<p><strong>ಗುವಾಹಟಿ/ಇಂಫಾಲ್:</strong> ಸಂಘರ್ಷ ಪೀಡಿತ ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ನಡೆದ ಮೂರು ಪ್ರತ್ಯೇಕ ಘಟನೆಗಳಲ್ಲಿ ತಂದೆ– ಮಗ ಸೇರಿದಂತೆ ಐವರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.</p><p>ಮೈತೇಯಿ ಸಮುದಾಯ ಪ್ರಾಬಲ್ಯ ವಿರುವ ಬಿಷ್ಣುಪುರ ಜಿಲ್ಲೆಯ ನಿಂಗ್ತೌಖೋಂಗ್ ಖಖುನೌ ಗ್ರಾಮದ ಮೇಲೆ ಸಂಜೆ 4.30ರ ಸುಮಾರಿಗೆ ದಾಳಿ ನಡೆಸಿದ ಶಂಕಿತ ಉಗ್ರರು, ತಂದೆ– ಮಗ ಸೇರಿ ಮೂವರನ್ನು ಕೊಂದಿದ್ದಾರೆ. ಈ ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಮೃತರನ್ನು ಓಯಿನಮ್ ಬಮೊಯಿಜಾವೊ (61), ಅವರ ಗಮನ ಓಯಿನಮ್ ಮಣಿತೊಂಬಾ ಮತ್ತು ಅವರ ನೆರೆ ಮನೆಯ ಥಿಯಮ್ ಸೋಮನ್ ಎಂದು ಗ್ರಾಮಸ್ಥರು ಗುರುತಿಸಿದ್ದಾರೆ. ಈ ಮೂವರು ಮೈತೇಯಿ ಸಮುದಾಯಕ್ಕೆ ಸೇರಿದವರು. ಈ ಗ್ರಾಮವು ಕುಕಿ ಸಮುದಾಯದವರು ಪ್ರಾಬಲ್ಯವಿರುವ ಚುರಚಂದಪುರ ಜಿಲ್ಲೆಗೆ ಹೊಂದಿಕೊಂಡಿದೆ. </p><p>ಸ್ವಯಂ ಸೇವಕ ಸಾವು: ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗ್ರಾಮ ಸ್ವಯಂ ಸೇವಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮೈತೇಯಿ ಸಮುದಾಯದ ಟಿ. ಮನೋರಂಜನ್ (26) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>ಸಮೀಪದ ಗುಡ್ಡಗಾಡು ಪ್ರದೇಶ<br>ಗಳಿಂದ ಬಂದಿದ್ದ ಶಂಕಿತ ಉಗ್ರರು ಬುಧವಾರ ರಾತ್ರಿ ಕಾಂಗ್ಚುಪ್ ಪ್ರದೇಶದ ಮೇಲೆ ದಾಳಿ ನಡೆಸಿದರು. ಅದಕ್ಕೆ ಎದುರಾಗಿ ಗ್ರಾಮ ಸ್ವಯಂ ಸೇವಕರು ಪ್ರತಿದಾಳಿ ನಡೆಸಿದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ. </p><p>ಪ್ರತಿಭಟನೆ: ಇದರ ಬೆನ್ನಲ್ಲೇ, ಭಾರಿ ಸಂಖ್ಯೆಯಲ್ಲಿ ಮಹಿಳೆಯರಿದ್ದ ಗುಂಪು ಇಂಫಾಲ್ನಲ್ಲಿ ರ್ಯಾಲಿ ನಡೆಸಿ ಹಿಂಸಾಚಾರವನ್ನು ಖಂಡಿಸಿದೆ. ಪ್ರತಿಭಟನಕಾರರ ಮೆರವಣಿಗೆಯು ರಾಜಭವನದ ಕಡೆಗೆ ಸಾಗುತ್ತಿದ್ದಾಗ, ಭದ್ರತಾ ಸಿಬ್ಬಂದಿ ಅವರನ್ನು ತಡೆದರು. ಈ ವೇಳೆ ಪ್ರತಿಭಟನಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಆಗ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಸಿಡಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p><strong>ಬಿಎಸ್ಎಫ್ನ ಮೂವರಿಗೆ ಗುಂಡೇಟು</strong></p><p>ಮಣಿಪುರದ ಥೌಬಲ್ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಬಂದೂಕುಧಾರಿಗಳು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಬಿಎಸ್ಎಫ್ನ ಮೂವರು ಸಿಬ್ಬಂದಿಗೆ ಗುಂಡು ತಾಗಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p><p>ಥೌಬಲ್ ಪೊಲೀಸ್ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಿದ ಗುಂಪಿನಲ್ಲಿದ್ದ ಬಂದೂಕುಧಾರಿಗಳು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ಮೊದಲಿಗೆ ಈ ಗುಂಪು ಥೌಬಲ್ ಜಿಲ್ಲೆಯ<br>ಖಂಗಾಬೊಕ್ನಲ್ಲಿರುವ ಭಾರತೀಯ ಮೀಸಲು ಪಡೆಯ ಮೂರನೇ ಬೆಟಾಲಿಯನ್ ಅನ್ನು ಗುರಿಯಾಗಿಸಿತ್ತು. ಅಲ್ಲಿ ಭದ್ರತಾ ಪಡೆಗಳು ಈ ಗುಂಪನ್ನು ಹಿಮ್ಮೆಟ್ಟಿಸಿತ್ತು. ಬಳಿಕ ಈ ಗುಂಪು ಪೊಲೀಸ್ ಪ್ರಧಾನ ಕಚೇರಿಯತ್ತ ಸಾಗಿತು. ಇದರಲ್ಲಿದ್ದ ಬಂದೂಕುಧಾರಿಗಳು ಅಲ್ಲಿ ಗುಂಡು ಹಾರಿಸಿದರು ಎಂದು ಅವರು ಹೇಳಿದ್ದಾರೆ.</p><p>ಗಾಯಗೊಂಡ ಬಿಎಸ್ಎಫ್ ಸಿಬ್ಬಂದಿಯನ್ನು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಘಟನೆಯ ಬಳಿಕ ಥೌಬಲ್ನಲ್ಲಿ ಜಿಲ್ಲಾಡಳಿತ ಕರ್ಫ್ಯೂ ಜಾರಿಗೊಳಿಸಿದೆ.</p><p>ಮೊರೆ ಎಂಬಲ್ಲಿ ಬುಧವಾರ ಶಸ್ತ್ರಸಜ್ಜಿತ ಬಂಡುಕೋರರು ನಡೆಸಿದ ದಾಳಿಯಲ್ಲಿ ಮಣಿಪುರ ಪೊಲೀಸ್ ಕಮಾಂಡೊದ ಇಬ್ಬರು ಮೃತಪಟ್ಟಿದ್ದರು. ಮತ್ತಿಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದರು. ಅದರ ಬೆನ್ನಲ್ಲೇ ತೌಬಲ್ನಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ/ಇಂಫಾಲ್:</strong> ಸಂಘರ್ಷ ಪೀಡಿತ ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ನಡೆದ ಮೂರು ಪ್ರತ್ಯೇಕ ಘಟನೆಗಳಲ್ಲಿ ತಂದೆ– ಮಗ ಸೇರಿದಂತೆ ಐವರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.</p><p>ಮೈತೇಯಿ ಸಮುದಾಯ ಪ್ರಾಬಲ್ಯ ವಿರುವ ಬಿಷ್ಣುಪುರ ಜಿಲ್ಲೆಯ ನಿಂಗ್ತೌಖೋಂಗ್ ಖಖುನೌ ಗ್ರಾಮದ ಮೇಲೆ ಸಂಜೆ 4.30ರ ಸುಮಾರಿಗೆ ದಾಳಿ ನಡೆಸಿದ ಶಂಕಿತ ಉಗ್ರರು, ತಂದೆ– ಮಗ ಸೇರಿ ಮೂವರನ್ನು ಕೊಂದಿದ್ದಾರೆ. ಈ ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಮೃತರನ್ನು ಓಯಿನಮ್ ಬಮೊಯಿಜಾವೊ (61), ಅವರ ಗಮನ ಓಯಿನಮ್ ಮಣಿತೊಂಬಾ ಮತ್ತು ಅವರ ನೆರೆ ಮನೆಯ ಥಿಯಮ್ ಸೋಮನ್ ಎಂದು ಗ್ರಾಮಸ್ಥರು ಗುರುತಿಸಿದ್ದಾರೆ. ಈ ಮೂವರು ಮೈತೇಯಿ ಸಮುದಾಯಕ್ಕೆ ಸೇರಿದವರು. ಈ ಗ್ರಾಮವು ಕುಕಿ ಸಮುದಾಯದವರು ಪ್ರಾಬಲ್ಯವಿರುವ ಚುರಚಂದಪುರ ಜಿಲ್ಲೆಗೆ ಹೊಂದಿಕೊಂಡಿದೆ. </p><p>ಸ್ವಯಂ ಸೇವಕ ಸಾವು: ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗ್ರಾಮ ಸ್ವಯಂ ಸೇವಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮೈತೇಯಿ ಸಮುದಾಯದ ಟಿ. ಮನೋರಂಜನ್ (26) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>ಸಮೀಪದ ಗುಡ್ಡಗಾಡು ಪ್ರದೇಶ<br>ಗಳಿಂದ ಬಂದಿದ್ದ ಶಂಕಿತ ಉಗ್ರರು ಬುಧವಾರ ರಾತ್ರಿ ಕಾಂಗ್ಚುಪ್ ಪ್ರದೇಶದ ಮೇಲೆ ದಾಳಿ ನಡೆಸಿದರು. ಅದಕ್ಕೆ ಎದುರಾಗಿ ಗ್ರಾಮ ಸ್ವಯಂ ಸೇವಕರು ಪ್ರತಿದಾಳಿ ನಡೆಸಿದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ. </p><p>ಪ್ರತಿಭಟನೆ: ಇದರ ಬೆನ್ನಲ್ಲೇ, ಭಾರಿ ಸಂಖ್ಯೆಯಲ್ಲಿ ಮಹಿಳೆಯರಿದ್ದ ಗುಂಪು ಇಂಫಾಲ್ನಲ್ಲಿ ರ್ಯಾಲಿ ನಡೆಸಿ ಹಿಂಸಾಚಾರವನ್ನು ಖಂಡಿಸಿದೆ. ಪ್ರತಿಭಟನಕಾರರ ಮೆರವಣಿಗೆಯು ರಾಜಭವನದ ಕಡೆಗೆ ಸಾಗುತ್ತಿದ್ದಾಗ, ಭದ್ರತಾ ಸಿಬ್ಬಂದಿ ಅವರನ್ನು ತಡೆದರು. ಈ ವೇಳೆ ಪ್ರತಿಭಟನಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಆಗ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಸಿಡಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p><strong>ಬಿಎಸ್ಎಫ್ನ ಮೂವರಿಗೆ ಗುಂಡೇಟು</strong></p><p>ಮಣಿಪುರದ ಥೌಬಲ್ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಬಂದೂಕುಧಾರಿಗಳು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಬಿಎಸ್ಎಫ್ನ ಮೂವರು ಸಿಬ್ಬಂದಿಗೆ ಗುಂಡು ತಾಗಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p><p>ಥೌಬಲ್ ಪೊಲೀಸ್ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಿದ ಗುಂಪಿನಲ್ಲಿದ್ದ ಬಂದೂಕುಧಾರಿಗಳು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ಮೊದಲಿಗೆ ಈ ಗುಂಪು ಥೌಬಲ್ ಜಿಲ್ಲೆಯ<br>ಖಂಗಾಬೊಕ್ನಲ್ಲಿರುವ ಭಾರತೀಯ ಮೀಸಲು ಪಡೆಯ ಮೂರನೇ ಬೆಟಾಲಿಯನ್ ಅನ್ನು ಗುರಿಯಾಗಿಸಿತ್ತು. ಅಲ್ಲಿ ಭದ್ರತಾ ಪಡೆಗಳು ಈ ಗುಂಪನ್ನು ಹಿಮ್ಮೆಟ್ಟಿಸಿತ್ತು. ಬಳಿಕ ಈ ಗುಂಪು ಪೊಲೀಸ್ ಪ್ರಧಾನ ಕಚೇರಿಯತ್ತ ಸಾಗಿತು. ಇದರಲ್ಲಿದ್ದ ಬಂದೂಕುಧಾರಿಗಳು ಅಲ್ಲಿ ಗುಂಡು ಹಾರಿಸಿದರು ಎಂದು ಅವರು ಹೇಳಿದ್ದಾರೆ.</p><p>ಗಾಯಗೊಂಡ ಬಿಎಸ್ಎಫ್ ಸಿಬ್ಬಂದಿಯನ್ನು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಘಟನೆಯ ಬಳಿಕ ಥೌಬಲ್ನಲ್ಲಿ ಜಿಲ್ಲಾಡಳಿತ ಕರ್ಫ್ಯೂ ಜಾರಿಗೊಳಿಸಿದೆ.</p><p>ಮೊರೆ ಎಂಬಲ್ಲಿ ಬುಧವಾರ ಶಸ್ತ್ರಸಜ್ಜಿತ ಬಂಡುಕೋರರು ನಡೆಸಿದ ದಾಳಿಯಲ್ಲಿ ಮಣಿಪುರ ಪೊಲೀಸ್ ಕಮಾಂಡೊದ ಇಬ್ಬರು ಮೃತಪಟ್ಟಿದ್ದರು. ಮತ್ತಿಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದರು. ಅದರ ಬೆನ್ನಲ್ಲೇ ತೌಬಲ್ನಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>