<p><strong>ನವದೆಹಲಿ:</strong> ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಇ–ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಆತನಿಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂದು ಹೇಳಲಾಗಿದೆ.</p>.KKR | ಗಂಭೀರ್ ಯಶಸ್ಸಿನ ಸೂತ್ರವನ್ನು ನನ್ನದೇ ಶೈಲಿಯಲ್ಲಿ ಅನುಸರಿಸುವೆ: ಬ್ರಾವೊ.<p>ಆರೋಪಿಯನ್ನು ಗುಜರಾತ್ ಮೂಲದ ಜಿಗ್ನೇಶ್ಸಿನ್ಹ ಪರ್ಮಾರ್ ಎಂದು ಗುರುತಿಸಲಾಗಿದ್ದು, ಶುಕ್ರವಾರ ಆತನನ್ನು ಬಂಧಿಸಲಾಗಿದೆ.</p><p>ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿದಂದೇ (ಏಪ್ರಿಲ್ 22) ಈತ ಇ–ಮೇಲ್ ಮೂಲಕ ಗಂಭೀರ್ಗೆ ಬೆದರಿಕೆ ಕಳುಹಿಸಿದ್ದ.</p><p>‘ಪಾರ್ಮರ್ ಎಂಜಿನಿಯರಿಂಗ್ ವಿದ್ಯಾರ್ಥಿ. ಆತನಿಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂದು ಕುಟುಂಬ ಹೇಳಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ’ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕೇಂದ್ರ) ಎಂ. ಹರ್ಷವರ್ಧನ್ ತಿಳಿಸಿದ್ದಾರೆ.</p>.ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡದ ಕೋಚ್ ಗಂಭೀರ್ಗೆ ಕೊಲೆ ಬೆದರಿಕೆ.<p>ಗೌತಮ್ ಗಂಭೀರ್ಗೆ ಸೇರಿದ ಇ–ಮೇಲ್ ವಿಳಾಸಕ್ಕೆ ಬೆದರಿಕೆ ಬಂದಿದೆ ಎಂದು ಈ ಹಿಂದೆ ಪೊಲೀಸರು ತಿಳಿಸಿದ್ದರು. ಈ ಸಂಬಂಧ ಸ್ಕ್ರೀನ್ ಶಾಟ್ಗಳ ಸಹಿತ ರಾಜಿಂದರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.</p><p>ಐಸಿಸ್ ಕಾಶ್ಮೀರ ಎಂದು ಹೇಳಿಕೊಂಡು ಕೊಲೆ ಬೆದರಿಕೆ ಇ–ಮೇಲ್ ಕಳುಹಿಸಲಾಗಿತ್ತು. ಬಿಜೆಪಿಯ ಮಾಜಿ ಸಂಸದರೂ ಆಗಿರುವ ಗಂಭೀರ್ ಅವರಿಗೆ ಈಗಾಗಲೇ ಪೊಲೀಸ್ ಭದ್ರತೆ ಇದೆ. ಹೀಗಾಗಿ ಅವರಿಗೆ ನೀಡಲಾದ ವಿಶೇಷ ಭದ್ರತೆ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಿಲ್ಲ ಎಂದು ಡಿಸಿಪಿ ಹೇಳಿದ್ದಾರೆ.</p><p>2022ರಲ್ಲೂ ಗಂಭೀರ್ಗೆ ಜೀವ ಬೆದರಿಕೆ ಬಂದಿತ್ತು. ಆ ಬಳಿಕ ಭದ್ರತೆ ಹೆಚ್ಚಿಸಲಾಗಿತ್ತು.</p>.