<p><strong>ಮುಂಬೈ</strong>: ಭಾರತದ ಆರಂಭಿಕ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮುಂಬೈ ತಂಡವನ್ನು ತೊರೆದು ಗೋವಾ ತಂಡ ಸೇರಲು ನಿರ್ಧರಿಸಿದ್ದಾರೆ.</p><p>ಜೈಸ್ವಾಲ್ ಮಂಗಳವಾರ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಬಿಟ್ಟು ಗೋವಾಕ್ಕೆ ಹೋಗುವ ಇಚ್ಛೆ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಆಡಳಿತ ಮಂಡಳಿ ಅವರ ವಿನಂತಿಯನ್ನು ಸ್ವೀಕರಿಸಿದೆ.</p><p>ಹೀಗಾಗಿ, 23 ವರ್ಷದ ಎಡಗೈ ಆಟಗಾರ ಜೈಸ್ವಾಲ್ 2025-26ರ ಋತುವಿನಿಂದ ಗೋವಾ ಪರ ಆಡಲಿದ್ದಾರೆ.</p><p>‘ಹೌದು, ಇದು ಆಶ್ಚರ್ಯಕರವಾಗಿದೆ. ಅಂತಹ ನಿರ್ಧಾರ ಕೈಗೊಳ್ಳಲು ಅವರಿಗೆ ಏನೋ ದೊಡ್ಡ ಕಾರಣ ಇರಬಹುದು. ಮುಂಬೈನಿಂದ ಬಿಡುಗಡೆ ಮಾಡಲು ಅವರು ನಮ್ಮನ್ನು ವಿನಂತಿಸಿದ್ದಾರೆ. ನಾವು ಅವರ ವಿನಂತಿಯನ್ನು ಸ್ವೀಕರಿಸಿದ್ದೇವೆ’ಎಂದು ಎಂಸಿಎ ಅಧಿಕಾರಿಯೊಬ್ಬರು ಬುಧವಾರ ಪಿಟಿಐಗೆ ತಿಳಿಸಿದ್ದಾರೆ.</p><p>ಭಾರತದ ಎಲ್ಲ ಕ್ರಿಕೆಟ್ ಆಟಗಾರರು ರಾಷ್ಟ್ರೀಯ ತಂಡದಲ್ಲಿಲ್ಲದಿದ್ದಾಗ ದೇಶೀಯ ಕ್ರಿಕೆಟ್ ಆಡಬೇಕು ಎಂಬ ಬಿಸಿಸಿಐ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ ನಂತರ ಜೈಸ್ವಾಲ್ ಕೊನೆಯದಾಗಿ ಜನವರಿ 23-25ರ ಅವಧಿಯಲ್ಲಿ ನಡೆದ ರಣಜಿ ಟ್ರೋಫಿ ಗ್ರೂಪ್ ಎ ಲೀಗ್ ಸುತ್ತಿನ ಪಂದ್ಯದಲ್ಲಿ ಮುಂಬೈ ಪರ ಆಡಿದ್ದರು.</p><p>ಆ ಪಂದ್ಯದಲ್ಲಿ ಜೈಸ್ವಾಲ್ 4 ಮತ್ತು 26 ರನ್ ಗಳಿಸಿದ್ದರು. ಮುಂಬೈ ತಂಡವು ಜಮ್ಮು ಮತ್ತು ಕಾಶ್ಮೀರ ವಿರುದ್ಧ ಐದು ವಿಕೆಟ್ಗಳಿಂದ ಪಂದ್ಯ ಸೋತಿತ್ತು.</p><p>‘ಅವರು(ಜೈಸ್ವಾಲ್) ನಮಗಾಗಿ ಆಡಲು ಬಯಸುತ್ತಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ. ಮುಂದಿನ ಋತುವಿನಿಂದ ಅವರು ನಮಗಾಗಿ ಆಡಲಿದ್ದಾರೆ’ಎಂದು ಗೋವಾ ಕ್ರಿಕೆಟ್ ಅಸೋಸಿಯೇಷನ್ನ ಕಾರ್ಯದರ್ಶಿ ಶಂಬಾ ದೇಸಾಯಿ ಪಿಟಿಐಗೆ ತಿಳಿಸಿದ್ದಾರೆ.