ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Lok Sabha Elections Live |ಬಹುತೇಕ ಶಾಂತಿಯುತವಾಗಿ ಕೊನೆಗೊಂಡ 4ನೇ ಹಂತ; ಶೇ 62.8ರಷ್ಟು ಮತದಾನ

Published 13 ಮೇ 2024, 2:12 IST
Last Updated 13 ಮೇ 2024, 16:04 IST
ಅಕ್ಷರ ಗಾತ್ರ
02:0813 May 2024

ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತದಾನ

ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಮ್ಮ ಪತ್ನಿಯೊಂದಿಗೆ ಮತ ಚಲಾಯಿಸಿದರು.

10 ರಾಜ್ಯಗಳ 96 ಕ್ಷೇತ್ರಗಳಿಗೆ ಮತದಾನ ಆರಂಭ

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಆರಂಭವಾಗಿದ್ದು, 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಮತ್ತು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್ ಸೇರಿದಂತೆ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ.

ಆಂಧ್ರಪ್ರದೇಶ (25) ಮತ್ತು  ತೆಲಂಗಾಣದ (17) ಎಲ್ಲ ಕ್ಷೇತ್ರಗಳಲ್ಲದೆ ಉತ್ತರ ಪ್ರದೇಶದ 13, ಮಹಾರಾಷ್ಟ್ರದ 11, ಮಧ್ಯಪ್ರದೇಶ, ಪಶ್ಚಿಮ ಬಂಗಾಳದ ತಲಾ ಎಂಟು, ಬಿಹಾರದ ಐದು, ಜಮ್ಮು ಮತ್ತು ಕಾಶ್ಮೀರದ ಒಂದು, ಒಡಿಶಾ ಮತ್ತು ಜಾರ್ಖಂಡ್‌ನ ತಲಾ ನಾಲ್ಕು ಕ್ಷೇತ್ರ ಗಳಲ್ಲಿ ಮತದಾನಕ್ಕೆ ವೇದಿಕೆ ಸಜ್ಜಾಗಿದೆ. 

02:1713 May 2024

ನಟ ಅಲ್ಲು ಅರ್ಜುನ್ ಮತ ಚಲಾವಣೆ

ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿ ನಟ ಅಲ್ಲು ಅರ್ಜುನ್ ಅವರು ತಮ್ಮ ಹಕ್ಕನ್ನು ಚಲಾಯಿಸಿದರು.

ಎಲ್ಲರೂ ಮತ ಚಲಾಯಿಸಿ. ದೇಶದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಅದು. ಮುಂದಿನ ಐದು ವರ್ಷಕ್ಕೆ ಇದು ಪ್ರಮುಖ ದಿನ. ನಾನು ರಾಜಕೀಯವಾಗಿ ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ
ಅಲ್ಲು ಅರ್ಜುನ್, ನಟ

ಆಂಧ್ರಪ್ರದೇಶದ 175, ಒಡಿಶಾದ 28 ವಿಧಾನಸಭಾ ಕ್ಷೇತ್ರಗಲ್ಲಿಯೂ ಇಂದೇ ಮತದಾನ

ಆಂಧ್ರಪ್ರದೇಶದ 175 ಹಾಗೂ ಒಡಿಶಾದ 28 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಜನ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಆಂಧ್ರಪ್ರದೇಶದ ಹಲವು ಕಡೆ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮತದಾನದ ಮೇಲೆ ಪರಿಣಾಮ ಬೀರಬಹುದು.

02:3013 May 2024

ಜಮ್ಮು ಕಾಶ್ಮೀರದಲ್ಲಿ ಮತದಾನಕ್ಕೆ ಬಿಗಿ ಭದ್ರತೆ

4ನೇ ಹಂತದಲ್ಲಿ ಜಮ್ಮು ಮತ್ತು ಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಪ್ರತಿ ಬೂತ್‌ನಲ್ಲಿ ಬಿಗಿ ಭಧ್ರತೆ ಕಲ್ಪಿಸಲಾಗಿದೆ. ಪುಲ್ವಾಮ, ಬುದ್ಗಾವ್‌ನಲ್ಲಿ ಮತದಾನ ನಡೆಯುತ್ತಿದ್ದು, ಭದ್ರತಾ ಪಡೆಗಳು ಬಿಗಿ ಬಂದೊಬಸ್ತ್ ಕಲ್ಪಿಸಿವೆ.

02:4413 May 2024

ಸಿನಿಮಾ ತಾರೆಯರಿಂದ, ರಾಜಕೀಯ ನಾಯಕರಿಂದ ಮತದಾನ

ಸಿನಿಮಾ ತಾರೆಯರು, ರಾಜಕೀಯ ನಾಯಕರು ಬೆಳಿಗ್ಗೆಯೇ ಮತ ಚಲಾಯಿಸಿದರು. ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್‌ನಲ್ಲಿ ನಟರಾದ ಜ್ಯೂ. ಎನ್‌ಟಿಆರ್, ಅಲ್ಲು ಅರ್ಜುನ್, ಚಿರಂಜೀವಿ ಹಕ್ಕು ಚಲಾಯಿಸಿದರು.

ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ ಬಿಹಾರದ ಲಕಿಸರಾಯ್‌, ಆಂಧ್ರ‍ಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್‌ಮೋಹನ್ ರೆಡ್ಡಿ ಕಡಪದ ಜಯಮಹಲ್ ಅಂಗನವಾಡಿಯಲ್ಲಿ, ಆಂಧ್ರ ‍ಮಾಜಿ ಸಿಎಂ ಚಂದ್ರಬಾಬು ನಾಯ್ಡು ಗುಂಟೂರು, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಹೈದರಾಬಾದ್‌ನಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮತದಾನ

ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮತದಾನ

–ಪಿಟಿಐ ಚಿತ್ರ

02:5913 May 2024

ಕರ್ತವ್ಯ ನಿರ್ವಹಿಸೋಣ: ಪ್ರಧಾನಿ ಮೋದಿ ಕರೆ

ನರೇಂದ್ರ ಮೋದಿ
ನರೇಂದ್ರ ಮೋದಿ
ಲೋಕಸಭೆ ಚುನಾವಣೆಯ 4 ನೇ ಹಂತದಲ್ಲಿ, 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಕ್ಷೇತ್ರಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ. ಯುವ ಮತದಾರರು ಹಾಗೂ ಮಹಿಳಾ ಮತದಾರರು ಮತ ‍ಪ್ರಮಾಣ ಏರಿಕೆಗೆ ಶಕ್ತಿ ತುಂಬಲಿದ್ದಾರೆ ಎಂದು ನನಗೆ ಖಾತ್ರಿಯಿದೆ. ಬನ್ನಿ, ನಾವೆಲ್ಲರೂ ನಮ್ಮ ಕರ್ತವ್ಯವನ್ನು ಮಾಡೋಣ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸೋಣ
ನರೇಂದ್ರ ಮೋದಿ, ಪ್ರಧಾನಿ
03:0513 May 2024

ಆಂಧ್ರಪ್ರದೇಶ ರಾಜ್ಯಪಾಲ ಅಬ್ದುಲ್ ನಜೀರ್ ಮತದಾನ

ಆಂಧ್ರಪ್ರದೇಶ ರಾಜ್ಯಪಾಲ ಅಬ್ದುಲ್ ನಜೀರ್, ಪತ್ನಿ ಸಮೀರಾ ನಜೀರ್‌ ವಿಜಯವಾಡದಲ್ಲಿ ಮತದಾನ ಮಾಡಿದರು

ಆಂಧ್ರಪ್ರದೇಶ ರಾಜ್ಯಪಾಲ ಅಬ್ದುಲ್ ನಜೀರ್, ಪತ್ನಿ ಸಮೀರಾ ನಜೀರ್‌ ವಿಜಯವಾಡದಲ್ಲಿ ಮತದಾನ ಮಾಡಿದರು

– ಚಿತ್ರ: ಎಕ್ಸ್‌

ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ: ಅಧೀರ್‌ ರಂಜನ್ ಚೌಧರಿ

ಅಧೀರ್ ರಂಜನ್ ಚೌಧರಿ

ಅಧೀರ್ ರಂಜನ್ ಚೌಧರಿ

–ಪಿಟಿಐ ಚಿತ್ರ

ನಾವು ಗೆಲ್ಲುವುದದಲ್ಲಿ ಯಾವುದೇ ಸಂದೇಹವಿಲ್ಲ. ಈ ಬಗ್ಗೆ ನನಗೆ ವಿಶ್ವಾಸವಿದೆ. ಸುಮಾರು 4-5 ಸ್ಥಳಗಳಲ್ಲಿ ಕೆಲವು ಅಹಿತಕರ ಘಟನೆಗಳು ನಡೆದಿವೆ. ನಾನು ಬಿಜೆಪಿ ಮತ್ತು ಟಿಎಂಸಿ ವಿರುದ್ಧ ಸ್ಪರ್ಧಿಸುತ್ತಿದ್ದೇನೆ. ಯಾರೂ ಇಲ್ಲಿಂದ ಟಿಎಂಸಿಯ ಯೂಸುಫ್ ಪಠಾಣ್ ಅವರನ್ನು ಆಯ್ಕೆ ಮಾಡಬಾರದು. ಅದು ನಿಷ್ಪ್ರಯೋಜಕವಾಗಿದೆ.
ಅಧೀರ್ ರಂಜನ್ ಚೌಧರಿ, ಕಾಂಗ್ರೆಸ್ ಸಂಸದ ಹಾಗೂ ಬೆಹ್ರಾಂಪುರ ಅಭ್ಯರ್ಥಿ
03:2913 May 2024

