<p><strong>ನವದೆಹಲಿ:</strong> ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತ ಕ್ಷಿಪಣಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಹಿಮಾಚಲ ಪ್ರದೇಶದ ಧರ್ಮಶಾಲಾ ಸೇರಿದಂತೆ ದೇಶದ ಪಶ್ಚಿಮ ಹಾಗೂ ಉತ್ತರ ಭಾಗದ ಹಲವು ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿದೆ. </p><p>ಸಶಸ್ತ್ರ ಪಡೆಯ ಈ ಕಾರ್ಯಾಚರಣೆಯು ವಿಶ್ವದ ಶ್ರೀಮಂತ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಮೇಲೂ ಪರಿಣಾಮ ಬೀರಿದೆ. </p><p>ಇದರಿಂದಾಗಿ ಮೇ 11ರಂದು ಧರ್ಮಶಾಲಾದಲ್ಲಿ ನಿಗದಿಯಾಗಿದ್ದ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಐಪಿಎಲ್ ಪಂದ್ಯವನ್ನು ಅಹಮದಾಬಾದ್ಗೆ ಸ್ಥಳಾಂತರಿಸಲಾಗಿದೆ. </p><p>ಗುಜರಾತ್ ಕ್ರಿಕೆಟ್ ಸಂಸ್ಥೆಯ (ಜಿಸಿಎ) ಕಾರ್ಯದರ್ಶಿ ಅನಿಲ್ ಪಟೇಲ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪಂಜಾಬ್ ಹಾಗೂ ಮುಂಬೈ ನಡುವಣ ಪಂದ್ಯವು ಸಂಜೆ 3.30ಕ್ಕೆ ನಡೆಯಲಿದೆ. </p><p>ಇದೇ ಮೈದಾನದಲ್ಲಿ ಇಂದು (ಗುರುವಾರ) ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ನಿಗದಿಯಾಗಿದ್ದು, ಈಗಾಗಲೇ ಎರಡೂ ತಂಡಗಳು ಬಂದಿಳಿದಿವೆ. </p><p>ಮೇ 10ರವರೆಗೆ ಧರ್ಮಶಾಲಾ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಮುಂಬೈ ತಂಡದ ಪಯಣಕ್ಕೆ ತೊಂದರೆ ಉಂಟಾಗಿತ್ತು. </p><p>ಮೇ 11ರಂದೇ ದೆಹಲಿಯಲ್ಲಿ ರಾತ್ರಿ ನಡೆಯಲಿರುವ ಮಗದೊಂದು ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ಸವಾಲನ್ನು ಎದುರಿಸಲಿದೆ. ಧರ್ಮಶಾಲಾ ಹಾಗೂ ಚಂಡೀಗಢ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಅನಿಶ್ಚಿತತೆ ಮುಂದುವರಿದಿದೆ. </p><p>ಧರ್ಮಶಾಲಾದ ಎಚ್ಪಿಸಿಎ ಕ್ರೀಡಾಂಗಣವು ಪಂಜಾಬ್ ಕಿಂಗ್ಸ್ನ ಎರಡನೇ ತವರು ಕ್ರೀಡಾಂಗಣವಾಗಿದೆ.</p>.Operation Sindoor | ಪಂಜಾಬ್ನ ಆರು ಗಡಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ.Operation Sindoor | 100 ಉಗ್ರರು ಹತ, ಕಾರ್ಯಾಚರಣೆ ಜಾರಿಯಲ್ಲಿದೆ: ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತ ಕ್ಷಿಪಣಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಹಿಮಾಚಲ ಪ್ರದೇಶದ ಧರ್ಮಶಾಲಾ ಸೇರಿದಂತೆ ದೇಶದ ಪಶ್ಚಿಮ ಹಾಗೂ ಉತ್ತರ ಭಾಗದ ಹಲವು ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿದೆ. </p><p>ಸಶಸ್ತ್ರ ಪಡೆಯ ಈ ಕಾರ್ಯಾಚರಣೆಯು ವಿಶ್ವದ ಶ್ರೀಮಂತ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಮೇಲೂ ಪರಿಣಾಮ ಬೀರಿದೆ. </p><p>ಇದರಿಂದಾಗಿ ಮೇ 11ರಂದು ಧರ್ಮಶಾಲಾದಲ್ಲಿ ನಿಗದಿಯಾಗಿದ್ದ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಐಪಿಎಲ್ ಪಂದ್ಯವನ್ನು ಅಹಮದಾಬಾದ್ಗೆ ಸ್ಥಳಾಂತರಿಸಲಾಗಿದೆ. </p><p>ಗುಜರಾತ್ ಕ್ರಿಕೆಟ್ ಸಂಸ್ಥೆಯ (ಜಿಸಿಎ) ಕಾರ್ಯದರ್ಶಿ ಅನಿಲ್ ಪಟೇಲ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪಂಜಾಬ್ ಹಾಗೂ ಮುಂಬೈ ನಡುವಣ ಪಂದ್ಯವು ಸಂಜೆ 3.30ಕ್ಕೆ ನಡೆಯಲಿದೆ. </p><p>ಇದೇ ಮೈದಾನದಲ್ಲಿ ಇಂದು (ಗುರುವಾರ) ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ನಿಗದಿಯಾಗಿದ್ದು, ಈಗಾಗಲೇ ಎರಡೂ ತಂಡಗಳು ಬಂದಿಳಿದಿವೆ. </p><p>ಮೇ 10ರವರೆಗೆ ಧರ್ಮಶಾಲಾ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಮುಂಬೈ ತಂಡದ ಪಯಣಕ್ಕೆ ತೊಂದರೆ ಉಂಟಾಗಿತ್ತು. </p><p>ಮೇ 11ರಂದೇ ದೆಹಲಿಯಲ್ಲಿ ರಾತ್ರಿ ನಡೆಯಲಿರುವ ಮಗದೊಂದು ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ಸವಾಲನ್ನು ಎದುರಿಸಲಿದೆ. ಧರ್ಮಶಾಲಾ ಹಾಗೂ ಚಂಡೀಗಢ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಅನಿಶ್ಚಿತತೆ ಮುಂದುವರಿದಿದೆ. </p><p>ಧರ್ಮಶಾಲಾದ ಎಚ್ಪಿಸಿಎ ಕ್ರೀಡಾಂಗಣವು ಪಂಜಾಬ್ ಕಿಂಗ್ಸ್ನ ಎರಡನೇ ತವರು ಕ್ರೀಡಾಂಗಣವಾಗಿದೆ.</p>.Operation Sindoor | ಪಂಜಾಬ್ನ ಆರು ಗಡಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ.Operation Sindoor | 100 ಉಗ್ರರು ಹತ, ಕಾರ್ಯಾಚರಣೆ ಜಾರಿಯಲ್ಲಿದೆ: ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>