</p><p>ಜೈಸ್ವಾಲ್ ರಾಷ್ಟ್ರೀಯ ಕರ್ತವ್ಯದಲ್ಲಿಲ್ಲದಿದ್ದಾಗ ಗೋವಾ ತಂಡವನ್ನು ಮುನ್ನಡೆಸಬಹುದು ಎಂದೂ ಶಂಬಾ ದೇಸಾಯಿ ಹೇಳಿದ್ದಾರೆ.</p><p>ಜೈಸ್ವಾಲ್ ಭಾರತ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದಾರೆ. ಆದ್ದರಿಂದ ಅವರು ನಾಯಕರಾಗಬಹುದು. ಅವರನ್ನು ನೇಮಕ ಮಾಡುವ ದಿಕ್ಕಿನಲ್ಲಿ ನಾವು ಕೆಲಸ ಮಾಡುತ್ತೇವೆ. ಅವರ ಲಭ್ಯತೆಯ ಬಗ್ಗೆ ಇನ್ನೂ ಮಾತನಾಡಿಲ್ಲ ಎಂದು ದೇಸಾಯಿ ಹೇಳಿದ್ದಾರೆ.</p><p>ಜೈಸ್ವಾಲ್ ಅವರು ಮುಂಬೈನಿಂದ ಗೋವಾಕ್ಕೆ ನಿಷ್ಠೆ ಬದಲಿಸಿದ ಮೂರನೇ ಕ್ರಿಕೆಟರ್ ಆಗಿದ್ದಾರೆ. ಈ ಹಿಂದೆ ಅರ್ಜುನ್ ತೆಂಡೂಲ್ಕರ್ ಮತ್ತು ಸಿದ್ದೇಶ್ ಲಾಡ್ ಅವರು 2022–23 ರಿಂದ ಗೋವಾ ಪರ ಆಡಿದ್ದರು. ಇವರಲ್ಲಿ ಲಾಡ್ ಅವರು ಎಂಸಿಎ ನಿಯಮದಂತೆ ‘ಕೂಲಿಂಗ್ ಆಫ್’ ಅವಧಿ ಪೂರೈಸಿ ಮತ್ತೆ ಮುಂಬೈ ತಂಡಕ್ಕೆ ಮರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭಾರತದ ಆರಂಭಿಕ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮುಂಬೈ ತಂಡವನ್ನು ತೊರೆದು ಗೋವಾ ತಂಡ ಸೇರಲು ನಿರ್ಧರಿಸಿದ್ದಾರೆ.</p><p>ಜೈಸ್ವಾಲ್ ಮಂಗಳವಾರ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಬಿಟ್ಟು ಗೋವಾಕ್ಕೆ ಹೋಗುವ ಇಚ್ಛೆ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಆಡಳಿತ ಮಂಡಳಿ ಅವರ ವಿನಂತಿಯನ್ನು ಸ್ವೀಕರಿಸಿದೆ.</p><p>ಹೀಗಾಗಿ, 23 ವರ್ಷದ ಎಡಗೈ ಆಟಗಾರ ಜೈಸ್ವಾಲ್ 2025-26ರ ಋತುವಿನಿಂದ ಗೋವಾ ಪರ ಆಡಲಿದ್ದಾರೆ.</p><p>‘ಹೌದು, ಇದು ಆಶ್ಚರ್ಯಕರವಾಗಿದೆ. ಅಂತಹ ನಿರ್ಧಾರ ಕೈಗೊಳ್ಳಲು ಅವರಿಗೆ ಏನೋ ದೊಡ್ಡ ಕಾರಣ ಇರಬಹುದು. ಮುಂಬೈನಿಂದ ಬಿಡುಗಡೆ ಮಾಡಲು ಅವರು ನಮ್ಮನ್ನು ವಿನಂತಿಸಿದ್ದಾರೆ. ನಾವು ಅವರ ವಿನಂತಿಯನ್ನು ಸ್ವೀಕರಿಸಿದ್ದೇವೆ’ಎಂದು ಎಂಸಿಎ ಅಧಿಕಾರಿಯೊಬ್ಬರು ಬುಧವಾರ ಪಿಟಿಐಗೆ ತಿಳಿಸಿದ್ದಾರೆ.