<p><strong>ಬೆಂಗಳೂರು</strong>: ‘ಜೈಲಿನ ಒಳಗೆ ಮೊಬೈಲ್, ಟಿ.ವಿ ಹಾಗೂ ನೆಟ್ಫ್ಲಿಕ್ಸ್ ವೀಕ್ಷಣೆಗೆ ಅವಕಾಶ ಸೇರಿದಂತೆ ಐಷಾರಾಮಿ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಬಿಂಬಿಸುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. </p>.<p>ಕರ್ತವ್ಯ ಲೋಪದ ಆರೋಪದ ಮೇಲೆ ಜೈಲಿನ ವಾರ್ಡರ್ಗಳಾದ ಶಿವಾನಂದ ಕರ್ಲಬಟ್ಟಿ, ನಿರಂಜನ್ ಕಾಮತ್ ಹಾಗೂ ಹನುಮಂತಪ್ಪ ಹಡಪದ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.</p>.<p>‘ನಾಳೆ ಐಪಿಎಲ್ ಪಂದ್ಯವಿದೆ, ಈ ಸಲ ಕಪ್ ನಮ್ದೇ. ಜೈಲಿನಲ್ಲಿ ಕೈದಿಗಳಿಗೆ ಮೊಬೈಲ್, ಟಿ.ವಿ ಹಾಗೂ ನೆಟ್ಫ್ಲಿಕ್ಸ್ ವೀಕ್ಷಿಸುವ ಸೌಲಭ್ಯಗಳಿವೆ. ಹಿರಿಯ ಅಧಿಕಾರಿಗಳೇ ಮೊಬೈಲ್ ಒದಗಿಸಿದ್ದಾರೆ. ಕಾಸು ಕೊಟ್ಟರೆ ಎಲ್ಲವೂ ಸಿಗುತ್ತದೆ’ ಎಂದು ಸ್ವತಃ ವಿಚಾರಣಾ ಕೈದಿಗಳೇ ಈ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.</p>.<p>ಜಾಲತಾಣದಲ್ಲಿ ವಿಡಿಯೊ ಹರಿದಾಡುತ್ತಿದ್ದಂತೆ ಎಚ್ಚೆತ್ತ ಜೈಲಿನ ಅಧಿಕಾರಿಗಳು, ಆರೋಪಿಗಳನ್ನು ಇರಿಸಲಾಗಿದ್ದ 9 ಮತ್ತು 6ನೇ ಬ್ಯಾರಕ್ ಅನ್ನು ತೀವ್ರ ತಪಾಸಣೆಗೊಳಪಡಿಸಿದರು. ಅಧಿಕಾರಿಗಳ ಕಣ್ತಪ್ಪಿಸಿ ಪ್ಲಾಸ್ಟಿಕ್ ಕವರ್ಗಳಲ್ಲಿ ಸುತ್ತಿ ಶೌಚಗುಂಡಿಯ ಕೊಳವೆಯಲ್ಲಿ ಮೊಬೈಲ್ ಫೋನ್ಗಳು ಬಚ್ಚಿಡಲಾಗಿತ್ತು. ಎಲ್ಲ ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಜೈಲು ಅಧಿಕಾರಿಗಳು ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.</p>.<p>ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿಪಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಿದ್ದಾರೆ. ಕೈದಿಗಳಿದ್ದ ಬ್ಯಾರಕ್ ನೋಡಿಕೊಳ್ಳುತ್ತಿದ್ದ ವಾರ್ಡರ್ಗಳನ್ನು ಅಮಾನತು ಮಾಡಿದ್ದಾರೆ.</p>.<p>ದರ್ಶನ್, ಅಭಿ ಎಂಬ ವಿಚಾರಣಾಧೀನ ಕೈದಿಗಳು ಈ ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ಗೊತ್ತಾಗಿದೆ. ವಿಡಿಯೊ ತುಣುಕಿನಲ್ಲಿರುವ ಧ್ವನಿ ಜಿಪ್ಸಿನ್ ಡೇನಿಯಲ್ ಎಂದು ಗುರುತಿಸಲಾಗಿದೆ. ದರ್ಶನ್ ಮತ್ತು ಅಭಿ ಎರಡೂವರೆ ವರ್ಷದ ಹಿಂದೆ ನಡೆದ ಹೆಣ್ಣೂರು ಬಂಡೆಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳು. ಈ ಮೂವರು ಸುಂಕದಕಟ್ಟೆಯ ರಕ್ಷಿತ್ ಗ್ಯಾಂಗ್ ಸದಸ್ಯರು.