<p><strong>ಬೆಂಗಳೂರು:</strong> ಉತ್ತರಹಳ್ಳಿ ಮುಖ್ಯರಸ್ತೆ ಬಳಿ ಶನಿವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಚಕ್ರ ತಲೆ ಮೇಲೆ ಹರಿದು ಮಂಜಮ್ಮ (40) ಅವರು ಮೃತಪಟ್ಟಿದ್ದಾರೆ.</p>.<p>‘ಎಚ್. ಗೊಲ್ಲಹಳ್ಳಿ ನಿವಾಸಿ ಮಂಜಮ್ಮ, ಟೈಲರ್ ಆಗಿದ್ದರು. ಕೆಲಸ ನಿಮಿತ್ತ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಕೆಂಗೇರಿ ಸಂಚಾರ ಠಾಣೆ ಪೊಲೀಸರು ಹೇಳಿದರು.</p>.<p>‘ಮಂಜಮ್ಮ ಅವರು ಉತ್ತರಹಳ್ಳಿ ಕಡೆಯಿಂದ ಕೆಂಗೇರಿ ಕಡೆಗೆ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಕ್ಯಾಂಟರ್ (ಕೆಎ 41 ಡಿ 0639) ಹೊರಟಿತ್ತು. ಚಾಲಕ, ನಿರ್ಲಕ್ಷ್ಯ ಹಾಗೂ ಅತೀ ವೇಗದಲ್ಲಿ ಕ್ಯಾಂಟರ್ ಚಲಾಯಿಸಿದ್ದ. ಇದರಿಂದಾಗಿ ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದಿತ್ತು.’</p>.<p>‘ದ್ವಿಚಕ್ರ ವಾಹನ ಸಮೇತ ಉರುಳಿಬಿದ್ದಿದ್ದ ಮಂಜಮ್ಮ ಅವರ ತಲೆ ಮೇಲೆಯೇ ಕ್ಯಾಂಟರ್ ಚಕ್ರ ಹರಿದಿತ್ತು. ತೀವ್ರ ಗಾಯಗೊಂಡು ಮಂಜಮ್ಮ ಮೃತಪಟ್ಟಿದ್ದಾರೆ. ಸಾವಿಗೆ ಕಾರಣವಾದ ಆರೋಪದಡಿ ಕ್ಯಾಂಟರ್ ಚಾಲಕನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉತ್ತರಹಳ್ಳಿ ಮುಖ್ಯರಸ್ತೆ ಬಳಿ ಶನಿವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಚಕ್ರ ತಲೆ ಮೇಲೆ ಹರಿದು ಮಂಜಮ್ಮ (40) ಅವರು ಮೃತಪಟ್ಟಿದ್ದಾರೆ.</p>.<p>‘ಎಚ್. ಗೊಲ್ಲಹಳ್ಳಿ ನಿವಾಸಿ ಮಂಜಮ್ಮ, ಟೈಲರ್ ಆಗಿದ್ದರು. ಕೆಲಸ ನಿಮಿತ್ತ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಕೆಂಗೇರಿ ಸಂಚಾರ ಠಾಣೆ ಪೊಲೀಸರು ಹೇಳಿದರು.</p>.<p>‘ಮಂಜಮ್ಮ ಅವರು ಉತ್ತರಹಳ್ಳಿ ಕಡೆಯಿಂದ ಕೆಂಗೇರಿ ಕಡೆಗೆ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಕ್ಯಾಂಟರ್ (ಕೆಎ 41 ಡಿ 0639) ಹೊರಟಿತ್ತು. ಚಾಲಕ, ನಿರ್ಲಕ್ಷ್ಯ ಹಾಗೂ ಅತೀ ವೇಗದಲ್ಲಿ ಕ್ಯಾಂಟರ್ ಚಲಾಯಿಸಿದ್ದ. ಇದರಿಂದಾಗಿ ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದಿತ್ತು.’</p>.<p>‘ದ್ವಿಚಕ್ರ ವಾಹನ ಸಮೇತ ಉರುಳಿಬಿದ್ದಿದ್ದ ಮಂಜಮ್ಮ ಅವರ ತಲೆ ಮೇಲೆಯೇ ಕ್ಯಾಂಟರ್ ಚಕ್ರ ಹರಿದಿತ್ತು. ತೀವ್ರ ಗಾಯಗೊಂಡು ಮಂಜಮ್ಮ ಮೃತಪಟ್ಟಿದ್ದಾರೆ. ಸಾವಿಗೆ ಕಾರಣವಾದ ಆರೋಪದಡಿ ಕ್ಯಾಂಟರ್ ಚಾಲಕನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>