ಮತದಾನ ಪ್ರಮಾಣ ಬಿಡುಗಡೆ ಸಂಬಂಧ ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿರುವ ಬೆನ್ನಲ್ಲೇ ‘ಇಂಡಿಯಾ’ ಕೂಟದ ವಿವಿಧ ಮುಖಂಡರು ಶುಕ್ರವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಿದರು. ಲೋಕಸಭಾ ಚುನಾವಣೆಯ ಎರಡು ಹಂತಗಳ ಮತದಾನ ಪ್ರಮಾಣ ಬಿಡುಗಡೆ ಮತ್ತು ಬಿಜೆಪಿ ನಾಯಕರ ವಿರುದ್ಧದ ನೀತಿ ಸಂಹಿತೆ ಉಲ್ಲಂಘನೆಯ ಆರೋಪಗಳ ಬಗ್ಗೆ ಮುಖಂಡರು ಆಯೋಗದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು ಎನ್ನಲಾಗಿದೆ.