<p>ಯುಗಾದಿ ಹಬ್ಬದ ಸಂಭ್ರಮದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರು ಸಿನಿ ಪ್ರಿಯರಿಗೆ ಸಿಹಿಸುದ್ದಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.</p>.‘ಆಕಾಶ್‘ ಚಿತ್ರದ ನೆನಪುಗಳನ್ನು ಹಂಚಿಕೊಂಡ ರಮ್ಯಾ : ಅಪ್ಪು ಅಭಿಮಾನಿಗಳ ಮೆಚ್ಚುಗೆ.<p>ಯುಗಾದಿಗೆ ಶುಭಕೋರಿದ ರಿಷಬ್ ಶೆಟ್ಟಿ ಅವರು, ‘ಅಧ್ಯಾಯ ಎರಡು ಇಲ್ಲಿಂದ ಶುರು’ ಎಂದು ನೋಟಿಸ್ ಬೋರ್ಡ್ ಮೇಲೆ ಬರೆದಿರುವ ಪೋಸ್ಟ್ ಹಂಚಿಕೊಂಡಿದ್ದಾರೆ. ಅವರು ನಿರ್ದೇಶಿಸಿ, ನಟಿಸಿರುವ ‘ಕಾಂತಾರ ಅಧ್ಯಾಯ–1’ ಚಿತ್ರದ ಕೊನೆಯಲ್ಲಿ ‘ಅಧ್ಯಾಯ–2’ ಬರಲಿದೆ ಎಂಬ ಸುಳಿವು ನೀಡಲಾಗಿತ್ತು. </p><p>ರಿಷಬ್ ಅವರು ಹಂಚಿಕೊಂಡ ಪೋಸ್ಟ್ಗೆ ಅಭಿಮಾನಿಗಳು ‘ಕಾಂತಾರ ಅಧ್ಯಾಯ–2’ ಅಥವಾ ‘ಸ.ಹಿ.ಪ್ರಾ.ಶಾಲೆ’ ಇರಬಹುದುದೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p><p>‘ಕಾಂತಾರ’ ಭಕ್ತಿಪ್ರಧಾನ ಕಥೆಯನ್ನು ಹೊಂದಿದ್ದರೆ, ‘ಕಾಂತಾರ ಅಧ್ಯಾಯ–1’ ಕಾಡಿನಂಚಿನ ಬುಡಕಟ್ಟು ಜನರು ಮತ್ತು ಉಳ್ಳವರು, ಅಧಿಕಾರಿಗಳ ನಡುವಿನ ದೈವ ಸಂಘರ್ಷ ಚಿತ್ರಜಗತ್ತಿನಲ್ಲೊಂದು ಹೊಸ ಲೋಕವನ್ನು ತೆರೆದಿಟ್ಟಿತ್ತು. ಈ ಚಿತ್ರಗಳನ್ನು ಹೊಂಬಾಳೆ ಫಿಲ್ಸ್ಮ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗಿತ್ತು.</p><p>ಆದರೆ, ಮುಂಬರುವ ‘ಅಧ್ಯಾಯ–2’ ಅನ್ನು ರಿಷಬ್ ಶೆಟ್ಟಿ ತಮ್ಮ ಬ್ಯಾನರ್ ಅಡಿಯಲ್ಲಿ ನಿರ್ಮಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯುಗಾದಿ ಹಬ್ಬದ ಸಂಭ್ರಮದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರು ಸಿನಿ ಪ್ರಿಯರಿಗೆ ಸಿಹಿಸುದ್ದಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.</p>.‘ಆಕಾಶ್‘ ಚಿತ್ರದ ನೆನಪುಗಳನ್ನು ಹಂಚಿಕೊಂಡ ರಮ್ಯಾ : ಅಪ್ಪು ಅಭಿಮಾನಿಗಳ ಮೆಚ್ಚುಗೆ.<p>ಯುಗಾದಿಗೆ ಶುಭಕೋರಿದ ರಿಷಬ್ ಶೆಟ್ಟಿ ಅವರು, ‘ಅಧ್ಯಾಯ ಎರಡು ಇಲ್ಲಿಂದ ಶುರು’ ಎಂದು ನೋಟಿಸ್ ಬೋರ್ಡ್ ಮೇಲೆ ಬರೆದಿರುವ ಪೋಸ್ಟ್ ಹಂಚಿಕೊಂಡಿದ್ದಾರೆ. ಅವರು ನಿರ್ದೇಶಿಸಿ, ನಟಿಸಿರುವ ‘ಕಾಂತಾರ ಅಧ್ಯಾಯ–1’ ಚಿತ್ರದ ಕೊನೆಯಲ್ಲಿ ‘ಅಧ್ಯಾಯ–2’ ಬರಲಿದೆ ಎಂಬ ಸುಳಿವು ನೀಡಲಾಗಿತ್ತು. </p><p>ರಿಷಬ್ ಅವರು ಹಂಚಿಕೊಂಡ ಪೋಸ್ಟ್ಗೆ ಅಭಿಮಾನಿಗಳು ‘ಕಾಂತಾರ ಅಧ್ಯಾಯ–2’ ಅಥವಾ ‘ಸ.ಹಿ.ಪ್ರಾ.ಶಾಲೆ’ ಇರಬಹುದುದೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p><p>‘ಕಾಂತಾರ’ ಭಕ್ತಿಪ್ರಧಾನ ಕಥೆಯನ್ನು ಹೊಂದಿದ್ದರೆ, ‘ಕಾಂತಾರ ಅಧ್ಯಾಯ–1’ ಕಾಡಿನಂಚಿನ ಬುಡಕಟ್ಟು ಜನರು ಮತ್ತು ಉಳ್ಳವರು, ಅಧಿಕಾರಿಗಳ ನಡುವಿನ ದೈವ ಸಂಘರ್ಷ ಚಿತ್ರಜಗತ್ತಿನಲ್ಲೊಂದು ಹೊಸ ಲೋಕವನ್ನು ತೆರೆದಿಟ್ಟಿತ್ತು. ಈ ಚಿತ್ರಗಳನ್ನು ಹೊಂಬಾಳೆ ಫಿಲ್ಸ್ಮ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗಿತ್ತು.</p><p>ಆದರೆ, ಮುಂಬರುವ ‘ಅಧ್ಯಾಯ–2’ ಅನ್ನು ರಿಷಬ್ ಶೆಟ್ಟಿ ತಮ್ಮ ಬ್ಯಾನರ್ ಅಡಿಯಲ್ಲಿ ನಿರ್ಮಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>