</p>.<p>ಮಾರ್ಚ್ 27ರಂದು ದರ್ಶನ್ನನ್ನು ಬೇರೆ ಬ್ಯಾರಕ್ಗೆ ಸ್ಥಳಾಂತರ ಮಾಡಲಾಗಿತ್ತು. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯಕ್ಕೆ ಸಂಬಂಧಪಟ್ಟಂತೆ ದುರುದ್ದೇಶಪೂರ್ವಕವಾಗಿ ಡಿಜಿಪಿ ಅಲೋಕ್ ಕುಮಾರ್ ಹೆಸರನ್ನು ಎಳೆದು ತಂದಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಈ ಮೂವರ ವಿರುದ್ಧ ಪ್ರಕರಣ ದಾಖಲಿಸಿ, ಜೈಲಿನ ಕ್ವಾರಂಟೈನ್ ಸೆಲ್ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ವಿಡಿಯೊದ ಸತ್ಯಾಸತ್ಯತೆಯ ತನಿಖೆ: ವಿಡಿಯೊವನ್ನು ಜೈಲಿನ ಒಳ ಭಾಗದಲ್ಲಿ ಚಿತ್ರೀಕರಿಸಲಾಗಿದೆಯೇ ಅಥವಾ ತಂತ್ರಜ್ಞಾನದ ನೆರವಿನಿಂದ ನಕಲಿ ವಿಡಿಯೊ ಸೃಷ್ಟಿಸಲಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ವಿಡಿಯೊದಲ್ಲಿರುವ ವಿಚಾರಣಾ ಕೈದಿಗಳು ಜೈಲಿನಲ್ಲಿ ಮೊಬೈಲ್ ಬಳಸುತ್ತಾ ಐಷಾರಾಮಿ ಜೀವನ ನಡೆಸುತ್ತಿರುವಂತೆ ಬಿಂಬಿಸಲಾಗಿದ್ದು, ಜೈಲಿನೊಳಗೆ ಇಷ್ಟೆಲ್ಲಾ ಸೌಲಭ್ಯಗಳು ದೊರೆಯುತ್ತಿರುವುದು ಹೇಗೆ ಎಂಬ ಚರ್ಚೆ ಶುರುವಾಗಿದೆ. ವಿಡಿಯೊದ ಸತ್ಯಾಸತ್ಯತೆ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಜೈಲರ್ ವಿರುದ್ದವೂ ಕ್ರಮ: ಡಿಜಿಪಿ</strong></p><p>‘ಕೈದಿಗಳನ್ನು ಬೇರೆ ಬೇರೆ ಬ್ಯಾರಕ್ಗಳಿಗೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು ಅದೇ ರೀತಿ ದರ್ಶನ್ ನನ್ನು ಬೇರೆ ಬ್ಯಾರಕ್ಗೆ ಸ್ಥಳಾಂತರ ಮಾಡಲಾಗಿತ್ತು. ವಿಚಾರಣಾ ಕೈದಿಗಳು ಶೌಚಗುಂಡಿಯ ಕೊಳವೆಯಲ್ಲಿ ಅಡಗಿಸಿಟ್ಟಿದ್ದ ಮೊಬೈಲ್ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ. ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದ್ದು ಜೈಲರ್ ಅವರ ವಿಚಾರಣೆ ನಡೆಸಿ ಅವರ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ‘ಜೈಲಿನ ಕೆಲವು ಭಾಗಗಳಲ್ಲಿ ಇನ್ನೂ ಏರ್ಟೆಲ್ ಸಿಗ್ನಲ್ ಇರುವುದನ್ನು ಪತ್ತೆ ಹಚ್ಚಲಾಗಿದೆ. ಸಮಸ್ಯೆಯನ್ನು ಸರಿಪಡಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಕೈದಿಗಳು ಉದ್ದೇಶಪೂರ್ವಕವಾಗಿ ಮಾಧ್ಯಮಗಳಿಗೆ ವಿಡಿಯೊ ನೀಡಿ ಅಧಿಕಾರಿಗಳ ಮನೋಬಲವನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಎಚ್ಚರಿಸಿದ್ದಾರೆ.