ಬೆಂಗಳೂರು: ‘ಸಚಿವರು ಇಲಾಖಾ ಕಾರ್ಯಕ್ರಮ ಹಾಗೂ ಕೋವಿಡ್ ಸಭೆಗಳಲ್ಲಿ ನಿರತರಾಗಿದ್ದರಿಂದ ಅವರ ಉಸ್ತುವಾರಿ ಜಿಲ್ಲೆಯಾದ ದಕ್ಷಿಣ ಕನ್ನಡಕ್ಕೆ ಸಾರ್ವಜನಿಕರ ಅಹವಾಲು ಸ್ವೀಕರಿಸಲು ತೆರಳಿದ್ದೆ. ಈ ಪ್ರಯಾಣದ ವೆಚ್ಚವನ್ನು ಸ್ವಂತ ಹಣದಿಂದಲೇ ಭರಿಸಿದ್ದೇನೆ’ ಎಂದು ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ (ಪಿ.ಎಸ್) ಕೆ.ಎ.ಹಿದಾಯತ್ ಉಲ್ಲಾ ತಿಳಿಸಿದ್ದಾರೆ.