<p><strong>ಮೈಸೂರು</strong>: ಸರೋದ್ ವಾದಕ ಪಂಡಿತ್ ರಾಜೀವ ತಾರನಾಥ ಅವರು ಇಲ್ಲಿನ ಕುವೆಂಪುನಗರದ ನಿವಾಸದಲ್ಲಿ ಕುಸಿದು ಬಿದ್ದು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.</p>.<p>‘23 ದಿನಗಳ ಹಿಂದೆ ಬಿದ್ದ ಅವರ ತೊಡೆ ಮೂಳೆ ಮುರಿದಿತ್ತು. ವೈದ್ಯ ಪ್ರಶಾಂತ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ’ ಎಂದು ಅವರ ಆಪ್ತ, ಲೇಖಕ ಟಿ.ಎಸ್.ವೇಣುಗೋಪಾಲ್ ‘ಪ್ರಜಾವಾಣಿ’ಗೆ ಶುಕ್ರವಾರ ತಿಳಿಸಿದರು.</p>.<p>‘ಎರಡು ದಿನದ ಹಿಂದೆ ಮೂತ್ರಕೋಶದ ಸೋಂಕು ಉಂಟಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರು ಈಗ ನಿತ್ಯ ಭೇಟಿಯಾಗುವ ಸಂಗೀತಗಾರರು ಹಾಗೂ ಲೇಖಕರೊಂದಿಗೆ ಮಾತನಾಡುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಗುರುವಾರವಷ್ಟೇ ಪಂಡಿತ್ ವೆಂಕಟೇಶ್ ಕುಮಾರ್ ಬಂದಿದ್ದರು. ಅವರಿಂದ ಹಾಡಿಸಿ, ತಾವೂ ಹಾಡಿದರು. 93 ವರ್ಷವಾದ್ದರಿಂದ ಚೇತರಿಕೆ ನಿಧಾನವಾಗಿದೆ. ಇನ್ನೂ ಒಂದು ವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಬಿಡುಗಡೆ ಬಗ್ಗೆ ವೈದ್ಯರೇನೂ ಹೇಳಿಲ್ಲ’ ಎಂದರು. </p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಬೇಕಿತ್ತು. ಶನಿವಾರ ಬರುವೆನೆಂದು ಹೇಳಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಸರೋದ್ ವಾದಕ ಪಂಡಿತ್ ರಾಜೀವ ತಾರನಾಥ ಅವರು ಇಲ್ಲಿನ ಕುವೆಂಪುನಗರದ ನಿವಾಸದಲ್ಲಿ ಕುಸಿದು ಬಿದ್ದು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.</p>.<p>‘23 ದಿನಗಳ ಹಿಂದೆ ಬಿದ್ದ ಅವರ ತೊಡೆ ಮೂಳೆ ಮುರಿದಿತ್ತು. ವೈದ್ಯ ಪ್ರಶಾಂತ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ’ ಎಂದು ಅವರ ಆಪ್ತ, ಲೇಖಕ ಟಿ.ಎಸ್.ವೇಣುಗೋಪಾಲ್ ‘ಪ್ರಜಾವಾಣಿ’ಗೆ ಶುಕ್ರವಾರ ತಿಳಿಸಿದರು.</p>.<p>‘ಎರಡು ದಿನದ ಹಿಂದೆ ಮೂತ್ರಕೋಶದ ಸೋಂಕು ಉಂಟಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರು ಈಗ ನಿತ್ಯ ಭೇಟಿಯಾಗುವ ಸಂಗೀತಗಾರರು ಹಾಗೂ ಲೇಖಕರೊಂದಿಗೆ ಮಾತನಾಡುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಗುರುವಾರವಷ್ಟೇ ಪಂಡಿತ್ ವೆಂಕಟೇಶ್ ಕುಮಾರ್ ಬಂದಿದ್ದರು. ಅವರಿಂದ ಹಾಡಿಸಿ, ತಾವೂ ಹಾಡಿದರು. 93 ವರ್ಷವಾದ್ದರಿಂದ ಚೇತರಿಕೆ ನಿಧಾನವಾಗಿದೆ. ಇನ್ನೂ ಒಂದು ವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಬಿಡುಗಡೆ ಬಗ್ಗೆ ವೈದ್ಯರೇನೂ ಹೇಳಿಲ್ಲ’ ಎಂದರು. </p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಬೇಕಿತ್ತು. ಶನಿವಾರ ಬರುವೆನೆಂದು ಹೇಳಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>