<p><strong>ಬೆಂಗಳೂರು</strong>: ಆರ್ಸಿಬಿ ಮತ್ತು ಎಸ್ಆರ್ಎಚ್ ತಂಡಗಳ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದ ವೇಳೆ 20ಕ್ಕೂ ಹೆಚ್ಚು ಮೊಬೈಲ್ ಕಳ್ಳತನವಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಲಾಗಿದೆ.</p>.<p>ಪಂದ್ಯ ಮುಗಿದ ಬಳಿಕ ಕ್ರಿಕೆಟ್ ಪ್ರೇಮಿಗಳು ಹೊರಗೆ ಬರುವ ವೇಳೆ ಕಳ್ಳರು ಮೊಬೈಲ್ ಹಾಗೂ ಪರ್ಸ್ಗಳನ್ನು ಕಳವು ಮಾಡಿದ್ದಾರೆ. </p>.<p>ಮೊಬೈಲ್ ಕಳೆದುಕೊಂಡ ಕೆಲವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಮತ್ತೆ ಕೆಲವರು ಇ-ಲಾಸ್ಟ್ ಮೂಲಕ ದೂರು ಸಲ್ಲಿಸಿದ್ದಾರೆ.</p>.<p>ಗೇಟ್ ನಂ 1, 2 ಮತ್ತು 3 ರಲ್ಲಿ ಅತಿ ಹೆಚ್ಚು ಕಳ್ಳತನವಾಗಿದೆ. ಠಾಣೆಯಲ್ಲಿ 8 ಮಂದಿ ದೂರು ಸಲ್ಲಿಸಿದ್ದು, ಇ-ಲಾಸ್ಟ್ನಲ್ಲಿ 12ಕ್ಕೂ ಹೆಚ್ಚು ದೂರು ಸಲ್ಲಿಕೆಯಾಗಿದೆ.</p>.<p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದ ವೇಳೆ ಯಾವುದೇ ಗೊಂದಲಕ್ಕೆ ಅವಕಾಶ ನೀಡದ ನಗರ ಪೊಲೀಸರಿಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಕಾಲ್ತುಳಿತ ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರೀಡಾಂಗಣ ಸುತ್ತ ಮುತ್ತ ಸುಮಾರು 2 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಿ ಬಿಗಿ ಭದ್ರತೆ ಒದಗಿಸಿದ್ದರು. ಹೀಗಾಗಿ ಕ್ರೀಡಾಂಗಣದ ಪ್ರವೇಶ ಹಾಗೂ ನಿರ್ಗಮನದ ವೇಳೆ ನೂಕು ನುಗ್ಗಲು ಆಗದ ರೀತಿ ವ್ಯವಸ್ಥೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆರ್ಸಿಬಿ ಮತ್ತು ಎಸ್ಆರ್ಎಚ್ ತಂಡಗಳ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದ ವೇಳೆ 20ಕ್ಕೂ ಹೆಚ್ಚು ಮೊಬೈಲ್ ಕಳ್ಳತನವಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಲಾಗಿದೆ.</p>.<p>ಪಂದ್ಯ ಮುಗಿದ ಬಳಿಕ ಕ್ರಿಕೆಟ್ ಪ್ರೇಮಿಗಳು ಹೊರಗೆ ಬರುವ ವೇಳೆ ಕಳ್ಳರು ಮೊಬೈಲ್ ಹಾಗೂ ಪರ್ಸ್ಗಳನ್ನು ಕಳವು ಮಾಡಿದ್ದಾರೆ. </p>.<p>ಮೊಬೈಲ್ ಕಳೆದುಕೊಂಡ ಕೆಲವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಮತ್ತೆ ಕೆಲವರು ಇ-ಲಾಸ್ಟ್ ಮೂಲಕ ದೂರು ಸಲ್ಲಿಸಿದ್ದಾರೆ.</p>.<p>ಗೇಟ್ ನಂ 1, 2 ಮತ್ತು 3 ರಲ್ಲಿ ಅತಿ ಹೆಚ್ಚು ಕಳ್ಳತನವಾಗಿದೆ. ಠಾಣೆಯಲ್ಲಿ 8 ಮಂದಿ ದೂರು ಸಲ್ಲಿಸಿದ್ದು, ಇ-ಲಾಸ್ಟ್ನಲ್ಲಿ 12ಕ್ಕೂ ಹೆಚ್ಚು ದೂರು ಸಲ್ಲಿಕೆಯಾಗಿದೆ.</p>.<p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದ ವೇಳೆ ಯಾವುದೇ ಗೊಂದಲಕ್ಕೆ ಅವಕಾಶ ನೀಡದ ನಗರ ಪೊಲೀಸರಿಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಕಾಲ್ತುಳಿತ ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರೀಡಾಂಗಣ ಸುತ್ತ ಮುತ್ತ ಸುಮಾರು 2 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಿ ಬಿಗಿ ಭದ್ರತೆ ಒದಗಿಸಿದ್ದರು. ಹೀಗಾಗಿ ಕ್ರೀಡಾಂಗಣದ ಪ್ರವೇಶ ಹಾಗೂ ನಿರ್ಗಮನದ ವೇಳೆ ನೂಕು ನುಗ್ಗಲು ಆಗದ ರೀತಿ ವ್ಯವಸ್ಥೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>