ಕಾನ್ಕೇರ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ್ದ ಕಚ್ಚಾ ಬಾಂಬ್ ಸ್ಫೋಟದಿಂದ ಗಾಯಗೊಂಡಿದ್ದ ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್ಎಫ್ ಯೋಧ ಮಂಗಳವಾರ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಮಂಗಳವಾರ ಸುಕ್ಮಾ ಜಿಲ್ಲೆಯ ಬಂಡಾ, ಮಿನ್ಪ ಹಾಗೂ ಲಕಹ್ಪಾಲ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾನ್ಕೇರ್ ಜಿಲ್ಲೆಯ ಛೊಟ್ಟೆ ಪಖಂಜುರ್ ಹಾಗೂ ಛೊಟ್ಟೆಬೆಟಿಯ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ.
ಬಿಎಸ್ಎಫ್ನ ಜಂಟಿ ಪಡೆ ಹಾಗೂ ರಾಜ್ಯ ಪೊಲೀಸ್ನ ಜಿಲ್ಲಾ ಮೀಸಲು ಪಡೆಯ ಕಾರ್ಯಾಚರಣೆಯಲ್ಲಿ ನಕ್ಸಲರಿಗೆ ಸೇರಿದ ಒಂದು ಎಕೆ–47 ರೈಫಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಗುಂಡಿನ ಚಕಮಕಿಯಲ್ಲಿ ಕೆಲವು ನಕ್ಸಲರು ಸಾವಿಗೀಡಾಗಿರಬಹುದು ಅಥವಾ ಗಾಯಗೊಂಡಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.