ಸೋಮವಾರ 78 ಸದಸ್ಯರ ಅಮಾನತು
ಸಂಸತ್ನ ಭದ್ರತಾ ವೈಫಲ್ಯ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪಟ್ಟು ಹಿಡಿದು ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ 78 ಸದಸ್ಯರನ್ನು ಸೋಮವಾರ ಅಮಾನತು ಮಾಡಲಾಗಿತ್ತು.
ಅಶಿಸ್ತಿನ ವರ್ತನೆ ಹಾಗೂ ಸಭಾಪತಿ ನಿರ್ದೇಶನಗಳನ್ನು ಧಿಕ್ಕರಿಸಿದ ಕಾರಣಕ್ಕೆ ರಾಜ್ಯಸಭೆಯ 45 ಸದಸ್ಯರನ್ನು ಅಮಾನತುಗೊಳಿಸಲಾಗಿದೆ. 34 ಸದಸ್ಯರನ್ನು ಚಳಿಗಾಲದ ಉಳಿದ ಅಧಿವೇಶನದ ಅವಧಿಗೆ ಹೊರ ಹಾಕಲಾಗಿದೆ. 11 ಸದಸ್ಯರ ನಡವಳಿಕೆ ಪ್ರಕರಣವನ್ನು ಸದನದ ಹಕ್ಕುಬಾಧ್ಯತಾ ಸಮಿತಿಗೆ ನೀಡಲಾಗಿದ್ದು, ಆ ವರದಿ ಬರುವವರೆಗೆ ಸದನದಿಂದ ದೂರ ಉಳಿಯುವಂತೆ ಸೂಚಿಸಲಾಗಿದೆ.
ಅಮಾನತು, ವಿಪಕ್ಷಗಳ ಗದ್ದಲ, ಕೋಲಾಹಲದ ನಡುವೆಯೇ ದೂರಸಂಪರ್ಕ ಮಸೂದೆಯಂತಹ ಪ್ರಮುಖ ಮಸೂದೆಗಳನ್ನು ಕೇಂದ್ರ ಸರ್ಕಾರ ಮಂಡಿಸಿತು. ಕೇಂದ್ರಾಡಳಿತ ಪ್ರದೇಶ ಪುದುಚೆರಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ 33ರಷ್ಟು ಮಹಿಳಾ ಮೀಸಲಾತಿ ನೀಡುವ ಮಸೂದೆಗಳಿಗೆ ಹೆಚ್ಚಿನ ಚರ್ಚೆಯಿಲ್ಲದೆಯೇ ಅಂಗೀಕಾರ ಪಡೆಯಿತು.