತ್ತಪ್ಪ ಸುಮಾರು ₹ 23 ಲಕ್ಷ ವಂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ಉತ್ತಪ್ಪ ಪುಲಕೇಶಿ ನಗರ ಠಾಣೆ ವ್ಯಾಪ್ತಿಯ ನಿವಾಸಿ ಆಗಿರುವುದರಿಂದ ಅವರನ್ನು ಬಂಧಿಸುವಂತೆ ಗೋಪಾಲ ರೆಡ್ಡಿ ಅವರು ಪೊಲೀಸರಿಗೆ ಪತ್ರ ಬರೆದಿದ್ದಾರೆ.</p><p>ಉತ್ತಪ್ಪ ಅವರು ಸೆಂಚುರೀಸ್ ಲೈಫ್-ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಎಂಬ ನಿರ್ದೇಶಕರಾಗಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಇಪಿಎಫ್ ಹಣ ಪಾವತಿಸಿಲ್ಲ. ಸಂಬಳದಲ್ಲಿ ಇಪಿಎಫ್ ಹಣ ಕಡಿತಗೊಳಿಸಿಕೊಂಡು, ಉದ್ಯೋಗಿಗಳ ಖಾತೆಗೆ ಹಾಕದೇ ವಂಚಿಸಿದ್ದಾರೆ ಎಂಬ ಆರೋಸಿಸಲಾಗಿದೆ. </p><p>ದೂರಿನ ಅನ್ವಯ ಉತ್ತಪ್ಪ ಅವರ ವಿಳಾಸಕ್ಕೆ ಪೊಲೀಸರು ತೆರಳಿದ್ದು, ಅವರು ಸದ್ಯ ಆ ವಿಳಾಸದಲ್ಲಿ ವಾಸವಿಲ್ಲ ಎಂದು ತಿಳಿದು ಬಂದಿದೆ. ಅವರು ಒಂದು ವರ್ಷದ ಹಿಂದೆಯೇ ಅಲ್ಲಿಯ ಮನೆಯನ್ನು ಖಾಲಿ ಮಾಡಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪುಲಕೇಶಿನಗರ ಪೊಲೀಸರು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. </p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಿಷ್ಯ ನಿಧಿ ಪ್ರಾಧಿಕಾರವು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ವರದಿಯಾಗಿದೆ.</p>.ಖಿನ್ನತೆಯಿಂದ ಬಳಲಿದ ದಿನಗಳನ್ನು ಹಂಚಿಕೊಂಡ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ .ಟೆಸ್ಟ್ನಲ್ಲಿ ರಾಹುಲ್, ಅಭಿಮನ್ಯು ಉತ್ತಮ ಆರಂಭ ನೀಡಬಲ್ಲರು: ರಾಬಿನ್ ಉತ್ತಪ್ಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಆರೋಪದ ಮೇಲೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿದೆ.</p><p>ಇದೇ ತಿಂಗಳು 4ರಂದು ಅರೆಸ್ಟ್ ವಾರಂಟ್ ಜಾರಿಯಾಗಿದೆ ಎಂದು ಬೆಂಗಳೂರಿನ ಕೆ.ಆರ್.ಪುರಂ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ (2) ಷಡಕ್ಷರಿ ಗೋಪಾಲ ರೆಡ್ಡಿ ಹೇಳಿದ್ದಾರೆ. ಉತ್ತಪ್ಪ ಸುಮಾರು ₹ 23 ಲಕ್ಷ ವಂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ಉತ್ತಪ್ಪ ಪುಲಕೇಶಿ ನಗರ ಠಾಣೆ ವ್ಯಾಪ್ತಿಯ ನಿವಾಸಿ ಆಗಿರುವುದರಿಂದ ಅವರನ್ನು ಬಂಧಿಸುವಂತೆ ಗೋಪಾಲ ರೆಡ್ಡಿ ಅವರು ಪೊಲೀಸರಿಗೆ ಪತ್ರ ಬರೆದಿದ್ದಾರೆ.</p><p>ಉತ್ತಪ್ಪ ಅವರು ಸೆಂಚುರೀಸ್ ಲೈಫ್-ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಎಂಬ ನಿರ್ದೇಶಕರಾಗಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಇಪಿಎಫ್ ಹಣ ಪಾವತಿಸಿಲ್ಲ. ಸಂಬಳದಲ್ಲಿ ಇಪಿಎಫ್ ಹಣ ಕಡಿತಗೊಳಿಸಿಕೊಂಡು, ಉದ್ಯೋಗಿಗಳ ಖಾತೆಗೆ ಹಾಕದೇ ವಂಚಿಸಿದ್ದಾರೆ ಎಂಬ ಆರೋಸಿಸಲಾಗಿದೆ. </p><p>ದೂರಿನ ಅನ್ವಯ ಉತ್ತಪ್ಪ ಅವರ ವಿಳಾಸಕ್ಕೆ ಪೊಲೀಸರು ತೆರಳಿದ್ದು, ಅವರು ಸದ್ಯ ಆ ವಿಳಾಸದಲ್ಲಿ ವಾಸವಿಲ್ಲ ಎಂದು ತಿಳಿದು ಬಂದಿದೆ. ಅವರು ಒಂದು ವರ್ಷದ ಹಿಂದೆಯೇ ಅಲ್ಲಿಯ ಮನೆಯನ್ನು ಖಾಲಿ ಮಾಡಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪುಲಕೇಶಿನಗರ ಪೊಲೀಸರು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. </p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಿಷ್ಯ ನಿಧಿ ಪ್ರಾಧಿಕಾರವು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ವರದಿಯಾಗಿದೆ.</p>.ಖಿನ್ನತೆಯಿಂದ ಬಳಲಿದ ದಿನಗಳನ್ನು ಹಂಚಿಕೊಂಡ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ .ಟೆಸ್ಟ್ನಲ್ಲಿ ರಾಹುಲ್, ಅಭಿಮನ್ಯು ಉತ್ತಮ ಆರಂಭ ನೀಡಬಲ್ಲರು: ರಾಬಿನ್ ಉತ್ತಪ್ಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>