</p><p>ಭಾರತದ ಎಲ್ಲ ಕ್ರಿಕೆಟ್ ಆಟಗಾರರು ರಾಷ್ಟ್ರೀಯ ತಂಡದಲ್ಲಿಲ್ಲದಿದ್ದಾಗ ದೇಶೀಯ ಕ್ರಿಕೆಟ್ ಆಡಬೇಕು ಎಂಬ ಬಿಸಿಸಿಐ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ ನಂತರ ಜೈಸ್ವಾಲ್ ಕೊನೆಯದಾಗಿ ಜನವರಿ 23-25ರ ಅವಧಿಯಲ್ಲಿ ನಡೆದ ರಣಜಿ ಟ್ರೋಫಿ ಗ್ರೂಪ್ ಎ ಲೀಗ್ ಸುತ್ತಿನ ಪಂದ್ಯದಲ್ಲಿ ಮುಂಬೈ ಪರ ಆಡಿದ್ದರು.</p><p>ಆ ಪಂದ್ಯದಲ್ಲಿ ಜೈಸ್ವಾಲ್ 4 ಮತ್ತು 26 ರನ್ ಗಳಿಸಿದ್ದರು. ಮುಂಬೈ ತಂಡವು ಜಮ್ಮು ಮತ್ತು ಕಾಶ್ಮೀರ ವಿರುದ್ಧ ಐದು ವಿಕೆಟ್ಗಳಿಂದ ಪಂದ್ಯ ಸೋತಿತ್ತು.</p><p>‘ಅವರು(ಜೈಸ್ವಾಲ್) ನಮಗಾಗಿ ಆಡಲು ಬಯಸುತ್ತಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ. ಮುಂದಿನ ಋತುವಿನಿಂದ ಅವರು ನಮಗಾಗಿ ಆಡಲಿದ್ದಾರೆ’ಎಂದು ಗೋವಾ ಕ್ರಿಕೆಟ್ ಅಸೋಸಿಯೇಷನ್ನ ಕಾರ್ಯದರ್ಶಿ ಶಂಬಾ ದೇಸಾಯಿ ಪಿಟಿಐಗೆ ತಿಳಿಸಿದ್ದಾರೆ.</p><p>ಜೈಸ್ವಾಲ್ ರಾಷ್ಟ್ರೀಯ ಕರ್ತವ್ಯದಲ್ಲಿಲ್ಲದಿದ್ದಾಗ ಗೋವಾ ತಂಡವನ್ನು ಮುನ್ನಡೆಸಬಹುದು ಎಂದೂ ಶಂಬಾ ದೇಸಾಯಿ ಹೇಳಿದ್ದಾರೆ.</p><p>ಜೈಸ್ವಾಲ್ ಭಾರತ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದಾರೆ. ಆದ್ದರಿಂದ ಅವರು ನಾಯಕರಾಗಬಹುದು. ಅವರನ್ನು ನೇಮಕ ಮಾಡುವ ದಿಕ್ಕಿನಲ್ಲಿ ನಾವು ಕೆಲಸ ಮಾಡುತ್ತೇವೆ. ಅವರ ಲಭ್ಯತೆಯ ಬಗ್ಗೆ ಇನ್ನೂ ಮಾತನಾಡಿಲ್ಲ ಎಂದು ದೇಸಾಯಿ ಹೇಳಿದ್ದಾರೆ.</p><p>ಜೈಸ್ವಾಲ್ ಅವರು ಮುಂಬೈನಿಂದ ಗೋವಾಕ್ಕೆ ನಿಷ್ಠೆ ಬದಲಿಸಿದ ಮೂರನೇ ಕ್ರಿಕೆಟರ್ ಆಗಿದ್ದಾರೆ. ಈ ಹಿಂದೆ ಅರ್ಜುನ್ ತೆಂಡೂಲ್ಕರ್ ಮತ್ತು ಸಿದ್ದೇಶ್ ಲಾಡ್ ಅವರು 2022–23 ರಿಂದ ಗೋವಾ ಪರ ಆಡಿದ್ದರು. ಇವರಲ್ಲಿ ಲಾಡ್ ಅವರು ಎಂಸಿಎ ನಿಯಮದಂತೆ ‘ಕೂಲಿಂಗ್ ಆಫ್’ ಅವಧಿ ಪೂರೈಸಿ ಮತ್ತೆ ಮುಂಬೈ ತಂಡಕ್ಕೆ ಮರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>