<p><strong>ಪಟ್ನಾ:</strong> ಬಿಹಾರದಲ್ಲಿ 24 ಗಂಟೆಯಲ್ಲಿ ಸಿಡಿಲು ಬಡಿದು 21 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. </p><p>ಮಧುಬನಿ ಜಿಲ್ಲೆಯಲ್ಲಿ ಅತಿ ಹೆಚ್ಚು ಆರು ಮಂದಿ ಮೃತಪಟ್ಟಿದ್ದಾರೆ. ಔರಂಗಾಬಾದ್ನಲ್ಲಿ ನಾಲ್ಕು, ಪಟ್ನಾದಲ್ಲಿ ಎರಡು ಮತ್ತು ರೋಹತಾಸ್, ಭೋಜ್ಪುರ, ಕೈಮೂರ್, ಸರನ್, ಜೆಹಾನಾಬಾದ್, ಗೋಪಾಲ್ಗಂಜ್, ಸುಪೌಲ್, ಲಖಿಸರಾಯ್ ಮತ್ತು ಮಾಧೇಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. </p><p>ಘಟನೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಸಿಡಿಲು ಬಡಿದು ಮೃತಪಟ್ಟವರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ. </p><p>ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆಯೂ, ವಿಪತ್ತು ನಿರ್ವಹಣಾ ಪಡೆ ನೀಡುವ ಸೂಚನೆಗಳನ್ನು ಪಾಲಿಸುವಂತೆಯೂ ಜನರಿಗೆ ಸಿಎಂ ಮನವಿ ಮಾಡಿದ್ದಾರೆ. </p><p>ಬಿಹಾರದಲ್ಲಿ ಕಳೆದ ಕೆಲವು ವಾರಗಳಿಂದ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುತ್ತಿದೆ. ಈ ತಿಂಗಳಾರಂಭದಿಂದ ಈವರೆಗೆ ಸಿಡಿಲು ಬಡಿದು ಸುಮಾರು 70 ಮಂದಿ ಮೃತಪಟ್ಟಿದ್ದಾರೆ. </p>.ನೇಪಾಳ: 12ರಂದು ಪ್ರಚಂಡ ವಿಶ್ವಾಸಮತ ಯಾಚನೆ.ನೇಪಾಳದಲ್ಲಿ ಭೂಕುಸಿತ: ಏಳು ಭಾರತೀಯರು ಸೇರಿ 65 ಜನ ನಾಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರದಲ್ಲಿ 24 ಗಂಟೆಯಲ್ಲಿ ಸಿಡಿಲು ಬಡಿದು 21 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. </p><p>ಮಧುಬನಿ ಜಿಲ್ಲೆಯಲ್ಲಿ ಅತಿ ಹೆಚ್ಚು ಆರು ಮಂದಿ ಮೃತಪಟ್ಟಿದ್ದಾರೆ. ಔರಂಗಾಬಾದ್ನಲ್ಲಿ ನಾಲ್ಕು, ಪಟ್ನಾದಲ್ಲಿ ಎರಡು ಮತ್ತು ರೋಹತಾಸ್, ಭೋಜ್ಪುರ, ಕೈಮೂರ್, ಸರನ್, ಜೆಹಾನಾಬಾದ್, ಗೋಪಾಲ್ಗಂಜ್, ಸುಪೌಲ್, ಲಖಿಸರಾಯ್ ಮತ್ತು ಮಾಧೇಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. </p><p>ಘಟನೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಸಿಡಿಲು ಬಡಿದು ಮೃತಪಟ್ಟವರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ. </p><p>ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆಯೂ, ವಿಪತ್ತು ನಿರ್ವಹಣಾ ಪಡೆ ನೀಡುವ ಸೂಚನೆಗಳನ್ನು ಪಾಲಿಸುವಂತೆಯೂ ಜನರಿಗೆ ಸಿಎಂ ಮನವಿ ಮಾಡಿದ್ದಾರೆ. </p><p>ಬಿಹಾರದಲ್ಲಿ ಕಳೆದ ಕೆಲವು ವಾರಗಳಿಂದ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುತ್ತಿದೆ. ಈ ತಿಂಗಳಾರಂಭದಿಂದ ಈವರೆಗೆ ಸಿಡಿಲು ಬಡಿದು ಸುಮಾರು 70 ಮಂದಿ ಮೃತಪಟ್ಟಿದ್ದಾರೆ. </p>.ನೇಪಾಳ: 12ರಂದು ಪ್ರಚಂಡ ವಿಶ್ವಾಸಮತ ಯಾಚನೆ.ನೇಪಾಳದಲ್ಲಿ ಭೂಕುಸಿತ: ಏಳು ಭಾರತೀಯರು ಸೇರಿ 65 ಜನ ನಾಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>