</p>.<p><strong>ಮೊಬೈಲ್ ಸಿಮ್ ಕಾರ್ಡ್ ಬ್ಯಾರಕ್ಗಳ ತಪಾಸಣೆ</strong></p><p>ವೇಳೆ 9 ಮೊಬೈಲ್ಗಳು ಮತ್ತು 6 ಸಿಮ್ ಕಾರ್ಡ್ಗಳು ಇಯರ್ ಫೋನ್ ಇಯರ್ ಬಡ್ಸ್ ಚಾರ್ಜರ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅಲೋಕ್ ಕುಮಾರ್ ಅವರು ಕಾರಾಗೃಹ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ನಂತರ ಜೈಲುಗಳಲ್ಲಿ ನಡೆಯುತ್ತಿದ್ದ ಎಲ್ಲಾ ಅಕ್ರಮಗಳಿಗೆ ಕಡಿವಾಣ ಹಾಕಿದ್ದರು. ಅವರ ಈ ಕಟ್ಟುನಿಟ್ಟಿನ ಕ್ರಮದಿಂದಾಗಿ ಕೆಲ ವಿಚಾರಣಾಧೀನ ಕೈದಿಗಳು ಹಾಗೂ ಸಜಾ ಕೈದಿಗಳು ಅಧಿಕಾರಿ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದರು. ಈ ಬೆನ್ನಲ್ಲೇ ಅದಕ್ಕೆ ಪ್ರತಿಕಾರ ತೀರಿಸಿಕೊಳ್ಳುವ ಉದ್ದೇಶದಿಂದ ದುಷ್ಕರ್ಮಿಗಳು ಅಲೋಕ್ ಕುಮಾರ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಈ ವಿಡಿಯೊ ಮಾಡಿ ಹರಿಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಜೈಲಿನ ಒಳಗೆ ಮೊಬೈಲ್, ಟಿ.ವಿ ಹಾಗೂ ನೆಟ್ಫ್ಲಿಕ್ಸ್ ವೀಕ್ಷಣೆಗೆ ಅವಕಾಶ ಸೇರಿದಂತೆ ಐಷಾರಾಮಿ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಬಿಂಬಿಸುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. </p>.<p>ಕರ್ತವ್ಯ ಲೋಪದ ಆರೋಪದ ಮೇಲೆ ಜೈಲಿನ ವಾರ್ಡರ್ಗಳಾದ ಶಿವಾನಂದ ಕರ್ಲಬಟ್ಟಿ, ನಿರಂಜನ್ ಕಾಮತ್ ಹಾಗೂ ಹನುಮಂತಪ್ಪ ಹಡಪದ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.</p>.<p>‘ನಾಳೆ ಐಪಿಎಲ್ ಪಂದ್ಯವಿದೆ, ಈ ಸಲ ಕಪ್ ನಮ್ದೇ. ಜೈಲಿನಲ್ಲಿ ಕೈದಿಗಳಿಗೆ ಮೊಬೈಲ್, ಟಿ.ವಿ ಹಾಗೂ ನೆಟ್ಫ್ಲಿಕ್ಸ್ ವೀಕ್ಷಿಸುವ ಸೌಲಭ್ಯಗಳಿವೆ. ಹಿರಿಯ ಅಧಿಕಾರಿಗಳೇ ಮೊಬೈಲ್ ಒದಗಿಸಿದ್ದಾರೆ. ಕಾಸು ಕೊಟ್ಟರೆ ಎಲ್ಲವೂ ಸಿಗುತ್ತದೆ’ ಎಂದು ಸ್ವತಃ ವಿಚಾರಣಾ ಕೈದಿಗಳೇ ಈ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.</p>.