




ಕಲೆ: ಸಂತೋಷ್ ಸಸಿಹಿತ್ಲು
ಆದಾಯದ ಕೊರತೆ, ಹೆಚ್ಚುತ್ತಿರುವ ಸಾಲ, ತಾಳಮೇಳವಿಲ್ಲದ ಅನುದಾನ ಹಂಚಿಕೆ... ಸಿದ್ದರಾಮಯ್ಯ ಅವರ ಲೆಕ್ಕಾಚಾರ ಹಳಿತಪ್ಪಿದೆ ಎಂಬುದಕ್ಕೆ ಬಜೆಟ್ ಪುಸ್ತಕವೇ ಸಾಕ್ಷಿ. ನಿರೀಕ್ಷೆಗಳನ್ನು ಸೃಷ್ಟಿಸಿ, ಅತೀವ ನಿರಾಸೆ ಉಂಟುಮಾಡಿದ್ದಾರೆ. ಈ ಬಜೆಟ್ ಕರ್ಣಕಠೋರ ಮತ್ತು ರಾಜ್ಯಕ್ಕೆ ಭಾರ. ಮುಖ್ಯಮಂತ್ರಿ ಅವರು ಕೇಂದ್ರದ ನಿಂದನೆಯನ್ನು ಈಗಲೂ ಮುಂದುವರಿಸಿದ್ದಾರೆ.– ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಮೇಲೆ ಸಾಲದ ಹೊರೆ ಹೇರಿದ್ದಾರೆ. ಈ ಸರ್ಕಾರವು ಒಟ್ಟು ₹4.39 ಲಕ್ಷ ಕೋಟಿ ಸಾಲ ಮಾಡಿದೆ. ಈ ಹಣಕ್ಕೆ ಬಡ್ಡಿ ಪಾವತಿಸಲೂ ಆಗದ ಪರಿಸ್ಥಿತಿ ಇದೆ. ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಕೊಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ಸರ್ಕಾರವು ಈಗ, ‘ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ’ ಎನ್ನುತ್ತಿದೆ. ಯಾವ ಯೋಜನೆಯೂ ಇಲ್ಲದ ಖಾಲಿ ಚೊಂಬಿನ ಬಜೆಟ್ ಇದು.– ಆರ್.ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.