ಡ್ರೆಸ್ಸಿಂಗ್ ಕೋಣೆಯಲ್ಲಿ ನಡೆಯುವ ಚರ್ಚೆಗಳು ಅಲ್ಲೇ ಉಳಿಯಲಿ: ಕೋಚ್ ಗೌತಮ್ ಗಂಭೀರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಇ–ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಆತನಿಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂದು ಹೇಳಲಾಗಿದೆ.</p>.KKR | ಗಂಭೀರ್ ಯಶಸ್ಸಿನ ಸೂತ್ರವನ್ನು ನನ್ನದೇ ಶೈಲಿಯಲ್ಲಿ ಅನುಸರಿಸುವೆ: ಬ್ರಾವೊ.<p>ಆರೋಪಿಯನ್ನು ಗುಜರಾತ್ ಮೂಲದ ಜಿಗ್ನೇಶ್ಸಿನ್ಹ ಪರ್ಮಾರ್ ಎಂದು ಗುರುತಿಸಲಾಗಿದ್ದು, ಶುಕ್ರವಾರ ಆತನನ್ನು ಬಂಧಿಸಲಾಗಿದೆ.</p><p>ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿದಂದೇ (ಏಪ್ರಿಲ್ 22) ಈತ ಇ–ಮೇಲ್ ಮೂಲಕ ಗಂಭೀರ್ಗೆ ಬೆದರಿಕೆ ಕಳುಹಿಸಿದ್ದ.</p><p>‘ಪಾರ್ಮರ್ ಎಂಜಿನಿಯರಿಂಗ್ ವಿದ್ಯಾರ್ಥಿ. ಆತನಿಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂದು ಕುಟುಂಬ ಹೇಳಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ’ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕೇಂದ್ರ) ಎಂ. ಹರ್ಷವರ್ಧನ್ ತಿಳಿಸಿದ್ದಾರೆ.</p>.ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡದ ಕೋಚ್ ಗಂಭೀರ್ಗೆ ಕೊಲೆ ಬೆದರಿಕೆ.<p>ಗೌತಮ್ ಗಂಭೀರ್ಗೆ ಸೇರಿದ ಇ–ಮೇಲ್ ವಿಳಾಸಕ್ಕೆ ಬೆದರಿಕೆ ಬಂದಿದೆ ಎಂದು ಈ ಹಿಂದೆ ಪೊಲೀಸರು ತಿಳಿಸಿದ್ದರು. ಈ ಸಂಬಂಧ ಸ್ಕ್ರೀನ್ ಶಾಟ್ಗಳ ಸಹಿತ ರಾಜಿಂದರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.</p><p>ಐಸಿಸ್ ಕಾಶ್ಮೀರ ಎಂದು ಹೇಳಿಕೊಂಡು ಕೊಲೆ ಬೆದರಿಕೆ ಇ–ಮೇಲ್ ಕಳುಹಿಸಲಾಗಿತ್ತು. ಬಿಜೆಪಿಯ ಮಾಜಿ ಸಂಸದರೂ ಆಗಿರುವ ಗಂಭೀರ್ ಅವರಿಗೆ ಈಗಾಗಲೇ ಪೊಲೀಸ್ ಭದ್ರತೆ ಇದೆ. ಹೀಗಾಗಿ ಅವರಿಗೆ ನೀಡಲಾದ ವಿಶೇಷ ಭದ್ರತೆ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಿಲ್ಲ ಎಂದು ಡಿಸಿಪಿ ಹೇಳಿದ್ದಾರೆ.</p><p>2022ರಲ್ಲೂ ಗಂಭೀರ್ಗೆ ಜೀವ ಬೆದರಿಕೆ ಬಂದಿತ್ತು. ಆ ಬಳಿಕ ಭದ್ರತೆ ಹೆಚ್ಚಿಸಲಾಗಿತ್ತು.</p>.ಡ್ರೆಸ್ಸಿಂಗ್ ಕೋಣೆಯಲ್ಲಿ ನಡೆಯುವ ಚರ್ಚೆಗಳು ಅಲ್ಲೇ ಉಳಿಯಲಿ: ಕೋಚ್ ಗೌತಮ್ ಗಂಭೀರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>