<p>ಜಾಲತಾಣದಲ್ಲಿ ವಿಡಿಯೊ ಹರಿದಾಡುತ್ತಿದ್ದಂತೆ ಎಚ್ಚೆತ್ತ ಜೈಲಿನ ಅಧಿಕಾರಿಗಳು, ಆರೋಪಿಗಳನ್ನು ಇರಿಸಲಾಗಿದ್ದ 9 ಮತ್ತು 6ನೇ ಬ್ಯಾರಕ್ ಅನ್ನು ತೀವ್ರ ತಪಾಸಣೆಗೊಳಪಡಿಸಿದರು. ಅಧಿಕಾರಿಗಳ ಕಣ್ತಪ್ಪಿಸಿ ಪ್ಲಾಸ್ಟಿಕ್ ಕವರ್ಗಳಲ್ಲಿ ಸುತ್ತಿ ಶೌಚಗುಂಡಿಯ ಕೊಳವೆಯಲ್ಲಿ ಮೊಬೈಲ್ ಫೋನ್ಗಳು ಬಚ್ಚಿಡಲಾಗಿತ್ತು. ಎಲ್ಲ ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಜೈಲು ಅಧಿಕಾರಿಗಳು ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.</p>.<p>ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿಪಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಿದ್ದಾರೆ. ಕೈದಿಗಳಿದ್ದ ಬ್ಯಾರಕ್ ನೋಡಿಕೊಳ್ಳುತ್ತಿದ್ದ ವಾರ್ಡರ್ಗಳನ್ನು ಅಮಾನತು ಮಾಡಿದ್ದಾರೆ.</p>.<p>ದರ್ಶನ್, ಅಭಿ ಎಂಬ ವಿಚಾರಣಾಧೀನ ಕೈದಿಗಳು ಈ ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ಗೊತ್ತಾಗಿದೆ. ವಿಡಿಯೊ ತುಣುಕಿನಲ್ಲಿರುವ ಧ್ವನಿ ಜಿಪ್ಸಿನ್ ಡೇನಿಯಲ್ ಎಂದು ಗುರುತಿಸಲಾಗಿದೆ. ದರ್ಶನ್ ಮತ್ತು ಅಭಿ ಎರಡೂವರೆ ವರ್ಷದ ಹಿಂದೆ ನಡೆದ ಹೆಣ್ಣೂರು ಬಂಡೆಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳು. ಈ ಮೂವರು ಸುಂಕದಕಟ್ಟೆಯ ರಕ್ಷಿತ್ ಗ್ಯಾಂಗ್ ಸದಸ್ಯರು.</p>.<p>ಮಾರ್ಚ್ 27ರಂದು ದರ್ಶನ್ನನ್ನು ಬೇರೆ ಬ್ಯಾರಕ್ಗೆ ಸ್ಥಳಾಂತರ ಮಾಡಲಾಗಿತ್ತು. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯಕ್ಕೆ ಸಂಬಂಧಪಟ್ಟಂತೆ ದುರುದ್ದೇಶಪೂರ್ವಕವಾಗಿ ಡಿಜಿಪಿ ಅಲೋಕ್ ಕುಮಾರ್ ಹೆಸರನ್ನು ಎಳೆದು ತಂದಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಈ ಮೂವರ ವಿರುದ್ಧ ಪ್ರಕರಣ ದಾಖಲಿಸಿ, ಜೈಲಿನ ಕ್ವಾರಂಟೈನ್ ಸೆಲ್ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ವಿಡಿಯೊದ ಸತ್ಯಾಸತ್ಯತೆಯ ತನಿಖೆ: ವಿಡಿಯೊವನ್ನು ಜೈಲಿನ ಒಳ ಭಾಗದಲ್ಲಿ ಚಿತ್ರೀಕರಿಸಲಾಗಿದೆಯೇ ಅಥವಾ ತಂತ್ರಜ್ಞಾನದ ನೆರವಿನಿಂದ ನಕಲಿ ವಿಡಿಯೊ ಸೃಷ್ಟಿಸಲಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ವಿಡಿಯೊದಲ್ಲಿರುವ ವಿಚಾರಣಾ ಕೈದಿಗಳು ಜೈಲಿನಲ್ಲಿ ಮೊಬೈಲ್ ಬಳಸುತ್ತಾ ಐಷಾರಾಮಿ ಜೀವನ ನಡೆಸುತ್ತಿರುವಂತೆ ಬಿಂಬಿಸಲಾಗಿದ್ದು, ಜೈಲಿನೊಳಗೆ ಇಷ್ಟೆಲ್ಲಾ ಸೌಲಭ್ಯಗಳು ದೊರೆಯುತ್ತಿರುವುದು