ಆಂಧ್ರಪ್ರದೇಶ | ಅಪಹರಣಕ್ಕೊಳಗಾಗಿದ್ದ ಟಿಡಿಪಿಯಯ ಮತಗಟ್ಟೆ ಏಜೆಂಟರ್‌ ರಕ್ಷಣೆ: ಸಿಇಒ

ಅಮರಾವತಿ (ಆಂಧ್ರಪ್ರದೇಶ): ಚಿತ್ತೂರು ಜಿಲ್ಲೆಯಲ್ಲಿ ಅಪಹರಣಕ್ಕೊಳಗಾಗಿದ್ದ ಟಿಡಿಪಿಯ ಮೂವರು ಮತಗಟ್ಟೆ ಏಜೆಂಟರನ್ನು ಪತ್ತೆ ಹಚ್ಚಿ, ರಕ್ಷಿಸಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮುಖೇಶ್ ಕುಮಾರ್ ಮೀನಾ ಸೋಮವಾರ ತಿಳಿಸಿದ್ದಾರೆ .

04:1413 May 2024

ಮತ ಚಲಾಯಿಸಿದ ಫಾರೂಕ್ ಹಾಗೂ ಒಮರ್ ಅಬ್ದುಲ್ಲಾ

ಶ್ರೀನಗರ: ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹಾಗೂ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಶ್ರೀನಗರದಲ್ಲಿ ಮತ ಚಲಾಯಿಸಿದರು.

ಚುನಾವಣೆಯಲ್ಲಿ ಹಿಂಸಾಚಾರವಿಲ್ಲ. ಎಲ್ಲವೂ ಸುಗಮವಾಗಿದೆ ಎಂದು ಅವರು ಹೇಳುವುದು ಬೇಸರದ ಸಂಗತಿ. ನಮ್ಮ ಪಕ್ಷದ ಕಾರ್ಯಕರ್ತರನ್ನು 2 ದಿನಗಳಿಂದ ಕೂಡಿ ಹಾಕಲಾಗಿದೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವರನ್ನು ನಾನು ಕೇಳಲು ಬಯಸುತ್ತೇನೆ.. ನಮ್ಮ ಕಾರ್ಯಕರ್ತರನ್ನು ಏಕೆ ಕೂಡಿ ಹಾಕಲಾಗಿದೆ? ಸೋಲಿನ ಭಯವೇ?
ಫಾರೂಕ್ ಅಬ್ದುಲ್ಲಾ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ
04:1913 May 2024

ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಕೇಂದ್ರ ಸಚಿವ ಕಿಶನ್ ರೆಡ್ಡಿ

ಸಿಕಂದರಾಬಾದ್‌ನ ಕಾಚೆಗುಡದಲ್ಲಿ ಕೇಂದ್ರ ಸಚಿವ ಕಿಶನ್ ಕುಮಾರ್ ರೆಡ್ಡಿ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.

ಸಿಕಂದರಾಬಾದ್‌ನ ಕಾಚೆಗುಡದಲ್ಲಿ ಕೇಂದ್ರ ಸಚಿವ ಕಿಶನ್ ಕುಮಾರ್ ರೆಡ್ಡಿ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.

– ಪಿಟಿಐ

ಅಖಿಲೇಶ್, ರಾಹುಲ್, ಓವೈಸಿಗೆ ಸೋಲು: ಸಾಕ್ಷಿ ಮಹಾರಾಜ್

400 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಕನೌಜ್‌ನಿಂದ ಅಖಿಲೇಶ್ ಯಾದವ್, ಮೈನ್‌ಪುರಿಯಿಂದ ಡಿಂಪಲ್ ಯಾದವ್, ರಾಯ್‌ಬರೇಲಿ ಮತ್ತು ವಯನಾಡ್‌ನಲ್ಲಿ ರಾಹುಲ್ ಗಾಂಧಿ ಮತ್ತು ಹೈದರಾಬಾದ್‌ನಿಂದ ಓವೈಸಿ - ಇವರೆಲ್ಲರೂ ಚುನಾವಣೆಯಲ್ಲಿ ಸೋಲಲಿದ್ದಾರೆ.
ಸಾಕ್ಷಿ ಮಹಾರಾಜ್, ಉನ್ನಾವ್ ಬಿಜೆಪಿ ಅಭ್ಯರ್ಥಿ
04:2613 May 2024

ರಾಜಕೀಯ ನಾಯಕರಿಂದ ಮತದಾನ

ಕಾಶ್ಮೀರದಲ್ಲಿ ಮತದಾನದ ಸಂಭ್ರಮ