ಹೇಗೆ ಎಂಬ ಚರ್ಚೆ ಶುರುವಾಗಿದೆ. ವಿಡಿಯೊದ ಸತ್ಯಾಸತ್ಯತೆ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಜೈಲರ್ ವಿರುದ್ದವೂ ಕ್ರಮ: ಡಿಜಿಪಿ</strong></p><p>‘ಕೈದಿಗಳನ್ನು ಬೇರೆ ಬೇರೆ ಬ್ಯಾರಕ್ಗಳಿಗೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು ಅದೇ ರೀತಿ ದರ್ಶನ್ ನನ್ನು ಬೇರೆ ಬ್ಯಾರಕ್ಗೆ ಸ್ಥಳಾಂತರ ಮಾಡಲಾಗಿತ್ತು. ವಿಚಾರಣಾ ಕೈದಿಗಳು ಶೌಚಗುಂಡಿಯ ಕೊಳವೆಯಲ್ಲಿ ಅಡಗಿಸಿಟ್ಟಿದ್ದ ಮೊಬೈಲ್ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ. ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದ್ದು ಜೈಲರ್ ಅವರ ವಿಚಾರಣೆ ನಡೆಸಿ ಅವರ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ‘ಜೈಲಿನ ಕೆಲವು ಭಾಗಗಳಲ್ಲಿ ಇನ್ನೂ ಏರ್ಟೆಲ್ ಸಿಗ್ನಲ್ ಇರುವುದನ್ನು ಪತ್ತೆ ಹಚ್ಚಲಾಗಿದೆ. ಸಮಸ್ಯೆಯನ್ನು ಸರಿಪಡಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಕೈದಿಗಳು ಉದ್ದೇಶಪೂರ್ವಕವಾಗಿ ಮಾಧ್ಯಮಗಳಿಗೆ ವಿಡಿಯೊ ನೀಡಿ ಅಧಿಕಾರಿಗಳ ಮನೋಬಲವನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಎಚ್ಚರಿಸಿದ್ದಾರೆ.</p>.<p><strong>ಮೊಬೈಲ್ ಸಿಮ್ ಕಾರ್ಡ್ ಬ್ಯಾರಕ್ಗಳ ತಪಾಸಣೆ</strong></p><p>ವೇಳೆ 9 ಮೊಬೈಲ್ಗಳು ಮತ್ತು 6 ಸಿಮ್ ಕಾರ್ಡ್ಗಳು ಇಯರ್ ಫೋನ್ ಇಯರ್ ಬಡ್ಸ್ ಚಾರ್ಜರ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅಲೋಕ್ ಕುಮಾರ್ ಅವರು ಕಾರಾಗೃಹ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ನಂತರ ಜೈಲುಗಳಲ್ಲಿ ನಡೆಯುತ್ತಿದ್ದ ಎಲ್ಲಾ ಅಕ್ರಮಗಳಿಗೆ ಕಡಿವಾಣ ಹಾಕಿದ್ದರು. ಅವರ ಈ ಕಟ್ಟುನಿಟ್ಟಿನ ಕ್ರಮದಿಂದಾಗಿ ಕೆಲ ವಿಚಾರಣಾಧೀನ ಕೈದಿಗಳು ಹಾಗೂ ಸಜಾ ಕೈದಿಗಳು ಅಧಿಕಾರಿ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದರು. ಈ ಬೆನ್ನಲ್ಲೇ ಅದಕ್ಕೆ ಪ್ರತಿಕಾರ ತೀರಿಸಿಕೊಳ್ಳುವ ಉದ್ದೇಶದಿಂದ ದುಷ್ಕರ್ಮಿಗಳು ಅಲೋಕ್ ಕುಮಾರ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಈ ವಿಡಿಯೊ ಮಾಡಿ ಹರಿಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>